6.4 C
London
Wednesday, April 24, 2024
HomeAction Replayಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

ಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿದ್ದ ಶ್ರೀಪಾದ ಉಪಾಧ್ಯಾಯ, ಹುಟ್ಟುಹಬ್ಬದ ಶುಭಾಶಯಗಳು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಕುಂದಾಪುರ : ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿ ಚಕ್ರಾಧಿಪತ್ಯ ಮೆರೆದ ತಂಡ ಚಕ್ರವರ್ತಿ ಕುಂದಾಪುರ.ದಶಕಗಳ ಕಾಲ ತಂಡವನ್ನು ಮುನ್ನಡೆಸಿ ಕುಂದಾಪುರದ ಕೀರ್ತಿಯನ್ನು ರಾಜ್ಯ ರಾಷ್ಟ್ರದೆಲ್ಲೆಡೆ ಪಸರಿಸಿದ ನಾಯಕ ಶ್ರೀಪಾದ ಉಪಾಧ್ಯಾಯ.

ಟೆನ್ನಿಸ್ ಕ್ರಿಕೆಟ್ ನ ಹಲವಾರು ತಾರೆಗಳ ಭವಿಷ್ಯ ರೂಪಿಸಿದ ಅಂಗಣ ಉಡುಪಿಯ ಅಜ್ಜರಕಾಡಿನ ಮೈದಾನ.1996 ರಲ್ಲಿ ಕರಾವಳಿ ಕ್ರಿಕೆಟರ್ಸ್ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿದ್ದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಉಡುಪಿಯ ದುರ್ಗಾ ಕ್ರಿಕೆಟರ್ಸ್ 10 ಓವರ್ ಗಳಲ್ಲಿ 32 ರನ್ ಗಳಿಸಿ ಆಲೌಟ್ ಆಗಿತ್ತು.
ಆರಂಭಿಕ ದಾಂಡಿಗನಾಗಿ ಅಂಗಣಕ್ಕಿಳಿದ ನಾಯಕ ಹಾಗೂ ಆಲ್ ರೌಂಡರ್ ಶ್ರೀಪಾದ ಉಪಾಧ್ಯಾಯರವರು ಮೊದಲ ನಾಲ್ಕು ಎಸೆತಗಳಲ್ಲಿ ಅಜ್ಜರಕಾಡು ಅಂಗಣದ ಮೂಲೆ ಮೂಲೆಗೂ ನಾಲ್ಕು ಸಿಕ್ಸರ್ ಸಿಡಿಸಿ,ಎಸೆತಗಾರ ಐದನೇ ಎಸೆತ ವೈಡ್ ಎಸೆದರೆ,ಮತ್ತೆ ಮುಂದಿನ ಎರಡು ಎಸೆತಗಳಲ್ಲಿ ಮತ್ತೆರಡು ಸಿಕ್ಸರ್ ಬಾರಿಸಿ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನಲ್ಲಿ ದಾಖಲೆ ಬರೆದರು.ಪಂದ್ಯ ಒಂದೇ ಓವರ್ ನಲ್ಲಿ ಮುಕ್ತಾಯ ಕಂಡಿತ್ತು.ನಂತರದ ದಿನಗಳಲ್ಲಿ ಉಪಾಧ್ಯಾಯರಿಗೆ ಬೌಲಿಂಗ್ ಮಾಡಲು ಎಸೆತಗಾರರು ಅಂಜುವ ದಿನಗಳಿತ್ತು.

ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್ ವಿಭಾಗದಲ್ಲಿಯೂ ಬಹಳಷ್ಟು ಸಾಧನೆಗೈದ ಕೀರ್ತಿ ಉಪಾಧ್ಯಾಯರಿಗೆ ಸಲ್ಲುತ್ತದೆ.ನಾಯಕನಾಗಿ ರಾಜ್ಯದ ನೂರಾರು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪಂದ್ಯಾಕೂಟಗಳಲ್ಲಿ ಇವರ ಸಾರಥ್ಯದಲ್ಲಿ ಯಶಸ್ಸನ್ನು ಸಾಧಿಸಿತ್ತು.

ಪ್ರಸ್ತುತ (Above-40),ಹಾಗೂ ರೋಟರಿ ಪಂದ್ಯಾಕೂಟಗಳಲ್ಲಿ ಪಾಲ್ಗೊಳ್ಳುವ ಉಪಾಧ್ಯಾಯರು ಯಶಸ್ಸಿನ ಯಶೋಗಾಥೆ ಬರೆದ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಮಹಾನ್ ನಾಯಕ.

ಶ್ರೀಪಾದ ಉಪಾಧ್ಯಾಯರಿಗೆ “ಸ್ಪೋರ್ಟ್ಸ್ ಕನ್ನಡ” ಕ್ರೀಡಾ ವೆಬ್ಸೈಟ್ ನ ಪರವಾಗಿ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

 

ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − eleven =