ಕ್ರಿಕೆಟ್ಸ್ವಯಂಕೃತ ಪ್ರಮಾದಕ್ಕೆ ಬೆಲೆ ತೆತ್ತ ರಾಹುಲ್!

ಸ್ವಯಂಕೃತ ಪ್ರಮಾದಕ್ಕೆ ಬೆಲೆ ತೆತ್ತ ರಾಹುಲ್!

-

- Advertisment -spot_img

ಸ್ವಯಂಕೃತ ಪ್ರಮಾದಕ್ಕೆ ಬೆಲೆ ತೆತ್ತ ರಾಹುಲ್!

ಹಾಗೆ ನೋಡಿದರೆ ಕನ್ನಡಿಗ ಕೆ.ಎಲ್ ರಾಹುಲ್ ದಯನೀಯ ವೈಫಲ್ಯವನ್ನೇನೂ ಎದುರಿಸಿರಲಿಲ್ಲ. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಎಡವಿದರೂ ರಾಹುಲ್ ಅವರ ಇತ್ತೀಚಿನ 10 ಟೆಸ್ಟ್ ಇನ್ನಿಂಗ್ಸ್’ಗಳ ಆಟ ನಾಯಕ ರೋಹಿತ್ ಶರ್ಮಾಗಿಂತ ಉತ್ತಮವಾಗಿಯೇ ಇತ್ತು.

 

ಕಳೆದ 10 ಟೆಸ್ಟ್ ಇನ್ನಿಂಗ್ಸ್’ಗಳಲ್ಲಿ ರಾಹುಲ್ 339 ರನ್ ಕಲೆ ಹಾಕಿದ್ದರೆ, ನಾಯಕ ರೋಹಿತ್ ಶರ್ಮಾ ಕೇವಲ 275 ರನ್ ಗಳಿಸಿದ್ದಾರೆ.

 

 

ಇದರ ಮಧ್ಯೆಯೂ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಆರಂಭಗೊಂಡ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಆಡುವ ಬಳಗದಿಂದ ರಾಹುಲ್ ಅವರನ್ನು ಕೈ ಬಿಡಲಾಗಿದೆ.

ಹಾಗಾದರೆ ವಿರಾಟ್ ಕೊಹ್ಲಿ ಬಳಿಕ ಟೀಮ್ ಇಂಡಿಯಾದ ಬೆಸ್ಟ್ ಬ್ಯಾಟ್ಸ್’ಮನ್ ಎಂದೇ ಕರೆಸಿಕೊಂಡಿದ್ದ ರಾಹುಲ್ ಅವರಿಗೆ ಪ್ಲೇಯಿಂಗ್ ಇಲೆವೆನ್’ನಲ್ಲಿ ಸ್ಥಾನ ಕಳೆದುಕೊಳ್ಳುವಂತಹ ದಯನೀಯ ಸ್ಥಿತಿ ಎದುರಾಗಿದ್ದೇಕೆ? ಕಾರಣ ಸ್ಪಷ್ಟ. ಇದು ಸ್ವತಃ ರಾಹುಲ್ ಅವರ ಸ್ವಯಂಕೃತ ಪ್ರಮಾದ.

ಈಗಿನ ಭಾರತ ತಂಡದಲ್ಲಿ ರಾಹುಲ್ ಅವರನ್ನು ಟೀಕೆಗಳನ್ನೆದುರಿಸಿ ಮತ್ತೊಬ್ಬ ಆಟಗಾರನಿಲ್ಲ. ಉತ್ತಮವಾಗಿ ಆಡಿದರೂ ನಿಂದನೆ. ಇನ್ನು ಆಡದಿದ್ದರಂತೂ ಕೇಳುವುದೇ ಬೇಡ. ಭಾರತ ತಂಡದ ಟೀಮ್ ಮ್ಯಾನೇಜ್ಮೆಂಟ್ ಕೂಡ ಅಷ್ಟೇ. ಪದೇ ಪದೇ ರಾಹುಲ್ ಅವರ ಬ್ಯಾಟಿಂಗ್ ಕ್ರಮಾಂಕಗಳನ್ನು ಬದಲಿಸುತ್ತಾ ಅವರ ಕ್ರಿಕೆಟ್ ವೃತ್ತಿಜೀವನದಲ್ಲಿ ಚೆಲ್ಲಾಟವಾಡುತ್ತಲೇ ಬಂದಿದೆ.

ಆದರೆ ರಾಹುಲ್.. ಎಂಥದ್ದೇ ಪರಿಸ್ಥಿತಿಯಲ್ಲೂ ಸಾಮರ್ಥ್ಯ ಸಾಬೀತು ಪಡಿಸುವ ತಾಕತ್ತಿನ ಆಟಗಾರ. ತಂಡ ತನ್ನ ಮೇಲೆ ಯಾವುದೇ ಜವಾಬ್ದಾರಿ ವಹಿಸಿದರೂ ಅದಕ್ಕೆ ಬೆನ್ನು ತೋರಿಸದೆ ನಿಂತ ಕ್ರಿಕೆಟಿಗ. ಹೀಗಿರುವಾಗ ರನ್ ಗಳಿಸುವುದೊಂದೇ ರಾಹುಲ್ ಮುಂದಿದ್ದ ದಾರಿ. ಅದರಲ್ಲೂ ತಮ್ಮ ಮೇಲೆ ಕೋಟ್ಯಂತರ ಟೀಕೆಗಳ ಕಣ್ಣುಗಳು ನೆಟ್ಟಿರುವಾಗ ರಾಹುಲ್ ರನ್ ಗಳಿಸಲೇಬೇಕು. ಅದನ್ನು ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಕಳೆದ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಮಾಡಿಲ್ಲ. ಪ್ರಥಮ ಇನ್ನಿಂಗ್ಸ್’ನಲ್ಲಿ ಶೂನ್ಯಕ್ಕೆ ಔಟಾಗಿದ್ದ ರಾಹುಲ್, ದ್ವಿತೀಯ ಇನ್ನಿಂಗ್ಸ್’ನಲ್ಲಿ ಗಳಿಸಿದ್ದು ಕೇವಲ 12 ರನ್. ಈ ವೈಫಲ್ಯಕ್ಕೆ ರಾಹುಲ್ ಬೆಲೆ ತೆತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ್ದ ಸರ್ಫರಾಜ್ ಖಾನ್’ರನ್ನು ಪ್ಲೇಯಿಂಗ್ ಇಲೆವೆನ್’ನಿಂದ ಕೈ ಬಿಡುವಂತಿರಲಿಲ್ಲ. ಶುಭಮನ್ ಗಿಲ್’ರನ್ನು ಆಡಿಸಬೇಕಿತ್ತು . ಪರಿಣಾಮ, ಒಂದೇ ಟೆಸ್ಟ್ ಪಂದ್ಯದ ವೈಫಲ್ಯಕ್ಕೆ ರಾಹುಲ್ ಬಲಿಪಶುವಾಗಿದ್ದಾರೆ.

LEAVE A REPLY

Please enter your comment!
Please enter your name here

nine − 3 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you