Categories
ಕ್ರಿಕೆಟ್

ಅಜೇಯ ಕ್ರಿಕೆಟ್ ಕ್ಲಬ್ ಕುಂಜಿಗುಡಿ-35 ನೇ ವಾರ್ಷಿಕೋತ್ಸವ-ರಾಜ್ಯ ಮಟ್ಟದ 40 ಗಜಗಳ ಕ್ರಿಕೆಟ್ ಪಂದ್ಯಾಟ

ಅಜೇಯ ಕ್ರಿಕೆಟ್ ಕ್ಲಬ್ ಕುಂಜಿಗುಡಿ ಸಾಲಿಗ್ರಾಮ
ತಂಡ 35 ನೇ ವಾರ್ಷಿಕೋತ್ಸವದ ಪ್ರಯುಕ್ತ,ಸಾಲಿಗ್ರಾಮ
ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಹಮ್ಮಿಕೊಂಡಿದ್ದಾರೆ.
2023 ಜನವರಿ 20 ರಿಂದ 22 ರವರೆಗೆ ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 1,11,111 ರೂ ನಗದು ಬಹುಮಾನ,ದ್ವಿತೀಯ ಸ್ಥಾನಿ 66,666 ರೂ ನಗದು ಬಹುಮಾನ ಸಹಿತ ಶಾಶ್ವತ ಫಲಕಗಳನ್ನು ಪಡೆಯಲಿದ್ದಾರೆ.ಟೂರ್ನಮೆಂಟ್ ನ ಬೆಸ್ಟ್ ಬ್ಯಾಟರ್ ಮತ್ತು ಬೆಸ್ಟ್ ಬೌಲರ್ ಬಹುಮಾನ‌ ರೂಪದಲ್ಲಿ ಸ್ಮಾರ್ಟ್ ಫೋನ್ ಮತ್ತು ಸರಣಿ ಶ್ರೇಷ್ಟ ಗೌರವಕ್ಕೆ ಪಾತ್ರರಾಗುವ ಆಟಗಾರ ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ.ಟೂರ್ನಮೆಂಟ್ ನ ನೇರ ಪ್ರಸಾರ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಅಜೇಯ ಕುಂಜಿಗುಡಿ ಪಂದ್ಯಾಟದ ಸಮಿತಿಯ ಗೌರವಾಧ್ಯಕ್ಷರಾದ ದಿನೇಶ್ ಮೊಗವೀರ ಮತ್ತು ಅಧ್ಯಕ್ಷರಾದ ಮಹೇಶ್ ಭಂಡಾರಿ ಮತ್ತು ನಾಗೇಶ್ ಪೂಜಾರಿ ಇವರ ಸಾರಥ್ಯದಲ್ಲಿ ವ್ಯವಸ್ಥಿತವಾಗಿ ನಡೆಯಲಿದೆ ಎಂದು ಸ್ಪೋರ್ಟ್ಸ್ ಕನ್ನಡದೊಂದಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9380041966 ಮತ್ತು 9535941932 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

5 + nineteen =