7.2 C
London
Wednesday, April 17, 2024
Homeಕ್ರಿಕೆಟ್ಅಂಡರ್ 19 ವಿಶ್ವಕಪ್ ಫೈನಲ್‌:ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಸಾಧಿಸಿ ಐದನೇ ಬಾರಿಗೆ ವಿಶ್ವಕಪ್ ಗೆದ್ದ ಭಾರತ...

ಅಂಡರ್ 19 ವಿಶ್ವಕಪ್ ಫೈನಲ್‌:ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಸಾಧಿಸಿ ಐದನೇ ಬಾರಿಗೆ ವಿಶ್ವಕಪ್ ಗೆದ್ದ ಭಾರತ ತಂಡ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೆಣೆಸಾಟದಲ್ಲಿ ಭಾರತ ತಂಡ ಅಮೋಘ ಗೆಲುವು ಸಾಧಿಸಿದ್ದು ಚಾಂಪಿಯನ್ ಪಟ್ಟಕ್ಕೇರಿದೆ.
ಈ ಮೂಲಕ ಅಂಡರ್ 19 ವಿಶ್ವಕಪ್ ಇತಿಹಾಸದಲ್ಲಿ ಭಾರತ 5ನೇ ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇಂಗ್ಲಂಡ್ ಕಿರಿಯರ ವಿರುದ್ಧ ಭಾರತದ ಕಿರಿಯರ ಸೆಣೆಸಾಟ ಸಾಕಷ್ಟು ರೋಚಕತೆಯಿಂದ ಕೂಡಿದ್ದು ಅಂತಿಮವಾಗಿ ಭಾರತ 4 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.
ಭಾರತ ಈ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಇಂಗ್ಲೆಂಡ್‌ಗಿಂತ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಇಂಗ್ಲೆಂಡ್ ತಂಡವನ್ನು 189 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಅದಾದ ಬಳಿಕ ಬ್ಯಾಟಿಂಗ್‌ನಲ್ಲಿಯೂ ಭಾರತ ಉತ್ತಮ ಪ್ರದರ್ಶನ ನೀಡಿತು. ಇಂಗ್ಲೆಂಡ್ ಬೌಲಿಂಗ್‌ ದಾಳಿಯನ್ನು ಉತ್ತಮ ರೀತಿಯಲ್ಲಿ ಎದುರಿಸಿದ ಭಾರತ ತಂಡ 14 ಎಸೆತಗಳು ಬಾಕಿಯಿರುವಂತೆ ಗೆಲುವು ಸಾಧಿಸಿದೆ. ಈ ಮೂಲಕ ಅರ್ಹವಾಗಿಯೇ ಚಾಂಪಿಯನ್ ಪಟ್ಟಕ್ಕೇರಿದೆ.
ಇನ್ನು ಭಾರತ ಅಂಡರ್ 19 ತಂಡದ ಪರವಾಗಿ ರಾಜ್ ಬಾವಾ ಐದು ವಿಕೆಟ್ ಗೊಂಚಲು ಪಡೆಯುವ ಮೂಲಕ ಎದುರಾಳಿಗೆ ಆಘಾರ ನೀಡಿದರೆ ರವಿ ಕುಮಾರ್ ಕೂಡ ನಾಲ್ಕು ವಿಕೆಟ್ ಪಡೆದು ಅದ್ಭುತ ಕೊಡುಗೆ ನೀಡಿದರು. ಇನ್ನು ಬ್ಯಾಟಿಂಗ್‌ನಲ್ಲಿ ಶೇಕ್ ರಶೀದ್ ಈ ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ್ದು ಅರ್ಧ ಶತಕದ ಕೊಡುಗೆ ನೀಡಿ ಮಿಂಚಿದ್ದಾರೆ. ಇನ್ನು ನಿಶಾಂತ್ ಸಿಂಧು ಕೂಡ ಅಜೇಯ 50 ರನ್‌ಗಳ ಕೊಡುಗೆ ನೀಡಿದ್ದಾರೆ. ಈ ಮೂಲಕ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.
ಈ ಬಾರಿಯ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವು  ವೆಸ್ಟ್ ಇಂಡೀಸ್‌ನ ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್‌ ಆಯ್ದುಕೊಂಡು 44.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡ 189ರನ್ ಗಳಿಸಿ ಆಲೌಟ್ ಆಯಿತು,
 ಇಂಗ್ಲೆಂಡ್ ಎಲ್ಲಾ ಆಟಗಾರರು ಅಡಲು ಮೈದಾನಕ್ಕೆ ಇಳಿದವರೆಲ್ಲ ಫೇವಿಲಿಯನ್ ಕಡೆ ಮುಖಮಾಡಿ ಹೊರಟರೆ ಜವಾಬ್ದಾರಿಯುತ ಪ್ರದರ್ಶನ ನೀಡಿದ ತಂಡದ ಜೇಮ್ಸ್‌ ರ‍್ಯೂ  116 ಎಸೆತಗಳಲ್ಲಿ 95 ರನ್ ಗಳಿಸಿ ತಂಡ ಗೌರವ ಮೊತ್ತ ತಲುಪಲು ಹೋರಾಡಿದರು,
ಈ ಬಾರಿ ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ  ಮತ್ತು ಇಂಗ್ಲೆಂಡ್  ತಂಡಗಳು ಕಣಕ್ಕಿಳಿದಿದ್ದವು. ವೆಸ್ಟ್ ಇಂಡೀಸ್‌ನ ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್‌ ಆಯ್ದುಕೊಂಡು 44.5 ಓವರ್‌ಗಳಲ್ಲಿ ಆಲ್ ಔಟ್ ಆಗಿ 189 ರನ್ ಗಳಿಸಿತು. ಇಂಗ್ಲೆಂಡ್ ಇಡೀ ತಂಡ ಜವಾಬ್ದಾರಿಯುತ ಪ್ರದರ್ಶನ ನೀಡದೇ ಇದ್ದರೂ ತಂಡದ ಜೇಮ್ಸ್‌ ರ‍್ಯೂ 116 ಎಸೆತಗಳಲ್ಲಿ 95 ರನ್ ಗಳಿಸಿ ಆಪದ್ಭಾಂದವನಾದರು.
ಇನ್ನುಳಿದಂತೆ ಜಾರ್ಜ್ ಥಾಮಸ್ 27, ಜೇಕಬ್ ಬೆಥೆಲ್ 2, ನಾಯಕ ಟಾಮ್ ಪ್ರೆಸ್ಟ್ ಡಕ್ ಔಟ್, ವಿಲ್ ಲಂಕ್ಷ್ಟನ್ 4, ಜಾರ್ಜ್ ಬೆಲ್ ಡಕ್ ಔಟ್, ರೆಹಾನ್ ಅಹ್ಮೆದ್ 10, ಅಲೆಕ್ಸ್ ಹಾರ್ಟನ್ 10, ಜೇಮ್ಸ್ ಸೇಲ್ಸ್ ಅಜೇಯ 34, ಥಾಮಸ್ ಆಪ್ಸಿನ್‌ವಲ್ ಡಕ್ ಔಟ್ ಮತ್ತು ಜೋಶ್ವಾ ಬೊಯ್ಡನ್ 1 ರನ್ ಗಳಿಸಿದರು. ಹೀಗೆ ಜೇಮ್ಸ್‌ ರ‍್ಯೂ ಅಮೋಘ ಆಟದ ನೆರವಿನಿಂದ ಇಂಗ್ಲೆಂಡ್ ಹೀನಾಯ ಮೊತ್ತಕ್ಕೆ ಆಲ್ ಔಟ್ ಆಗುವುದರಿಂದ ತಪ್ಪಿಸಿಕೊಂಡಿತು
ಭಾರತ ಅಂಡರ್ 19 ತಂಡಕ್ಕೆ ಗೆಲ್ಲಲು 190 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು.
ಹೀಗೆ ಇಂಗ್ಲೆಂಡ್ ತಂಡ ನೀಡಿದ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ದೊರೆಯಲಿಲ್ಲ. ಭಾರತ ತಂಡದ ಆರಂಭಿಕ ಆಟಗಾರನಾದ  ರಘುವಂಶಿ ಶೂನ್ಯಕ್ಕೆ ಔಟ್ ಆದರೆ ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ 21 ರನ್ ಗಳಿಸಿದರು. ಹೀಗೆ ಬಹು ಬೇಗನೆ ಆರಂಭಿಕ ಆಟಗಾರರನ್ನು ಕಳೆದುಕೊಂಡ ಟೀಮ್ ಇಂಡಿಯಾಗೆ ಆಸರೆಯಾದದ್ದು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶೈಖ್ ರಷೀದ್ ಹೌದು ಕಠಿಣ ಸಂದರ್ಭದಲ್ಲಿ ಟೀಮ್ ಇಂಡಿಯಾಗೆ ಆಸರೆಯಾದ ಶೇಖ್ ರಶೀದ್ 84 ಎಸೆತಗಳಲ್ಲಿ 50 ರನ್ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಇನ್ನುಳಿದಂತೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಯಶ್ ಧುಲ್ 17 ರನ್, ರಾಜ್ ಬವಾ 35 ರನ್, ಕೌಶಲ್ ತಾಂಬೆ 1 ರನ್, ನಿಶಾಂತಂ ಸಿಂಧು ಅಜೇಯ 50 ರನ್ ಮತ್ತು ವಿಕೆಟ್ ಕೀಪರ್ ದಿನೇಶ್ ಬನ 5 ಎಸೆತಗಳಲ್ಲಿ ಅಜೇಯ 13 ರನ್ ಗಳಿಸಿದರು.
ಈ ಮೂಲಕ ಭಾರತ ಅಂಡರ್ 19 ತಂಡ 47.4 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ 4 ವಿಕೆಟ್‍ಗಳ ಜಯವನ್ನು ಸಾಧಿಸಿ ಐದನೇ ಬಾರಿಗೆ ಅಂಡರ್ 19 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡು ಐದನೆ ಬಾರಿಗೆ ವಿಶ್ವಕಪ್ ಗೆಲುವಿಗೆ ಕಾರಣವಾಯ್ತು
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Latest stories

LEAVE A REPLY

Please enter your comment!
Please enter your name here

5 − 5 =