ಕ್ರಿಕೆಟ್ಕರ್ನಾಟಕ ಟಿ20 ಕ್ರಿಕೆಟ್ ಸಾಮ್ರಾಜ್ಯಕ್ಕೆ ಮೈಸೂರು ‘ಮಹಾರಾಜ’

ಕರ್ನಾಟಕ ಟಿ20 ಕ್ರಿಕೆಟ್ ಸಾಮ್ರಾಜ್ಯಕ್ಕೆ ಮೈಸೂರು ‘ಮಹಾರಾಜ’

-

- Advertisment -spot_img

ಕರುನಾಡ ಕ್ರಿಕೆಟ್ ಹಬ್ಬ ಖ್ಯಾತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಚಾಂಪಿಯನ್ ಪಟ್ಟಕ್ಕೇರಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಕರುಣ್ ನಾಯರ್ ನಾಯಕತ್ವದ ಮೈಸೂರು ವಾರಿಯರ್ಸ್ ತಂಡ, ಮಯಾಂಕ್ ಅಗರ್ವಾಲ್ ಸಾರಥ್ಯದ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು 45 ರನ್’ಗಳಿಂದ ಭರ್ಜರಿಯಾಗಿ ಮಣಿಸಿ ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮೈಸೂರು ವಾರಿಯರ್ಸ್ ತಂಡ ನಿಗದಿತ 20 ಓವರ್’ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್’ಗಳ ಬೃಹತ್ ಮೊತ್ತ ಕಲೆ ಹಾಕಿತು. ಮೈಸೂರು ಪರ ಆರಂಭಿಕ ಆಟಗಾರ ಎಸ್.ಯು ಸುಮಿತ್ 44 ಎಸೆತಗಳಲ್ಲಿ 71 ರನ್ ಸಿಡಿಸಿದರೆ, ಮೂರನೇ ಕ್ರಮಾಂಕದಲ್ಲಿ ಕ್ರೀಸ್’ಗಿಳಿದ ನಾಯಕ ಕರುಣ್ ನಾಯರ್ 45 ಎಸೆತಗಳಲ್ಲಿ 66 ರನ್ ಬಾರಿಸಿದರು. ಸ್ಲಾಗ್ ಓವರ್’ಗಳಲ್ಲಿ ಅಬ್ಬರಿಸಿದ ರಾಯಚೂರಿನ ಸಿಂಧನೂರಿನ ಹುಡುಗ ಮನೋಜ್ ಭಾಂಡಗೆ ಕೇವಲ 13 ಎಸೆತಗಳಲ್ಲಿ 5 ಸಿಕ್ಸರ್’ಗಳ ನೆರವಿನಿಂದ ಸಿಡಿಲಬ್ಬರದ ಅಜೇಯ 44 ರನ್ ಬಾರಿಸಿ ಮೈಸೂರು ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.

ಚಾಂಪಿಯನ್ ಪಟ್ಟಕ್ಕೇರಲು 208 ರನ್’ಗಳ ಕಠಿಣ ಗುರಿ ಬೆನ್ನಟ್ಟಿದ ಬೆಂಗಳೂರು ಬ್ಲಾಸ್ಟರ್ಸ್ ಪಡೆ ಮೊದಲ ಓವರ್’ನಲ್ಲೇ ನಾಯಕ ಮಯಾಂಕ್ ಅಗರ್ವಾಲ್ ಅವರ ವಿಕೆಟ್ ಕಳೆದುಕೊಂಡಿತು. ಮತ್ತೊಬ್ಬ ಓಪನರ್, ಮೈಸೂರಿನ ಹುಡುಗ ಎಲ್.ಆರ್ ಚೇತನ್ 32 ಎಸೆತಗಳಲ್ಲಿ 4 ಸಿಕ್ಸರ್’ಗಳ ಸಹಿತ 51 ರನ್ ಸಿಡಿಸಿ ಬೆಂಗಳೂರು ಪರ ಪ್ರತಿರೋಧ ತೋರಿದರೂ, ಉಳಿದ ಆಟಗಾರರಿಂದ ಸಮರ್ಥ ಬೆಂಬಲ ಸಿಗಲಿಲ್ಲ.

ಮೈಸೂರು ವಾರಿಯರ್ಸ್ ತಂಡದ ಸಂಘಟಿತ ದಾಳಿಗೆ ತತ್ತರಿಸಿದ ಬೆಂಗಳೂರು ಬ್ಲಾಸ್ಟರ್ಸ್ 20 ಓವರ್’ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಮೈಸೂರು ಪರ ರಾಯಚೂರಿನ ಯುವ ವೇಗದ ಬೌಲರ್ ವಿದ್ಯಾಧರ ಪಾಟೀಲ್ 19 ರನ್ನಿಗೆ 3 ವಿಕೆಟ್ ಪಡೆದರೆ, ಅನುಭವಿ ಆಫ್’ಸ್ಪಿನ್ನರ್ ಕೆ.ಗೌತಮ್ 23ಕ್ಕೆ 2 ವಿಕೆಟ್ ಉರುಳಿಸಿದರು.

2022ನೇ ಸಾಲಿನ ಮಹಾರಾಜ ಟ್ರೋಫಿ ಫೈನಲ್’ನಲ್ಲಿ ಬೆಂಗಳೂರು ತಂಡ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧ ಸೋತು. ನಿರಾಸೆ ಅನುಭವಿಸಿತ್ತು. 2 ವರ್ಷಗಳ ನಂತರ ಮತ್ತೆ ಬೆಂಗಳೂರು ಬ್ಲಾಸ್ಟರ್ಸ್ ಫೈನಲ್’ನಲ್ಲಿ ಮುಗ್ಗರಿಸಿದೆ.

ಟೂರ್ನಿಯಲ್ಲಿ 12 ಪಂದ್ಯಗಳಿಂದ 560 ರನ್ ಗಳಿಸಿದ ಮೈಸೂರು ವಾರಿಯರ್ಸ್ ಕ್ಯಾಪ್ಟನ್ ಕರುಣ್ ನಾಯರ್ ಸರಣಿಶ್ರೇಷ್ಠ ಪ್ರಶಸ್ತಿ ಸಹಿತ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರೆ, 9 ಪಂದ್ಯಗಳಿಂದ 17 ವಿಕೆಟ್ ಉರುಳಿಸಿದ ಹುಬ್ಬಳ್ಳಿ ಟೈಗರ್ಸ್’ನ ಮಂಡ್ಯದ ಹುಡುಗ ಎಲ್.ಆರ್ ಕುಮಾರ್ ಪರ್ಪಲ್ ಕ್ಯಾಪ್ ಗೌರವಕ್ಕೆ ಪಾತ್ರರಾದರು.

LEAVE A REPLY

Please enter your comment!
Please enter your name here

5 × 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you