6 C
London
Wednesday, April 24, 2024
Homeಕ್ರಿಕೆಟ್ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ದೇವದತ್ ಪಡಿಕಲ್ ಆಕರ್ಷಕ ಶತಕ ಕರ್ನಾಟಕಕ್ಕೆ 5 ವಿಕೆಟ್ ಗಳ...

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ದೇವದತ್ ಪಡಿಕಲ್ ಆಕರ್ಷಕ ಶತಕ ಕರ್ನಾಟಕಕ್ಕೆ 5 ವಿಕೆಟ್ ಗಳ ಜಯ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ದೇಶೀಯ ಕ್ರಿಕೆಟ್​ನ ಮಹತ್ವದ ಟಿ20 ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ 3 ನೇ ಪಂದ್ಯದಲ್ಲಿ ಕರ್ನಾಟಕ ಆಂಧ್ರಪ್ರದೇಶದ ವಿರುದ್ಧ ಭರ್ಜರಿ ಜಯಗಳಿಸಿದೆ. ವಿಶಾಖಪಟ್ಟಣದ ವೈ.ಎಸ್.ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಕರುಣನಾಯರ್ ಪಡೆ ಆಂಧ್ರಪ್ರದೇಶಕ್ಕೆ ಆರಂಭದಲ್ಲೇ ಆಘಾತನೀಡಿತು. 5 ರನ್ ಗ್ರ ಒಂದು ವಿಕೆಟ್ ಕಳೆದು ಸಂಕಷ್ಟದಲ್ಲಿದ್ದಾಗ ಆಂಧ್ರಪ್ರದೇಶಕ್ಕೆ ಅಶ್ವಿನ್ ಹೆಬ್ಬಾರ್ ಮತ್ತು ಪ್ರಶಾಂತ್ ಕುಮಾರ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಇವರಿಬ್ಬರ ನಡುವೆ ಬರೋಬ್ಬರಿ 141 ರನ್ ಗಳ ಜೊತೆಯಾಟ ಹರಿದು ಬಂದಿತ್ತು. ಅಂತಿಮವಾಗಿ ಆಂಧ್ರಪ್ರದೇಶ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತು. ಕರ್ನಾಟಕ ಪರ ವಿ. ಕೌಶಿಕ್ 3 ವಿಕೆಟ್ ಪಡೆದು ಆಂಧ್ರಪ್ರದೇಶಕ್ಕೆ ಕಡಿವಾಣ ಹಾಕಿದರು.

ಇದಕ್ಕೆ ಪ್ರತುತ್ಯರವಾಗಿ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಆರಂಭದಲ್ಲೇ ಮುಗ್ಗರಿಸಿತು. ಆರಂಭಿಕ ದಾಂಡಿಗರದ ರೋಹನ್ ಕದಂಬ ಮತ್ತು ಸಿಸೋಡಿಯಾ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. 7 ರನ್ ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕೆ ಗೌತಮ್ ಬಿರುಸಿನ ಆಟವಾಡಿ 35 ರನ್ ಗಳಿಸಿ ಸಸಿಕಾಂತ್ ಗೆ ವಿಕೆಟ್ ಕೊಟ್ಟು ಹೊರನಡೆದರು.

ಈ ಸಂದರ್ಭದಲ್ಲಿ ಕರ್ನಾಟಕಕ್ಕೆ ಯುವ ಪ್ರತಿಭೆ ದೇವದತ್ ಪಡಿಕಲ್ ಆಸರೆ ಆದರು. ದೇವದತ್ ಪಡಿಕಲ್ ಎದುರಿಸಿದ 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 13 ಬೌಂಡರಿ ಗಳ ನೆರವಿನಿಂದ ಆಕರ್ಷಕ 122 ರನ್ ಗಳಿಸಿ ಕರ್ನಾಟಕವನ್ನು ಗೆಲುವಿನತ್ತ ಕೊಂಡೊಯ್ದರು. ಆಂಧ್ರಪ್ರದೇಶ ಪರ ಸಿ. ಸ್ಟೆಪನ್ 2 ವಿಕೆಟ್ ಪಡೆದು ಕೊಂಡರು. ಅಂತಿಮವಾಗಿ ಕರ್ನಾಟಕ 18.5 ಓವರ್ ಗಳಲ್ಲಿ 5 ವಿಕೆಟ್ ಗಳನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿತು.

– ಪ್ರೀತಮ್ ಹೆಬ್ಬಾರ್.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − 2 =