ಕ್ರಿಕೆಟ್ಉತ್ತಮ ಫಾರ್ಮ್ ನಲ್ಲಿದ್ದರು ಆಯ್ಕೆ ಆಗುವ ಅದೃಷ್ಟವಿಲ್ಲ : ವಿಶ್ವಕಪ್‌ನಿಂದ ಹೊರಗುಳಿದ...

ಉತ್ತಮ ಫಾರ್ಮ್ ನಲ್ಲಿದ್ದರು ಆಯ್ಕೆ ಆಗುವ ಅದೃಷ್ಟವಿಲ್ಲ : ವಿಶ್ವಕಪ್‌ನಿಂದ ಹೊರಗುಳಿದ ಆರು ನತದೃಷ್ಟ ಆಟಗಾರರು…

-

- Advertisment -spot_img
ಭಾರತ ಕ್ರಿಕೆಟ್ ತಂಡದ ಅನುಭವಿ ಕ್ರಿಕೆಟಿಗ ಶಿಖರ್ ಧವನ್ ಟಿ20 ಮಾದರಿಯ ತಂಡದಿಂದ ಹೊರಬಿದ್ದಿದ್ದಾರೆ.
*ಅನುಭವಿ  ಕ್ರಿಕೆಟಿಗ ಶಿಖರ್ ಧವನ್*
ಭಾರತ ಕ್ರಿಕೆಟ್ ತಂಡದ ಅನುಭವಿ ಕ್ರಿಕೆಟಿಗ ಶಿಖರ್ ಧವನ್ ಟಿ20 ಮಾದರಿಯ ತಂಡದಿಂದ ಹೊರಬಿದ್ದಿದ್ದಾರೆ. ಏಕದಿನ ತಂಡದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರನಾಗಿರುವ ಶಿಖರ್ ಧವನ್ ಟಿ20 ಮಾದರಿಯ ಕ್ರಿಕೆಟ್ ನಲ್ಲಿ ಸ್ಥಾನ ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಚುಟುಕು ಮಾದರಿಯಲ್ಲಿ ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾಗೆ ಕೆಎಲ್ ರಾಹುಲ್ ಸ್ಥಾನ ಭದ್ರಪಡಿಸಿಕೊಂಡಿದ್ದು ಪರ್ಯಾಯ ಆರಂಭಿಕ ಆಟಗಾರನಾಗಿ ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್‌ ಅವರನ್ನು ಕಣಕ್ಕಿಳಿಸುತ್ತಿದ್ದು ಧವನ್‌ಗೆ ಸ್ಥಾನವಿಲ್ಲದಂತಾಗಿದೆ. ಹೀಗಾಗಿ ಕಳೆದ ವರ್ಷದಂತೆ ಈ ವರ್ಷವೂ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶವನ್ನು ಧವನ್ ಕಳೆದುಕೊಂಡಿದ್ದಾರೆ.
*ಕರಾರುವಾಕ್ಕಾಗಿ ಬೌಲ್ ಮಾಡುವ ಟಿ ನಟರಾಜನ್*
ಕಳೆದ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ ನಲ್ಲಿ  ನೀಡಿದ ಅದ್ಭುತ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡ ಟಿ ನಟರಾಜನ್ ರಾಷ್ಟ್ರೀಯ ತಂಡದ ಪರವಾಗಿಯೂ ಅಮೋಘ ಪ್ರದರ್ಶನ ನಿಡಿ ಮಿಂಚಿದ್ದರು. ಅದರಲ್ಲೂ ಟಿ20 ಮಾದರಿಯಲ್ಲಿ ಭಾರತದ ಪರವಾಗಿ ದೊಡ್ಡ ಅಸ್ತ್ರವಾಗುವ ನಿರೀಕ್ಷೆಯನ್ನು ಮೂಡಿಸಿದ್ದರು ಟಿ ನಟರಾಜನ್ ಆದರೆ ಗಾಯದ ಸಮಸ್ಯೆ ಟಿ ನಟರಾಜನ್ ಅವರಿಗೆ ಬೆನ್ನಿಗೆ ಬಿದ್ದ ಬೇತಾಳದಂತೆ ಕಾಡಿದ್ದು  ತನ್ನ ತಾಕತ್ತು ಪ್ರದರ್ಶಿಸುವ ಸಮಯದಲ್ಲೇ ಭಾರತ ತಂಡದಿಂದಲೇ ಹೊರಬೀಳುವಂತೆ ಮಾಡಿದೆ. ಭಾರತದ ವಿಶ್ವಕಪ್ ತಂಡದಲ್ಲಿ ನಟರಾಜನ್ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾದರು ಎಲ್ಲಾ ಸರಿ ಇದ್ದು ಇವರು ಆಯ್ಕೆ ಆಗಿದ್ದರೆ ಭಾರತ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಬಲಗೊಳ್ಳುತ್ತಿತ್ತು ಎನ್ನುವುದು ಕ್ರಿಕೆಟ್ ಪಂಡಿತರ ಲೆಕ್ಕಾಚಾರ.
*ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್*
ಇಂಡಿಯನ್ ಪ್ರೀಮಿಯರ್ ಲೀಗ್ ಸೇರಿದಂತೆ  ಅಂತಾರಾಷ್ಟ್ರೀಯ ಟಿ20 ಮಾದರಿಯ ಕ್ರಿಕೆಟ್ ನಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡಿರುವ ಆಲ್‌ರೌಂಡರ್‌ಗಳ ಪೈಕಿ ವಾಶಿಂಗ್ಟನ್ ಸುಂದರ್ ಕೂಡ ಒಬ್ಬರು ಅವರ ಆಟದ ಶ್ರೇಷ್ಠತೆಯನ್ನು ಈಗಾಗಲೇ ಪ್ರದರ್ಶಿಸಿದ್ದಾರೆ. ಈ ಹಿಂದಿನ ಕೆಲವು ಟಿ20 ಪಂದ್ಯದಲ್ಲಿನ   ಉತ್ತಮ ಬೌಲಿಂಗ್ ನಿಂದ ಸುಂದರ್ ಟಿ20 ಮಾದರಿಯಲ್ಲಿ ಭಾರತದ ಅಗ್ರ ಶ್ರೇಯಾಂಕದ ಬೌಲರ್ ಕೂಡ ಆಗಿದ್ದರು. ಆದರೆ ಟಿ ನಟರಾಜನ್ ಅವರಂತೆಯೇ ವಾಶಿಂಗ್ಟನ್ ಸುಂದರ್‌ಗೂ ಗಾಯದ ಸಮಸ್ಯೆ ಬೆನ್ನು ಬಿಡದೆ ಕಾಡಿತ್ತು ಈ ಕಾರಣದಿಂದಲೇ  ಕಳೆದ ಸಾಲಿನ ಮತ್ತು ಈ ಸಾಲಿನ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಪಡೆಯಲು ವಿಫಲರಾಗಿ ಹೊರಗುಳಿಯುವಂತಾಗಿದೆ.
*ಆಟವಿದ್ದರು ಅದೃಷ್ಟವಿಲ್ಲದೆ ಮತ್ತೆ ಅವಕಾಶ ಕಳೆದುಕೊಂಡ ಸಂಜು ಸ್ಯಾಮ್ಸನ್*
ಕಳೆದ ಸಾಲಿನ ಮತ್ತು  ಈ  ಬಾರಿಯ ಭಾರತೀಯ ವಿಶ್ವಕಪ್ ತಂಡದಿಂದ ಹೊರಗುಳಿದ ಆಟಗಾರರ ಪೈಕಿ ಸಂಜು ಸ್ಯಾಮ್ಸನ್ ಕೂಡ ಒಬ್ಬರು ಈತ ಪ್ರಮುಖ  ಆಟಗಾರನಾಗಿದ್ದು ಅದೃಷ್ಟ ಮಾತ್ರ ಇವನ ಜೋತೆಗಿಲ್ಲ. ಸಂಜು ಸ್ಯಾಮ್ಸನ್ ಅವರ ಸಾಮರ್ಥ್ಯದ ಬಗ್ಗೆ ಭಾರತದ ಬಹುತೇಕ ಕ್ರಿಕೆಟ್ ಅಭಿಮಾನಿಗಳು ಮತ್ತು ಕ್ರಿಕೆಟ್ ಪಂಡಿತರಿಗು ಅರಿವಿದೆ.ಪ್ರತಿ ಬಾರಿಯೂ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ ಸಂಜು. ಆದರೆ ಕೆಲವೊಂದು ಬಾರಿ ತಾಳ್ಮೆ ಕಳೆದುಕೊಂಡು ಸ್ಥಿರ ಪ್ರದರ್ಶನ ನೀಡುವಲ್ಲಿ ಸಂಜು ವಿಫಲರಾಗಿದ್ದರೆ. ಈ ಕಾರಣದಿಂದಲೇ ಸಂಜುಗೆ ಸಾಕಷ್ಟು ಹಿನ್ನಡೆಯುಂಟು ಮಾಡಿದೆ. ಈ ಬಾರಿಯ ತಂಡದಲ್ಲಿ ಅವಕಾಶ ಸಿಗಬಹುದು ಎಂದುಕೊಂಡಿದ್ದ ಇವರ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿ ಮಾತ್ರ ಮತ್ತೆ ರಿಷಬ್ ಪಂತ್ ಮೇಲೆ ತಮ್ಮ ನಿರೀಕ್ಷೆಯನ್ನು ಮುಂದುವರಿಸಿದ್ದಾರೆ. ಈ ಕಾರಣದಿಂದಲೇ ಸಂಜು ಸ್ಯಾಮ್ಸನ್ ಮತ್ತೆ ತಮ್ಮ ಅವಕಾಶಕ್ಕಾಗಿ ಕಾಯಬೇಕಿದೆ.
*ಪಂದ್ಯದ ಗತಿಯನ್ನೆ ಬದಲಿಸ ಬಲ್ಲ ಮಧ್ಯಮ ಕ್ರಮಾಂಕದ ಶ್ರೇಷ್ಠ ಬ್ಯಾಟ್ಸ್‌ಮನ್ ಶ್ರೇಯಸ್ ಐಯ್ಯರ್*
 ಆಡುವ ಅರ್ಹತೆ ಇದ್ದರು  ಶ್ರೇಯಸ್ ಐಯ್ಯರ್ ಕಳೆದ ಬಾರಿಯೂ ಮತ್ತು  ಈ ವರ್ಷದ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯಲು ವಿಫಲವಾಗಿರುವ ಪ್ರಮುಖ ಆಟಗಾರ.
