ಶ್ರೀಲಂಕಾ-ಧನುಷ್ಕಾ ಸಂಪತ್ ಚಾಂಪಿಯನ್ಸ್ ಲೀಗ್ನಲ್ಲಿ ಬೆಂಗಳೂರಿನ BSC ಚಾಂಪಿಯನ್ - ಶ್ರೀಲಂಕಾದ ಕಟುನಾಯಕೆಯಲ್ಲಿ ನಡೆದ ಧನುಷ್ಕಾ ಸಂಪತ್ ಚಾಂಪಿಯನ್ಸ್ ಲೀಗ್ 2ನೇ ಆವೃತ್ತಿಯಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಸ್ಪೋರ್ಟ್ಸ್ ಕ್ಲಬ್ ಫೈನಲ್ನಲ್ಲಿ ಕೊಟ್ಟಾವ ಅಲಯನ್ಸ್ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತು; ಸಾಗರ್ ಭಂಡಾರಿ ಸರಣಿಶ್ರೇಷ್ಠ ಆಟಗಾರರಾಗಿ ಹೊರಹೊಮ್ಮಿದರು.
ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಪಾದಾರ್ಪಣೆ - ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್ನಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಂಡದ ಉಪನಾಯಕ ತಿಲಕ್ ವರ್ಮಾ ಅವರಿಗೆ ಚೊಚ್ಚಲ ಕ್ಯಾಪ್ ನೀಡಿದರು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಸೂರ್ಯವಂಶಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ವೈಭವ್ ಸೂರ್ಯವಂಶಿ, ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಭಾರತೀಯ ಆಟಗಾರ ಎಂಬ ಸಚಿನ್ ತೆಂಡೂಲ್ಕರ್ ಅವರ...
ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಹಿಮಾಂಶಿ ಚೌಧರಿ ಹಾಗೂ ಬಿ.ಆರ್. ಗೌರವ್ ಚಾಂಪಿಯನ್ - ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಮಂಗಳೂರು ಟೇಬಲ್ ಟೆನ್ನಿಸ್ ಅಕಾಡೆಮಿ, ಮಂಗಳೂರಿನಲ್ಲಿ ಜುಲೈ 1ರಿಂದ 4ರವರೆಗೆ ನಡೆಯುತ್ತಿರುವ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಎರಡನೇ ದಿನದ ಪಂದ್ಯಗಳಲ್ಲಿ ಅಂಡರ್-19 ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ರೋಚಕ ಹಣಾಹಣಿಗಳು ನಡೆದವು. ಅಂಡರ್-19 ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಹಿಮಾಂಶಿ ಚೌಧರಿ ಅವರು ರಾಶಿ ವಿ. ರಾವ್ ಅವರನ್ನು 9-11, 11-6, 11-13, 12-10, 11-6,...
ಹಿರಿಯ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಅವರಿಗೆ ‘ಪತ್ರಿಕಾ ದಿನದ ಪ್ರಶಸ್ತಿ - ಮಂಗಳೂರು, ಜುಲೈ 2: ಕನ್ನಡ ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಕ್ರೀಡಾ ವರದಿಗಾರ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೋಮಶೇಖರ್ ಪಡುಕರೆ ಅವರಿಗೆ 2026ನೇ ಸಾಲಿನ ‘ಪತ್ರಿಕಾ ದಿನದ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ. ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘವು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜುಲೈ 9ರಂದು ಬ್ರಹ್ಮಾವರದ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಆಯೋಜಿಸಿರುವ...