ಕ್ರಿಕೆಟ್ಶತಕದೊಂದಿಗೆ ಸೌತ್ ಆಫ್ರಿಕಾವನ್ನು ಧ್ವಂಸ ಮಾಡಿದ ತಿಲಕ್ ವರ್ಮಾ...

ಶತಕದೊಂದಿಗೆ ಸೌತ್ ಆಫ್ರಿಕಾವನ್ನು ಧ್ವಂಸ ಮಾಡಿದ ತಿಲಕ್ ವರ್ಮಾ !

-

- Advertisment -spot_img

ಶತಕದೊಂದಿಗೆ ಸೌತ್ ಆಫ್ರಿಕಾವನ್ನು ಧ್ವಂಸ ಮಾಡಿದ ತಿಲಕ್ ವರ್ಮಾ !

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್, ತಿಲಕ್ ವರ್ಮಾ (56 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‌ಗಳೊಂದಿಗೆ ಔಟಾಗದೆ 107) ವಿಧ್ವಂಸಕ ಶತಕ ಸಿಡಿಸಿದ್ದಾರೆ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತು. ತಿಲಕ್ ವರ್ಮಾ ಜತೆಗೂಡಿ ಅಭಿಷೇಕ್ ಶರ್ಮಾ (25 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 50) ಅರ್ಧಶತಕ ಗಳಿಸಿದರು.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಎದುರಾಯಿತು. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್(0) ಮತ್ತೊಮ್ಮೆ ಡಕ್ ಆಗಿ ಹಿಂತಿರುಗಿದರು. ನಂತರ ಕ್ರೀಸ್ ಗೆ ಬಂದ ತಿಲಕ್ ವರ್ಮಾ ಹಾಗೂ ಅಭಿಷೇಕ್ ಶರ್ಮಾ ಆಕ್ರಮಣಕಾರಿ ಆಟವಾಡಿದರು. ತಿಲಕ್ ಬರುತ್ತಿದ್ದಂತೆ ಸತತ ಬೌಂಡರಿ ಹಾಗೂ ಸಿಕ್ಸರ್ ಬಾರಿಸಿದರು. ಅಭಿಷೇಕ್ ಶರ್ಮಾ ಕೂಡ ಬೌಂಡರಿ ಬಾರಿಸಿದ್ದು, ಜೋರಾಗಿ ಆಡಿದ ಈ ಜೋಡಿ ವೇಗವಾಗಿ ರನ್ ಗಳಿಸಿತು.

ಚೊಚ್ಚಲ ಆಟಗಾರ ರಮಣದೀಪ್ ಸಿಂಗ್ ಅವರು ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್ ಗೆ ಅಟ್ಟಿದರು. ತಿಲಕ್ ವರ್ಮಾ ಏಕಾಂಗಿಯಾಗಿ ನಿಂತು ಪಂದ್ಯವನ್ನು ಭಾರತ ತಂಡದ ಪರವಾಗಿ ತಿರುಗಿಸಿದರು. ಅವರ ಸಾಹಸದಿಂದಾಗಿ ಭಾರತ ತಂಡದ ಸ್ಕೋರ್ ಉತ್ತುಂಗಕ್ಕೇರಿತು. ಇದು ತಿಲಕ್ ವರ್ಮಾ ಅವರ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ ಮೊದಲ ಶತಕವಾಗಿದೆ.

ಆ ಬಳಿಕ 220 ರನ್ ಗಳಿಸಿದರೆ ಗೆಲ್ಲುವ ಉದ್ದೇಶದಿಂದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆರಂಭಿಸಿತು. ಆರಂಭದಿಂದಲೂ ಆಕ್ರಮಣಕಾರಿ ಆಟವಾಡಲು ಯತ್ನಿಸಿದ ದಕ್ಷಿಣ ಆಫ್ರಿಕಾ ತಂಡ ಒಂದರ ಹಿಂದೊಂದರಂತೆ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡಿತು. ದ.ಆಫ್ರಿಕಾದ ಆಟಗಾರರು ಅವಿರತ ಹೋರಾಟ ನಡೆಸಿದರು.ಕೊನೆಯದಾಗಿ ಆಗಮಿಸಿದ ದಕ್ಷಿಣ ಆಫ್ರಿಕಾ ಆಟಗಾರ ಜಾನ್ಸೆನ್ ಭಾರತೀಯ ಬೌಲರ್‌ಗಳನ್ನು ಕಂಗಾಲಾಗಿಸಿದರು.ಆದರೆ ಕೊನೆಯ ಓವರ್‌ನಲ್ಲಿ ಅರ್ಷಿದೀಪ್ ಸಿಂಗ್ ಅವರ ಅಮೋಘ ಎಸೆತದಿಂದ ಔಟಾದರು. ಅದರಲ್ಲಿ ಭಾರತ ತಂಡದ ಗೆಲುವು ಖಚಿತವಾಯಿತು

3ನೇ ಟಿ20 ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಸರಣಿಯ ಮುಂದಿನ ಪಂದ್ಯ ನಾಳೆ (ನ.15) ನಡೆಯಲಿದೆ.

LEAVE A REPLY

Please enter your comment!
Please enter your name here

nine + fifteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you