Home ಕ್ರಿಕೆಟ್ ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸುತ್ತಿರುವ ‘ಮಹಾರಾಜ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿ’ ಆ. 11ರಿಂದ 28ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

 

ಕಳೆದ ಬಾರಿ ಚಾಂಪಿಯನ್ ಆಗಿದ್ದ ಆತಿಥೇಯ ಮೈಸೂರು ವಾರಿಯರ್ಸ್ ತಂಡವು ಉದ್ಘಾಟನಾ ದಿನದ ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇದೇ ದಿನದ ಇನ್ನೊಂದು ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಎದುರಾಳಿಗಳಾಗಲಿವೆ.

2022ರಲ್ಲಿ ಟೂರ್ನಿಯ ಮೊದಲ ಹಂತದ 14 ಪಂದ್ಯಗಳು ಇದೇ ಮೈದಾನದಲ್ಲಿ ನಡೆದಿದ್ದವು. ಮೂರು ವರ್ಷಗಳ ಬಳಿಕ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಈ ಬಾರಿ ಟೂರ್ನಿ ಸ್ಥಳಾಂತರಗೊಂಡು ಮೈಸೂರಿನಲ್ಲಿ ನಡೆಯುತ್ತಿದೆ. ಒಟ್ಟು 30 ಲೀಗ್ ಪಂದ್ಯಗಳು, ಕ್ವಾಲಿಫೈಯರ್–1, ಎಲಿಮಿನೇಟರ್, ಕ್ವಾಲಿಫೈಯರ್–2 ಹಾಗೂ ಫೈನಲ್ ಸೇರಿದಂತೆ 34 ಪಂದ್ಯಗಳು ನಡೆಯಲಿವೆ.

ಪ್ರಸಿದ್ಧ ಕೃಷ್ಣ, ಕರುಣ್ ನಾಯರ್, ಮಯಾಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಮನೀಷ್ ಪಾಂಡೆ ಸೇರಿದಂತೆ ದೇಶದ ಹಲವು ತಾರೆ ಕ್ರಿಕೆಟಿಗರು ಈ ಬಾರಿ ಕಣಕ್ಕಿಳಿಯುತ್ತಿದ್ದಾರೆ.

ಕೆಎಸ್‌ಸಿಎ ವಲಯ ಸಂಚಾಲಕ ಹರಿಕೃಷ್ಣ ಕುಮಾರ್ ತಿಳಿಸಿದಂತೆ, ಆ. 7ರಂದು ಪೊಲೀಸ್ ಇಲಾಖೆಯಿಂದ ಟೂರ್ನಿ ಆಯೋಜನೆಗೆ ಅನುಮತಿ ದೊರೆತಿದ್ದು, ಭದ್ರತೆಗಾಗಿ ಪೊಲೀಸ್ ಇಲಾಖೆಗೆ ಪತ್ರ ನೀಡಲಾಗಿದೆ. ಪಂದ್ಯ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಆಟಗಾರರು, ಅಧಿಕಾರಿಗಳು, ತಂಡಗಳ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶವಿದೆ.

ಕ್ರಿಕೆಟ್ ಮೈದಾನದಲ್ಲಿ ನಾಲ್ಕು ಪಿಚ್‌ಗಳು ಹಾಗೂ ಹುಲ್ಲುಹಾಸನ್ನು ಹದಗೊಳಿಸುವ ಕಾರ್ಯ ಅಂತಿಮ ಹಂತ ತಲುಪಿದೆ. ಮೈದಾನದ ಸುತ್ತಲೂ ಭದ್ರತಾ ಕಾರಣಕ್ಕಾಗಿ ಬ್ಯಾರಿಕೇಡ್ ಹಾಗೂ ಕಬ್ಬಿಣದ ಶೀಟ್‌ಗಳಿಂದ ತಡೆಗೋಡೆಗಳನ್ನು ನಿರ್ಮಿಸಲಾಗುತ್ತಿದೆ.

ನಿತ್ಯ ಎರಡು ಪಂದ್ಯಗಳು — ಮಧ್ಯಾಹ್ನ 3.15 ಹಾಗೂ ಸಂಜೆ 7.15ಕ್ಕೆ — ನಡೆಯಲಿವೆ. ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಸ್ಪರ್ಧಿಸಲಿವೆ.

 

 

LEAVE A REPLY

Please enter your comment!
Please enter your name here

17 − sixteen =

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸುತ್ತಿರುವ ‘ಮಹಾರಾಜ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿ’ ಆ. 11ರಿಂದ 28ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯಲಿದೆ.   ಕಳೆದ ಬಾರಿ ಚಾಂಪಿಯನ್ ಆಗಿದ್ದ ಆತಿಥೇಯ ಮೈಸೂರು ವಾರಿಯರ್ಸ್ ತಂಡವು ಉದ್ಘಾಟನಾ ದಿನದ ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇದೇ ದಿನದ ಇನ್ನೊಂದು ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಎದುರಾಳಿಗಳಾಗಲಿವೆ. 2022ರಲ್ಲಿ ಟೂರ್ನಿಯ ಮೊದಲ ಹಂತದ 14 ಪಂದ್ಯಗಳು ಇದೇ ಮೈದಾನದಲ್ಲಿ ನಡೆದಿದ್ದವು. ಮೂರು ವರ್ಷಗಳ ಬಳಿಕ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಈ ಬಾರಿ ಟೂರ್ನಿ ಸ್ಥಳಾಂತರಗೊಂಡು ಮೈಸೂರಿನಲ್ಲಿ ನಡೆಯುತ್ತಿದೆ. ಒಟ್ಟು 30 ಲೀಗ್ ಪಂದ್ಯಗಳು, ಕ್ವಾಲಿಫೈಯರ್–1, ಎಲಿಮಿನೇಟರ್, ಕ್ವಾಲಿಫೈಯರ್–2 ಹಾಗೂ ಫೈನಲ್ ಸೇರಿದಂತೆ 34 ಪಂದ್ಯಗಳು ನಡೆಯಲಿವೆ. ಪ್ರಸಿದ್ಧ ಕೃಷ್ಣ, ಕರುಣ್ ನಾಯರ್, ಮಯಾಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಅಭಿನವ್

Send this to a friend