ಕ್ರಿಕೆಟ್ಎರಡೇ ರಣಜಿ ಪಂದ್ಯಗಳಿಂದ 17 ವಿಕೆಟ್ ಪಡೆದ ಮೈಸೂರು ಹುಡುಗ!

ಎರಡೇ ರಣಜಿ ಪಂದ್ಯಗಳಿಂದ 17 ವಿಕೆಟ್ ಪಡೆದ ಮೈಸೂರು ಹುಡುಗ!

-

- Advertisment -spot_img

ಎರಡೇ ರಣಜಿ ಪಂದ್ಯಗಳಿಂದ 17 ವಿಕೆಟ್ ಪಡೆದ ಮೈಸೂರು ಹುಡುಗ!

ಕರ್ನಾಟಕ ಕ್ರಿಕೆಟ್ ತಂಡವನ್ನು ತೊರೆದು ನಾಗಾಲ್ಯಾಂಡ್ ಪರ ಆಡುತ್ತಿರುವ ಇಬ್ಬರು ಕನ್ನಡಿಗರು ರಣಜಿ ಟ್ರೋಫಿ ಟೂರ್ನಿಯಲ್ಲಿ ಅಕ್ಷರಶಃ ಧೂಳೆಬ್ಬಿಸುತ್ತಿದ್ದಾರೆ. ಅವರೇ ಬಲಗೈ ಓಪನರ್ ಡಿ.ನಿಶ್ಚಲ್ ಮತ್ತು ಎಡಗೈ ಸ್ಪಿನ್ನರ್ ಜಗದೀಶ ಸುಚಿತ್.
ಪ್ರತಿಭಾವಂತ ಆರಂಭಿಕ ಬ್ಯಾಟ್ಸ್’ಮನ್ ಡಿ.ನಿಶ್ಚಲ್, ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ನಾಗಾಲ್ಯಾಂಡ್ ಪರ ಸತತ 2ನೇ ಶತಕ ಬಾರಿಸಿದ್ದಾರೆ.
ಮೊದಲ ಪಂದ್ಯದಲ್ಲಿ ಅರುಣಾಚಲ ಪ್ರದೇಶ ವಿರುದ್ಧ ಅಮೋಘ 149 ರನ್ ಬಾರಿಸಿದ್ದ ನಿಶ್ಚಲ್, 2ನೇ ಪಂದ್ಯದಲ್ಲಿ ಮಣಿಪುರ ವಿರುದ್ಧ ಭರ್ಜರಿ 154 ರನ್ ಸಿಡಿಸಿದ್ದಾರೆ. ಪ್ರಥಮ ಇನ್ನಿಂಗ್ಸ್’ನಲ್ಲಿ 49 ರನ್ ಗಳಿಸಿದ್ದ ನಿಶ್ಚಲ್, ದ್ವಿತೀಯ ಇನ್ನಿಂಗ್ಸ್’ನಲ್ಲಿ 154 ರನ್ ಗಳಿಸಿದರು

ಇನ್ನು ನಿಶ್ಚಲ್ ಜೊತೆ ಈ ಬಾರಿ ನಾಗಾಲ್ಯಾಂಡ್ ತಂಡ ಸೇರಿಕೊಂಡಿರುವ ಮೈಸೂರು ಹುಡುಗ ಜಗದೀಶ ಸುಚಿತ್ ಆಡಿರುವ ಎರಡೇ ಪಂದ್ಯಗಳಿಂದ 17 ವಿಕೆಟ್ ಕಬಳಿಸಿದ್ದಾರೆ.ಅರುಣಾಚಲ ಪ್ರದೇಶ ವಿರುದ್ಧದ ಪ್ರಥಮ ಇನ್ನಿಂಗ್ಸ್’ನಲ್ಲಿ 34 ರನ್ನಿಗೆ 5 ವಿಕೆಟ್, ದ್ವಿತೀಯ ಇನಿಂಗ್ಸ್’ನಲ್ಲಿ 34 ರನ್ನಿಗೆ 4 ವಿಕೆಟ್ ಸೇರಿದಂತೆ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದ ಜೆ.ಸುಚಿತ್ ನಾಗಾಲ್ಯಾಂಡ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ನಾಗಾಲ್ಯಾಂಡ್’ನ 2ನೇ ಪಂದ್ಯದಲ್ಲೂ ಮಿಂಚಿರುವ ಸುಚಿತ್ ಮಣಿಪುರ ವಿರುದ್ಧ ಪ್ರಥಮ ಇನ್ನಿಂಗ್ಸ್’ನಲ್ಲಿ 52 ರನ್ನಿಗೆ 5 ವಿಕೆಟ್ ಕಬಳಿಸಿದ್ದಾರೆ. ದ್ವಿತೀಯ ಇನ್ನಿಂಗ್ಸ್’ನಲ್ಲೂ ತಮ್ಮ ಸ್ಪಿನ್ ಮೋಡಿಯಿಂದ ಮಿಂಚಿದ ಸುಚಿತ್ 81 ರನ್ನಿಗೆ 3 ವಿಕೆಟ್ ಉರುಳಿಸಿದ್ದಾರೆ. ಹೀಗೆ ನಾಗಾಲ್ಯಾಂಡ್ ಪರ ಆಡಿರುವ ಮೊದಲ ಎರಡು ಪಂದ್ಯಗಳಿಂದ ಸುಚಿತ್ 17 ವಿಕೆಟ್ ಪಡೆದು ಮಿಂಚಿದ್ದಾರೆ

31 ವರ್ಷದ ಜೆ.ಸುಚಿತ್ 2014ರಲ್ಲಿ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಆದರೆ ಕರ್ನಾಟಕ ತಂಡದಲ್ಲಿ ಸೂಕ್ತ ಅವಕಾಶಗಳು ಸಿಗದ ಹಿನ್ನೆಲೆಯಲ್ಲಿ ಈ ವರ್ಷ ರಾಜ್ಯ ತಂಡವನ್ನು ತೊರೆದು ನಾಗಾಲ್ಯಾಂಡ್ ತಂಡಕ್ಕೆ ವಲಸೆ ಹೋಗಿದ್ದರು.

LEAVE A REPLY

Please enter your comment!
Please enter your name here

fourteen − 4 =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you