ಬ್ಯಾಡ್ಮಿಂಟನ್ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಿ : ಶಂಕರನಾರಾಯಣ

ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಿ : ಶಂಕರನಾರಾಯಣ

-

- Advertisment -spot_img

ಹಳೆಯಂಗಡಿ : ಟಾರ್ಪೋಡಸ್ ಸ್ಪೋರ್ಟ್ಸ್ ಕ್ಲಬ್‍ನ ಸಂಯೋಜನೆಯಲ್ಲಿ ಕ್ಲಬ್ ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಅಂತರ್ ಶಾಲಾ ಮಟ್ಟದ ಶಟ್ಲ ಬಾಡ್ಮಿಂಟನ್ ಸ್ಪರ್ಧೆಯ ಸಮಾರೋಪ ನಡೆಯಿತು.

ಕುಂದಾಪುರ ಭಂಡಾರಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಕ ನಿರ್ದೇಶಕ ಶಂಕರನಾರಾಯಣ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕ್ರೀಡೆಯಿಂದ ಮನೋಬಲ ಹೆಚ್ಚಾಗಿದ್ದು, ಸೂಕ್ತ ವಯೋಮಾನದವರೆಗೂ ಕ್ರೀಡೆಯಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳಿರಿ. ದೇಹದ ಅಲಸ್ಯವನ್ನು ಕ್ರೀಡೆಯಿಂದ ನಿಯಂತ್ರಿಸಬಹುವುದು ಎಂದರು.

ಎನ್.ಎಂ.ಪಿ.ಟಿ.ಯ ವಾಲಿಬಾಲ್ ಕ್ರೀಡಾಪಟು ಭರತ್ ಅವರ ಕ್ರೀಡಾ ಜೀವನದ ಅನುಭವಗಳನ್ನು ಮಕ್ಕಳ ಜೊತೆಗೆ ಹಂಚಿಕೊಂಡದರು.

ಸ್ಪರ್ಧೆಯಲ್ಲಿ ಬಾಲಕ ಮತ್ತು ಬಾಲಕಿಯರ ಪ್ರತ್ಯೇಕ ಸ್ಪರ್ಧೆಯಲ್ಲಿ ಸಿಂಗಲ್ಸ್, ಡಬಲ್ಸ್ ಹಾಗೂ ರಿವಸ್ರ್ಸ್ ಸಿಂಗಲ್ಸ್ ವಿಭಾಗದಲ್ಲಿ ಒಟ್ಟು 16 ವಿವಿಧ ಶಾಲೆಯ 235 ಮಕ್ಕಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದಾಮೋದರ, ಎ.ಎನ್.ಎಂ.ಪಿ.ಟಿ, ಟಾರ್ಪೋಡೇಸ್ ಸ್ಪೋಟ್ರ್ಸ್ ಕ್ಲಬ್‍ನ ನಿರ್ದೇಶಕ ನಾಗಭೂಷಣ್ ಮತ್ತು ರೆಡ್ಡಿ, ಚಂದ್ರಶೇಖರ ಸಜ್ಚಾ, ಸ್ಪರ್ಧಾ ಸಹ ಸಂಯೋಜಕ ಗಣೇಶ್ ಕಾಮತ್, ಬಾಡ್ಮಿಂಟನ್ ತರಬೇತಿದಾರ ಸಂತೋಷ್ ಖಾರ್ವಿ, ಟೇಬಲ್ ಟೆನ್ನಿಸ್ ತರಬೇತಿದಾರ ಅಶ್ವಿನ್ ಪಡುಕೋಣೆ, ಕೆ.ಪಿ. ಸತೀಶ್, ದೀಪಕ್ ಕೋಟ್ಯಾನ್, ಭಾಗ್ಯರಾಜ್, ನವನೀತ್, ಕಾರ್ತಿಕ್ ಹಾಗೂ ಮೊದಲಾದವರು ಇದ್ದರು.

ಟಾರ್ಪೋಡಸ್ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷ ಗೌತಮ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಫಲಿತಾಂಶ

ಬಾಲಕರ ವಿಭಾಗ – ಮಿಲಾಗ್ರಸ್ ಕಲ್ಯಾಣಪುರ ಉಡುಪಿ ಪ್ರಥಮ ಸ್ಥಾನ , ಸೈ ಅಲೋಶಿಯಸ್ ಮಂಗಳೂರು ದ್ವಿತೀಯ ಸ್ಥಾನ, ವಿದ್ಯಾದಯ ಪಬ್ಲಿಕ್ ಸ್ಕೂಲ್ ಹಾಗೂ ಅಮೃತಾ ವಿದ್ಯಾಲಯ ಮಂಗಳೂರು ತೃತೀಯಾ ಸ್ಥಾನ.

ಬಾಲಕಿಯರ ವಿಭಾಗ : ಹೋಲಿ ರೋಜಾರಿಯೋ ಕುಂದಾಪುರ ಪ್ರಥಮ ಸ್ಥಾನ, ಡಾ. ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ತೋಕೂರು, ತಪೋವನ ದ್ವಿತೀಯ ಸ್ಥಾನ, ಮಣಿಪಾಲ ಸ್ಕೂಲ್ ಅತ್ತಾವರ, ಮೇರಿವೆಲ್ ಪ್ರೌಢಶಾಲೆ ಕಿನ್ನಿಗೊಳಿ ತೃತೀಯ ಸ್ಥಾನ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 − 16 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you