ಶ್ರೀಲಂಕಾ-ಧನುಷ್ಕಾ ಸಂಪತ್ ಚಾಂಪಿಯನ್ಸ್ ಲೀಗ್ನಲ್ಲಿ ಬೆಂಗಳೂರಿನ BSC ಚಾಂಪಿಯನ್ - ಶ್ರೀಲಂಕಾದ ಕಟುನಾಯಕೆಯಲ್ಲಿ ನಡೆದ ಧನುಷ್ಕಾ ಸಂಪತ್ ಚಾಂಪಿಯನ್ಸ್ ಲೀಗ್ 2ನೇ ಆವೃತ್ತಿಯಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಸ್ಪೋರ್ಟ್ಸ್ ಕ್ಲಬ್ ಫೈನಲ್ನಲ್ಲಿ ಕೊಟ್ಟಾವ ಅಲಯನ್ಸ್ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದುಕೊಂಡಿತು; ಸಾಗರ್ ಭಂಡಾರಿ ಸರಣಿಶ್ರೇಷ್ಠ ಆಟಗಾರರಾಗಿ ಹೊರಹೊಮ್ಮಿದರು.
ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಪಾದಾರ್ಪಣೆ - ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧ ಮ್ಯಾಂಚೆಸ್ಟರ್ನಲ್ಲಿ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಂಡದ ಉಪನಾಯಕ ತಿಲಕ್ ವರ್ಮಾ ಅವರಿಗೆ ಚೊಚ್ಚಲ ಕ್ಯಾಪ್ ನೀಡಿದರು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಸೂರ್ಯವಂಶಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಮೂಲಕ ವೈಭವ್ ಸೂರ್ಯವಂಶಿ, ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಭಾರತೀಯ ಆಟಗಾರ ಎಂಬ ಸಚಿನ್ ತೆಂಡೂಲ್ಕರ್ ಅವರ...
ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿ: ಹಿಮಾಂಶಿ ಚೌಧರಿ ಹಾಗೂ ಬಿ.ಆರ್. ಗೌರವ್ ಚಾಂಪಿಯನ್ - ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಮಂಗಳೂರು ಟೇಬಲ್ ಟೆನ್ನಿಸ್ ಅಕಾಡೆಮಿ, ಮಂಗಳೂರಿನಲ್ಲಿ ಜುಲೈ 1ರಿಂದ 4ರವರೆಗೆ ನಡೆಯುತ್ತಿರುವ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಎರಡನೇ ದಿನದ ಪಂದ್ಯಗಳಲ್ಲಿ ಅಂಡರ್-19 ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ರೋಚಕ ಹಣಾಹಣಿಗಳು ನಡೆದವು. ಅಂಡರ್-19 ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಹಿಮಾಂಶಿ ಚೌಧರಿ ಅವರು ರಾಶಿ ವಿ. ರಾವ್ ಅವರನ್ನು 9-11, 11-6, 11-13, 12-10, 11-6,...
ಹಿರಿಯ ಕ್ರೀಡಾ ವರದಿಗಾರ ಸೋಮಶೇಖರ್ ಪಡುಕರೆ ಅವರಿಗೆ ‘ಪತ್ರಿಕಾ ದಿನದ ಪ್ರಶಸ್ತಿ - ಮಂಗಳೂರು, ಜುಲೈ 2: ಕನ್ನಡ ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹಿರಿಯ ಕ್ರೀಡಾ ವರದಿಗಾರ ಹಾಗೂ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೋಮಶೇಖರ್ ಪಡುಕರೆ ಅವರಿಗೆ 2026ನೇ ಸಾಲಿನ ‘ಪತ್ರಿಕಾ ದಿನದ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದೆ. ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘವು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜುಲೈ 9ರಂದು ಬ್ರಹ್ಮಾವರದ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಆಯೋಜಿಸಿರುವ...
ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿ ಮಂಗಳೂರಿನಲ್ಲಿ ಆರಂಭ - ಮಂಗಳೂರು, ಜುಲೈ 2: ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ನ ಆಶ್ರಯದಲ್ಲಿ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಪಂದ್ಯಾವಳಿಯು ಬುಧವಾರ ನಗರದ ಕೊಟ್ಟಾರ ಪಡುಕೋಡಿಯಲ್ಲಿರುವ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಶುಭಾರಂಭಗೊಂಡಿತು. ಪಂದ್ಯಾವಳಿಯ ಮೊದಲ ದಿನ ಮಹಿಳೆಯರ ಸಿಂಗಲ್ಸ್ ವಿಭಾಗದ ಪಂದ್ಯಗಳೊಂದಿಗೆ ಸ್ಪರ್ಧೆಗಳು ಆರಂಭಗೊಂಡು, ಬಳಿಕ 19 ವರ್ಷದೊಳಗಿನ ಬಾಲಕರ ಹಾಗೂ ಬಾಲಕಿಯರ ವಿಭಾಗ, ಪುರುಷರ ಸಿಂಗಲ್ಸ್ ಮತ್ತು ಎನ್ಎಂಎಸ್ ವಿಭಾಗಗಳ ಪಂದ್ಯಗಳು ನಡೆಯಿತು. ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ...
ಹರಿದ ಸ್ಲಿಪ್ಪರ್.. ಹರಕಲು ಸೈಕಲ್.. ಪೀಣ್ಯ to ಟೀಮ್ ಇಂಡಿಯಾ via ಚಿನ್ನಸ್ವಾಮಿ..! - ಇದು ಕರ್ನಾಟಕದ ಶ್ರೇಷ್ಠ ಕ್ರಿಕೆಟ್ ಯೋಧನ ‘ದೊಡ್ಡ’ ಕಥೆ..! ಇವತ್ತು ಕರ್ನಾಟಕದ The most celebrated cricketer, ರಾಜ್ಯ ಕ್ರಿಕೆಟ್’ನ ಸಾರ್ವಕಾಲಿಕ ಶ್ರೇಷ್ಠ ಮ್ಯಾಚ್ ವಿನ್ನರ್’ಗಳಲ್ಲಿ ಒಬ್ಬರಾಗಿರುವ ದೊಡ್ಡ ಗಣೇಶ್ ಅವರ ಹುಟ್ಟುಹಬ್ಬ. ಇದು ದೊಡ್ಡ ಗಣೇಶ್ ಅವರ ಬಗ್ಗೆ ಕಳೆದ ವರ್ಷ ಬರೆದಿದ್ದ ಬರಹ.. ಕರ್ನಾಟಕ ತಂಡದ 10 ವರ್ಷಗಳ ಹಿಂದಿನ ರಣಜಿ ಗತವೈಭವಕ್ಕೆ ಸಾಕ್ಷಿಯಾಗಿದ್ದು ನನ್ನ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದು. ವೃತ್ತಿ ಸಂಬಂಧ ಕಾರಣಗಳಿಗೆ...