6 C
London
Wednesday, April 24, 2024
Homeಸ್ಪೋರ್ಟ್ಸ್ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

ಉದ್ಯಾವರ ವೆಂಕಟರಮಣ ಪಿತ್ರೋಡಿ (ರಿ )ಸಂಸ್ಥೆಯಿಂದ ದೀಪಾವಳಿಯ ಮಾದರಿ ಸಂಭ್ರಮಾಚರಣೆ.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಸದಾ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ರಾಜ್ಯದ ಮಾದರಿ ಕ್ರೀಡಾ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ಪಿತ್ರೋಡಿ. ಕಳೆದ ಮೂರು ದಶಕಗಳಿಂದ ಕ್ರೀಡೆಯ ಜೊತೆಗೆ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಸೇವೆಗಳನ್ನು ನಡೆಸುತ್ತಾ ಬಂದಿರುವ ಈ ಸಂಸ್ಥೆ ಈ ಬಾರಿಯ ದೀಪಾವಳಿಯನ್ನು ಮಾದರಿಯಾಗಿ ಆಚರಿಸಿಕೊಂಡಿತು.

ತಂಡದ ಸದಸ್ಯರು ದೀಪಾವಳಿ ಹಬ್ಬದ ಸಂದರ್ಭ ಪಟಾಕಿಗೆಂದು ಅನವಶ್ಯಕ ಖರ್ಚು ಮಾಡುವ ಹಣವನ್ನು ಉಳಿಸಿಕೊಂಡು ಸತತ 5 ನೇ ವರ್ಷ ಅಲೆವೂರಿನ‌ ಶ್ರೀಕೃಷ್ಣ ಬಾಲನಿಕೇತನ‌ ಸಂಸ್ಥೆಯ 55 ಮಕ್ಕಳಿಗೆ ಹೊಸ ಬಟ್ಟೆಗಳನ್ನು ವಿತರಿಸುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಫಲಾನುಭವಿ ಮಕ್ಕಳ ಮೊಗದಲ್ಲಿ ದೀಪಾವಳಿಯ ಬೆಳಕಿನ ಮಿನುಗುವ ಪ್ರಕಾಶ ಮೂಡಿತ್ತು.ಸಂಸ್ಥೆಯ ಸದಸ್ಯರ ಮನದಾಳದಲ್ಲೂ ಸಾರ್ಥಕ್ಯ ಭಾವ ಮನೆ ಮಾಡಿತ್ತು.

ಈ ಸಂದರ್ಭ ತಂಡದ ಅಧ್ಯಕ್ಷ ಮಲ್ಲೇಶ್ ಬಂಗೇರ, ಜಿತೇಂದ್ರ ಶೆಟ್ಟಿ, ಸತೀಶ್ ಕುಂದರ್, ಉಮೇಶ್ ಕರ್ಕೇರ, ವಿಜಯ್ ಕುಮಾರ್, ನವೀನ್ ಸಾಲ್ಯಾನ್, ಸಂತೋಷ್ ಕುಂದರ್, ವಾಸು ಸಾಲ್ಯಾನ್, ರಾಯ್ ಮಸ್ಕರೇನಸ್, ಕಿರಣ್ ಕುಮಾರ್, ಯುವರಾಜ್ ಸಾಲ್ಯಾನ್, ನಾಗೇಶ್ ಮೈಂದನ್, ಹರಿಶ್ಚಂದ್ರ ಕೋಟ್ಯಾನ್, ನವೀಶ್, ರಿಹಾನ್ ಹಾಗೂ ತಂಡದ ಕಪ್ತಾನ ಪ್ರವೀಣ್ ಪಿತ್ರೋಡಿ ಮತ್ತಿತರರು ಉಪಸ್ಥಿತರಿದ್ದರು…

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two + 19 =