ಕ್ರಿಕೆಟ್ಡಿಸೆಂಬರ್ 23,24 ಹಾಗೂ 25  ಕೋಲಾರದ ಸೋಮಯಾಜಲಹಳ್ಳಿಯಲ್ಲಿ ಧೋನಿ ಪ್ರೀಮಿಯರ್ ಲೀಗ್...

ಡಿಸೆಂಬರ್ 23,24 ಹಾಗೂ 25  ಕೋಲಾರದ ಸೋಮಯಾಜಲಹಳ್ಳಿಯಲ್ಲಿ ಧೋನಿ ಪ್ರೀಮಿಯರ್ ಲೀಗ್ – 2019 

-

- Advertisment -spot_img

ಚಿನ್ನದ ನಿಕ್ಷೇಪಗಳನ್ನು ಆವಿಷ್ಕರಿಸಿದ್ದ ಕೋಲಾರದ ಮಣ್ಣಿನಲ್ಲಿ ಯುವ ಪ್ರತಿಭೆಗಳ ಅನ್ವೇಷಣೆ ಕಳೆದ ಋತುವಿನಿಂದ ಪ್ರಾರಂಭವಾಗಿದೆ. ಭಾರತೀಯ ತಂಡದ ಯಶಸ್ವಿ ಕಪ್ತಾನ,ಚಮತ್ಕಾರಿ ಗೂಟ ರಕ್ಷಕ ಮಹೇಂದ್ರ ಸಿಂಗ್ ಧೋನಿ ಅಭಿಮಾನಪೂರ್ವಕವಾಗಿ, ಶಾಮೀರ್ ಮಾಲೀಕತ್ವದ S.A.S ಹಾಗೂ SPL ರೂವಾರಿ MKS ಗ್ರೂಪ್ ನ ಮಾಲೀಕ ನದೀಮ್ ಅಖ್ತರ್ ಇವರೀರ್ವರ ದಕ್ಷ ಸಾರಥ್ಯದಲ್ಲಿ ಡಿಸೆಂಬರ್ 23,24 ಹಾಗೂ 25 ರಂದು ಕೋಲಾರದ ಸೋಮಯಾಜಲಹಳ್ಳಿಯ ಈಡನ್ ಗಾರ್ಡನ್ ಅಂಗಣದಲ್ಲಿ 3 ದಿನಗಳ ಕ್ರಿಕೆಟ್ ಪಂದ್ಯಾವಳಿ ಧೋನಿ ಪ್ರೀಮಿಯರ್ ಲೀಗ್-2019 ನಡೆಯಲಿದೆ.

ಕೋಲಾರ ಜಿಲ್ಲೆಯ ಆಟಗಾರರಿಗೆ ಸೀಮಿತವಾಗಿರುವ ಈ ಪಂದ್ಯಾವಳಿಯಲ್ಲಿ ಶ್ರೀನಿವಾಸಪುರ ತಾಲ್ಲೂಕಿನ 9 ಆಟಗಾರರಿಗೆ ಒಂದೊಂದು ತಂಡದಲ್ಲಿ ಅವಕಾಶ ನೀಡಲಾಗಿದ್ದು, 8 ಫ್ರಾಂಚೈಸಿಗಳು ಸ್ಪರ್ಧಿಸಲಿದೆ. ಕಳೆದ ವಾರ ಹಿರಿಯ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ಇವರಿಂದ ಆಕ್ಷನ್ ಪ್ರಕ್ರಿಯೆ ನಡೆದಿದ್ದು, 8 ಫ್ರಾಂಚೈಸಿಗಳ ವಿವರ ಈ ಕೆಳಗಿನಂತಿದೆ.

  1. ಫ್ರೆಂಡ್ಸ್ ಕ್ರಿಕೆಟರ್ಸ್

2) ಸ್ಟಾರ್ ವರ್ಟೆಕ್ಸ್

3 ) ನಂದಮೂರಿ ಲಯನ್ಸ್

4 ) ರೈಸಿಂಗ್ ಸ್ಟಾರ್ಸ್

5) ನೇತಾಜಿ ಕ್ರಿಕೆಟರ್ಸ್

6) ಬ್ರ್ಯಾಂಡ್ ಯುವ ಕ್ರಿಕೆಟರ್ಸ್

7) S.A.S ಕ್ರಿಕೆಟರ್ಸ್

8) ದಾದಾ ಕ್ರಿಕೆಟರ್ಸ್

ಪಂದ್ಯಾವಳಿಯ ವಿಜೇತ ತಂಡ 1 ಲಕ್ಷ ನಗದು,ರನ್ನರ್ಸ್ ತಂಡ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದು,ಇನ್ನಿತರ ವೈಯಕ್ತಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.ಪಂದ್ಯಾವಳಿಯ ನೇರ ಪ್ರಸಾರ M.Sports ಬಿತ್ತರಿಸಲಿದ್ದು,ಸ್ಪೋರ್ಟ್ಸ್‌ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.

 

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × two =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you