2022ರಲ್ಲಿ ತವರಿನಲ್ಲಿ ನೆಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶ್ರೇಯಸ್ ಐಯ್ಯರ್ ಭರ್ಜರಿ ಪ್ರದರ್ಶನ ನೀಡಿದ್ದರೂ ಈ ಬಾರಿಯ ಟಿ20 ವಿಶ್ವಕಪ್‌ನ ಪ್ರಾಥಮಿಕ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ ಎನ್ನುವುದು ಮಾತ್ರ ದುರಂತ.
ಶ್ರೇಯಸ್ ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿಯೂ ಮೀಸಲು ಆಟಗಾರನಾಗಿದ್ದರು  ಈ ಬಾರಿಯು ಮೀಸಲು ಆಟಗಾರನಾಗಿಯೇ ಉಳಿದುಕೊಂಡಿದ್ದು ಮಾತ್ರ ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
*ಪಂದ್ಯದ ಗತಿಯನ್ನೆ ಬದಲಿಸಬಲ್ಲ ಶ್ರೇಷ್ಠ ಸ್ಪಿನ್ನರ್ ಕುಲ್‌ದೀಪ್ ಯಾದವ್*
ಕುಲದೀಪ್ ಎಡಗೈ ಚೈನಾಮನ್ ಸ್ಪಿನ್ನರ್ ಒಂದು ಕಾಲದಲ್ಲಿ ಭಾರತದ ಪ್ರಮುಖ ಸ್ಪಿನ್ ಬೌಲರ್ ಎನಿಸಿಕೊಂಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕುಲ್‌ದೀಪ್ ಯಾದವ್‌ಗೆ ಹೆಚ್ಚಿನ ಅವಕಾಶಗಳನ್ನು ನೀಡಲಿಲ್ಲ ಐಪಿಎಲ್‌ನಲ್ಲೂ ಕುಲದೀಪ್  ಉತ್ತಮ ಪ್ರದರ್ಶನ ನೀಡಿದ್ದರು ಕೂಡ  ಕಳೆದ ಬಾರಿಯಂತೆಯೇ ಈ ಬಾರಿಯೂ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ.
ಸಾಕಷ್ಟು ಯುವ ಆಟಗಾರರು ಉತ್ತಮ ಫಾರ್ಮ್ ನಲ್ಲಿದ್ದರು ಆಯ್ಕೆಮಾಡಲು ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆ ಸಮಿತಿಗೆ ಸಾಧ್ಯವಾಗುತ್ತಿಲ್ಲ ಕಾರಣ ಉತ್ತಮರಲ್ಲೆ ಉತ್ತಮರನ್ನ ಆಯ್ಕೆ ಮಾಡುವಂತ ಪರಿಸ್ಥಿತಿ ಎದುರಾಗಿದೆ ಆ ಮಟ್ಟದಲ್ಲಿ ಭಾರತೀಯ ಕ್ರಿಕೆಟ್ ಬಾನೆತ್ತರಕ್ಕೆ ಬೆಳೆಯುತ್ತಿದೆ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳಿಗೆ ಭಾರತೀಯ ತಂಡಕ್ಕೆ ಕೇವಲ ಹದಿನಾಲ್ಕು ಮಂದಿ ಆಟಗಾರರನ್ನು ಆಯ್ಕೆ ಮಾಡಲು ಸಾಧ್ಯ. ಭಾರತೀಯ ಆಯ್ಕೆ ಮಂಡಳಿ ಕೆಲವೊಂದು ತಪ್ಪು ಮಾಡಿರ ಬಹುದು ಆದರೆ ಎಲ್ಲರನ್ನೂ ಆಯ್ಕೆ ಮಾಡಲು ಸಾಧ್ಯವಿಲ್ಲ ಮತ್ತೆದೆ ಅವಕಾಶಕ್ಕಾಗಿ ಕಾಯಲೆ ಬೇಕು ಫಾರ್ಮ್ ಉಳಿಸಿಕೊಳ್ಳಬೇಕು…..
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

seven − five =

Latest news

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...
- Advertisement -spot_imgspot_img

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...

Must read

- Advertisement -spot_imgspot_img

You might also likeRELATED
Recommended to you