ಬ್ಯಾಡ್ಮಿಂಟನ್ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಿ : ಶಂಕರನಾರಾಯಣ

ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಿ : ಶಂಕರನಾರಾಯಣ

-

- Advertisment -spot_img

ಹಳೆಯಂಗಡಿ : ಟಾರ್ಪೋಡಸ್ ಸ್ಪೋರ್ಟ್ಸ್ ಕ್ಲಬ್‍ನ ಸಂಯೋಜನೆಯಲ್ಲಿ ಕ್ಲಬ್ ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಅಂತರ್ ಶಾಲಾ ಮಟ್ಟದ ಶಟ್ಲ ಬಾಡ್ಮಿಂಟನ್ ಸ್ಪರ್ಧೆಯ ಸಮಾರೋಪ ನಡೆಯಿತು.

ಕುಂದಾಪುರ ಭಂಡಾರಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಕ ನಿರ್ದೇಶಕ ಶಂಕರನಾರಾಯಣ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕ್ರೀಡೆಯಿಂದ ಮನೋಬಲ ಹೆಚ್ಚಾಗಿದ್ದು, ಸೂಕ್ತ ವಯೋಮಾನದವರೆಗೂ ಕ್ರೀಡೆಯಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿರಿ. ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಬಹುವುದು ಎಂದರು.

ಎನ್.ಎಂ.ಪಿ.ಟಿ.ಯ ವಾಲಿಬಾಲ್ ಕ್ರೀಡಾಪಟು ಭರತ್ ಅವರ ಕ್ರೀಡಾ ಜೀವನದ ಅನುಭವಗಳನ್ನು ಮಕ್ಕಳ ಜೊತೆಗೆ ಹಂಚಿಕೊಂಡದರು.

ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರ ಪ್ರತ್ಯೇಕ ಸ್ಪರ್ಧೆಯಲ್ಲಿ ಸಿಂಗಲ್ಸ್, ಡಬಲ್ಸ್ ಹಾಗೂ ರಿವಸ್ರ್ಸ್ ಸಿಂಗಲ್ಸ್ ವಿಭಾಗದಲ್ಲಿ ಒಟ್ಟು 16 ವಿವಿಧ ಶಾಲೆಯ 235 ಮಕ್ಕಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದಾಮೋದರ, ಎ.ಎನ್.ಎಂ.ಪಿ.ಟಿ, ಟಾರ್ಪೋಡೇಸ್ ಸ್ಪೋಟ್ರ್ಸ್ ಕ್ಲಬ್‍ನ ನಿರ್ದೇಶಕ ನಾಗಭೂಷಣ್ ಮತ್ತು ರೆಡ್ಡಿ, ಚಂದ್ರಶೇಖರ ಸಜ್ಚಾ, ಸ್ಪರ್ಧಾ ಸಹ ಸಂಯೋಜಕ ಗಣೇಶ್ ಕಾಮತ್, ಬಾಡ್ಮಿಂಟನ್ ತರಬೇತಿದಾರ ಸಂತೋಷ್ ಖಾರ್ವಿ, ಟೇಬಲ್ ಟೆನ್ನಿಸ್ ತರಬೇತಿದಾರ ಅಶ್ವಿನ್ ಪಡುಕೋಣೆ, ಕೆ.ಪಿ. ಸತೀಶ್, ದೀಪಕ್ ಕೋಟ್ಯಾನ್, ಭಾಗ್ಯರಾಜ್, ನವನೀತ್, ಕಾರ್ತಿಕ್ ಹಾಗೂ ಮೊದಲಾದವರು ಇದ್ದರು.

ಟಾರ್ಪೋಡಸ್ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷ ಗೌತಮ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಫಲಿತಾಂಶ

ಬಾಲಕರ ವಿಭಾಗ – ಮಿಲಾಗ್ರಸ್ ಕಲ್ಯಾಣಪುರ ಉಡುಪಿ ಪ್ರಥಮ ಸ್ಥಾನ , ಸೈ ಅಲೋಶಿಯಸ್ ಮಂಗಳೂರು ದ್ವಿತೀಯ ಸ್ಥಾನ, ವಿದ್ಯಾದಯ ಪಬ್ಲಿಕ್ ಸ್ಕೂಲ್ ಹಾಗೂ ಅಮೃತಾ ವಿದ್ಯಾಲಯ ಮಂಗಳೂರು ತೃತೀಯಾ ಸ್ಥಾನ.

ಬಾಲಕಿಯರ ವಿಭಾಗ : ಹೋಲಿ ರೋಜಾರಿಯೋ ಕುಂದಾಪುರ ಪ್ರಥಮ ಸ್ಥಾನ, ಡಾ. ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ತೋಕೂರು, ತಪೋವನ ದ್ವಿತೀಯ ಸ್ಥಾನ, ಮಣಿಪಾಲ ಸ್ಕೂಲ್ ಅತ್ತಾವರ, ಮೇರಿವೆಲ್ ಪ್ರೌಢಶಾಲೆ ಕಿನ್ನಿಗೊಳಿ ತೃತೀಯ ಸ್ಥಾನ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × three =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you