Action Replayಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

ಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

-

- Advertisment -spot_img

ಕುಂದಾಪುರ : ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಚಕ್ರಾಧಿಪತ್ಯ ಮೆರೆದ ತಂಡ ಚಕ್ರವರ್ತಿ ಕುಂದಾಪುರ.ದಶಕಗಳ ಕಾಲ ತಂಡವನ್ನು ಮುನ್ನಡೆಸಿ ಕುಂದಾಪುರದ ಕೀರ್ತಿಯನ್ನು ರಾಜ್ಯ ರಾಷ್ಟ್ರದೆಲ್ಲೆಡೆ ಪಸರಿಸಿದ ನಾಯಕ ಶ್ರೀಪಾದ ಉಪಾಧ್ಯಾಯ.

ಟೆನ್ನಿಸ್ ಕ್ರಿಕೆಟ್ ನ ಹಲವಾರು ತಾರೆಗಳ ಭವಿಷ್ಯ ರೂಪಿಸಿದ ಅಂಗಣ ಉಡುಪಿಯ ಅಜ್ಜರಕಾಡಿನ ಮೈದಾನ.1996 ರಲ್ಲಿ ಕರಾವಳಿ ಕ್ರಿಕೆಟರ್ಸ್ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿದ್ದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಉಡುಪಿಯ ದುರ್ಗಾ ಕ್ರಿಕೆಟರ್ಸ್ 10 ಓವರ್ ಗಳಲ್ಲಿ 32 ರನ್ ಗಳಿಸಿ ಆಲೌಟ್ ಆಗಿತ್ತು.
ಆರಂಭಿಕ ದಾಂಡಿಗನಾಗಿ ಅಂಗಣಕ್ಕಿಳಿದ ನಾಯಕ ಹಾಗೂ ಆಲ್ ರೌಂಡರ್ ಶ್ರೀಪಾದ ಉಪಾಧ್ಯಾಯರವರು ಮೊದಲ ನಾಲ್ಕು ಎಸೆತಗಳಲ್ಲಿ ಅಜ್ಜರಕಾಡು ಅಂಗಣದ ಮೂಲೆ ಮೂಲೆಗೂ ನಾಲ್ಕು ಸಿಕ್ಸರ್ ಸಿಡಿಸಿ,ಎಸೆತಗಾರ ಐದನೇ ಎಸೆತ ವೈಡ್ ಎಸೆದರೆ,ಮತ್ತೆ ಮುಂದಿನ ಎರಡು ಎಸೆತಗಳಲ್ಲಿ ಮತ್ತೆರಡು ಸಿಕ್ಸರ್ ಬಾರಿಸಿ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನಲ್ಲಿ ದಾಖಲೆ ಬರೆದರು.ಪಂದ್ಯ ಒಂದೇ ಓವರ್ ನಲ್ಲಿ ಮುಕ್ತಾಯ ಕಂಡಿತ್ತು.ನಂತರದ ದಿನಗಳಲ್ಲಿ ಉಪಾಧ್ಯಾಯರಿಗೆ ಬೌಲಿಂಗ್ ಮಾಡಲು ಎಸೆತಗಾರರು ಅಂಜುವ ದಿನಗಳಿತ್ತು.

ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್ ವಿಭಾಗದಲ್ಲಿಯೂ ಬಹಳಷ್ಟು ಸಾಧನೆಗೈದ ಕೀರ್ತಿ ಉಪಾಧ್ಯಾಯರಿಗೆ ಸಲ್ಲುತ್ತದೆ.ನಾಯಕನಾಗಿ ರಾಜ್ಯದ ನೂರಾರು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪಂದ್ಯಾಕೂಟಗಳಲ್ಲಿ ಇವರ ಸಾರಥ್ಯದಲ್ಲಿ ಯಶಸ್ಸನ್ನು ಸಾಧಿಸಿತ್ತು.

ಪ್ರಸ್ತುತ (Above-40),ಹಾಗೂ ರೋಟರಿ ಪಂದ್ಯಾಕೂಟಗಳಲ್ಲಿ ಪಾಲ್ಗೊಳ್ಳುವ ಉಪಾಧ್ಯಾಯರು ಯಶಸ್ಸಿನ ಯಶೋಗಾಥೆ ಬರೆದ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಮಹಾನ್ ನಾಯಕ.

ಶ್ರೀಪಾದ ಉಪಾಧ್ಯಾಯರಿಗೆ “ಸ್ಪೋರ್ಟ್ಸ್ ಕನ್ನಡ” ಕ್ರೀಡಾ ವೆಬ್ಸೈಟ್ ನ ಪರವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

 

ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 − two =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you