Action Replayಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

ಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

-

- Advertisment -spot_img

ಕುಂದಾಪುರ : ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಚಕ್ರಾಧಿಪತ್ಯ ಮೆರೆದ ತಂಡ ಚಕ್ರವರ್ತಿ ಕುಂದಾಪುರ.ದಶಕಗಳ ಕಾಲ ತಂಡವನ್ನು ಮುನ್ನಡೆಸಿ ಕುಂದಾಪುರದ ಕೀರ್ತಿಯನ್ನು ರಾಜ್ಯ ರಾಷ್ಟ್ರದೆಲ್ಲೆಡೆ ಪಸರಿಸಿದ ನಾಯಕ ಶ್ರೀಪಾದ ಉಪಾಧ್ಯಾಯ.

ಟೆನ್ನಿಸ್ ಕ್ರಿಕೆಟ್ ನ ಹಲವಾರು ತಾರೆಗಳ ಭವಿಷ್ಯ ರೂಪಿಸಿದ ಅಂಗಣ ಉಡುಪಿಯ ಅಜ್ಜರಕಾಡಿನ ಮೈದಾನ.1996 ರಲ್ಲಿ ಕರಾವಳಿ ಕ್ರಿಕೆಟರ್ಸ್ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿದ್ದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಉಡುಪಿಯ ದುರ್ಗಾ ಕ್ರಿಕೆಟರ್ಸ್ 10 ಓವರ್ ಗಳಲ್ಲಿ 32 ರನ್ ಗಳಿಸಿ ಆಲೌಟ್ ಆಗಿತ್ತು.
ಆರಂಭಿಕ ದಾಂಡಿಗನಾಗಿ ಅಂಗಣಕ್ಕಿಳಿದ ನಾಯಕ ಹಾಗೂ ಆಲ್ ರೌಂಡರ್ ಶ್ರೀಪಾದ ಉಪಾಧ್ಯಾಯರವರು ಮೊದಲ ನಾಲ್ಕು ಎಸೆತಗಳಲ್ಲಿ ಅಜ್ಜರಕಾಡು ಅಂಗಣದ ಮೂಲೆ ಮೂಲೆಗೂ ನಾಲ್ಕು ಸಿಕ್ಸರ್ ಸಿಡಿಸಿ,ಎಸೆತಗಾರ ಐದನೇ ಎಸೆತ ವೈಡ್ ಎಸೆದರೆ,ಮತ್ತೆ ಮುಂದಿನ ಎರಡು ಎಸೆತಗಳಲ್ಲಿ ಮತ್ತೆರಡು ಸಿಕ್ಸರ್ ಬಾರಿಸಿ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನಲ್ಲಿ ದಾಖಲೆ ಬರೆದರು.ಪಂದ್ಯ ಒಂದೇ ಓವರ್ ನಲ್ಲಿ ಮುಕ್ತಾಯ ಕಂಡಿತ್ತು.ನಂತರದ ದಿನಗಳಲ್ಲಿ ಉಪಾಧ್ಯಾಯರಿಗೆ ಬೌಲಿಂಗ್ ಮಾಡಲು ಎಸೆತಗಾರರು ಅಂಜುವ ದಿನಗಳಿತ್ತು.

ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್ ವಿಭಾಗದಲ್ಲಿಯೂ ಬಹಳಷ್ಟು ಸಾಧನೆಗೈದ ಕೀರ್ತಿ ಉಪಾಧ್ಯಾಯರಿಗೆ ಸಲ್ಲುತ್ತದೆ.ನಾಯಕನಾಗಿ ರಾಜ್ಯದ ನೂರಾರು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪಂದ್ಯಾಕೂಟಗಳಲ್ಲಿ ಇವರ ಸಾರಥ್ಯದಲ್ಲಿ ಯಶಸ್ಸನ್ನು ಸಾಧಿಸಿತ್ತು.

ಪ್ರಸ್ತುತ (Above-40),ಹಾಗೂ ರೋಟರಿ ಪಂದ್ಯಾಕೂಟಗಳಲ್ಲಿ ಪಾಲ್ಗೊಳ್ಳುವ ಉಪಾಧ್ಯಾಯರು ಯಶಸ್ಸಿನ ಯಶೋಗಾಥೆ ಬರೆದ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಮಹಾನ್ ನಾಯಕ.

ಶ್ರೀಪಾದ ಉಪಾಧ್ಯಾಯರಿಗೆ “ಸ್ಪೋರ್ಟ್ಸ್ ಕನ್ನಡ” ಕ್ರೀಡಾ ವೆಬ್ಸೈಟ್ ನ ಪರವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

 

ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

3 × 2 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you