ಕ್ರಿಕೆಟ್44+ ಹಿರಿಯ ಆಟಗಾರರ ಅಪರೂಪದ ಸಮಾಗಮ- ಸೃಷ್ಟಿ ಸೀನಿಯರ್ಸ್ ಕಪ್-2022 ನವೆಂಬರ್...

44+ ಹಿರಿಯ ಆಟಗಾರರ ಅಪರೂಪದ ಸಮಾಗಮ- ಸೃಷ್ಟಿ ಸೀನಿಯರ್ಸ್ ಕಪ್-2022 ನವೆಂಬರ್ 18,19 ಮತ್ತು 20 ರಂದು

-

- Advertisment -spot_img
ಬೆಂಗಳೂರು-ಅವಿಘ್ನ ಸೃಷ್ಟಿ ಬೆಂಗಳೂರು ತಂಡದ ಆಶ್ರಯದಲ್ಲಿ ಅಕ್ಟೋಬರ್ ನಲ್ಲಿ ಆಯೋಜಿಸಲಾಗಿದ್ದ
44+ ಸೃಷ್ಟಿ ಸೀನಿಯರ್ಸ್ ಕಪ್ ಮಳೆಯಿಂದಾಗಿ ಮುಂದೂಲ್ಪಟ್ಟಿತ್ತು.ಇದೀಗ ಇಂದಿನಿಂದ ನವೆಂಬರ್ 18,19 ಮತ್ತು 20 ರಂದು ಬೆಂಗಳೂರಿನ ಮಾಕಳಿ ಸೃಷ್ಟಿ ಹುಲ್ಲುಹಾಸಿನ ಮೈದಾನದಲ್ಲಿ ಹೊನಲು ಬೆಳಕಿನಡಿಯಲ್ಲಿ ಮುಂದುವರಿಯಲಿದೆ.
 ಅಕ್ಟೋಬರ್ 12 ರಂದು ನಡೆದ ಮೊದಲ ದಿನದ ಪಂದ್ಯಗಳಲ್ಲಿ ಸೃಷ್ಟಿ ಬೆಂಗಳೂರು ತಂಡ ತಾನಾಡಿದ ಎರಡೂ ಪಂದ್ಯವನ್ನು ಜಯಿಸಿ ಕ್ವಾಲಿಫೈಯರ್ ಹಂತ ಪ್ರವೇಶಿಸಿದೆ‌.ಫ್ಯೂಚುರಾ ಇಲೆವೆನ್ ಒಂದು ಪಂದ್ಯವನ್ನು ಜಯಿಸಿ ಕ್ವಾಲಿಫೈಯರ್ ಪ್ರವೇಶ ಪಡೆದಿದೆ.
*ಮುಂದಿನ ಪಂದ್ಯಗಳ ಸಮಗ್ರ ವಿವರ*
ಬಿ ಗ್ರೂಪ್ ನಲ್ಲಿ ಆನಂದ್ ಇಲೆವೆನ್,ರಂಗ ಇಲೆವೆನ್,
ಆರ್.ಡಿ ಇಲೆವೆನ್, ಗುರುಬ್ರಹ್ಮ ಬೆಂಗಳೂರು ತಂಡಗಳ ನಡುವಿನ ಪಂದ್ಯಗಳು ನವೆಂಬರ್ 18 ರಂದು ನಡೆಯಲಿದೆ.
ಸಿ ಗ್ರೂಪ್ ನಲ್ಲಿ ಜೈ ಕರ್ನಾಟಕ ಬೆಂಗಳೂರು,ನಾಗಾ ಇಲೆವೆನ್ ಕೆ.ಆರ್.ಪುರಂ,ಜನಪ್ರಿಯ ಬೆಂಗಳೂರು ಮತ್ತು ವೈ.ಬಿ.ಸಿ ದಾಸರಹಳ್ಳಿ ತಂಡಗಳ ನಡುವಿನ ಪಂದ್ಯಗಳು ನವೆಂಬರ್ 19 ರಂದು ನಡೆಯಲಿದೆ.
ಡಿ ಗ್ರೂಪ್ ನಲ್ಲಿ ಐಡಿಯಲ್ ಶಿವಮೊಗ್ಗ,ಚಮಕ್ ಬೆಂಗಳೂರು,ಶ್ರೀ ಬೆಂಗಳೂರು ಮತ್ತು ಫ್ರೆಂಡ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯಗಳು ಹಾಗೂ ನಿರ್ಣಾಯಕ ಹಂತದ ಪಂದ್ಯಗಳು ನವೆಂಬರ್ 20  ರವಿವಾರದಂದು ನಡೆಯಲಿದೆ.
ಡಿಸೆಂಬರ್ 31-1978 ಒಳಗಡೆ ಜನಿಸಿದ ಆಟಗಾರರಿಗೆ ಮಾತ್ರ ಆಡಲು ಅವಕಾಶವಿದ್ದು,16 ತಂಡಗಳು ಭಾಗವಹಿಸುತ್ತಿದೆ.ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಲಿರುವ ಈ ಪಂದ್ಯಾವಳಿಯ ಪ್ರಥಮ ಬಹುಮಾನ 50 ಸಾವಿರ,ದ್ವಿತೀಯ 25 ಸಾವಿರ,ತೃತೀಯ 15 ಸಾವಿರ ಮತ್ತು ಚತುರ್ಥ 10 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

12 − 3 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you