ಕ್ರಿಕೆಟ್ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

-

- Advertisment -spot_img

ಮೈಸೂರು: ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಗೆ ಸಾಂಸ್ಕೃತಿಕ ನಗರಿ ಆತಿಥ್ಯ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸುತ್ತಿರುವ ‘ಮಹಾರಾಜ ಟ್ರೋಫಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿ’ ಆ. 11ರಿಂದ 28ರವರೆಗೆ ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

 

ಕಳೆದ ಬಾರಿ ಚಾಂಪಿಯನ್ ಆಗಿದ್ದ ಆತಿಥೇಯ ಮೈಸೂರು ವಾರಿಯರ್ಸ್ ತಂಡವು ಉದ್ಘಾಟನಾ ದಿನದ ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇದೇ ದಿನದ ಇನ್ನೊಂದು ಪಂದ್ಯದಲ್ಲಿ ಮಂಗಳೂರು ಡ್ರ್ಯಾಗನ್ಸ್ ಹಾಗೂ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಎದುರಾಳಿಗಳಾಗಲಿವೆ.

2022ರಲ್ಲಿ ಟೂರ್ನಿಯ ಮೊದಲ ಹಂತದ 14 ಪಂದ್ಯಗಳು ಇದೇ ಮೈದಾನದಲ್ಲಿ ನಡೆದಿದ್ದವು. ಮೂರು ವರ್ಷಗಳ ಬಳಿಕ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಈ ಬಾರಿ ಟೂರ್ನಿ ಸ್ಥಳಾಂತರಗೊಂಡು ಮೈಸೂರಿನಲ್ಲಿ ನಡೆಯುತ್ತಿದೆ. ಒಟ್ಟು 30 ಲೀಗ್ ಪಂದ್ಯಗಳು, ಕ್ವಾಲಿಫೈಯರ್–1, ಎಲಿಮಿನೇಟರ್, ಕ್ವಾಲಿಫೈಯರ್–2 ಹಾಗೂ ಫೈನಲ್ ಸೇರಿದಂತೆ 34 ಪಂದ್ಯಗಳು ನಡೆಯಲಿವೆ.

ಪ್ರಸಿದ್ಧ ಕೃಷ್ಣ, ಕರುಣ್ ನಾಯರ್, ಮಯಾಂಕ್ ಅಗರವಾಲ್, ದೇವದತ್ತ ಪಡಿಕ್ಕಲ್, ಅಭಿನವ್ ಮನೋಹರ್, ಶ್ರೇಯಸ್ ಗೋಪಾಲ್, ಮನೀಷ್ ಪಾಂಡೆ ಸೇರಿದಂತೆ ದೇಶದ ಹಲವು ತಾರೆ ಕ್ರಿಕೆಟಿಗರು ಈ ಬಾರಿ ಕಣಕ್ಕಿಳಿಯುತ್ತಿದ್ದಾರೆ.

ಕೆಎಸ್‌ಸಿಎ ವಲಯ ಸಂಚಾಲಕ ಹರಿಕೃಷ್ಣ ಕುಮಾರ್ ತಿಳಿಸಿದಂತೆ, ಆ. 7ರಂದು ಪೊಲೀಸ್ ಇಲಾಖೆಯಿಂದ ಟೂರ್ನಿ ಆಯೋಜನೆಗೆ ಅನುಮತಿ ದೊರೆತಿದ್ದು, ಭದ್ರತೆಗಾಗಿ ಪೊಲೀಸ್ ಇಲಾಖೆಗೆ ಪತ್ರ ನೀಡಲಾಗಿದೆ. ಪಂದ್ಯ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಆಟಗಾರರು, ಅಧಿಕಾರಿಗಳು, ತಂಡಗಳ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶವಿದೆ.

ಕ್ರಿಕೆಟ್ ಮೈದಾನದಲ್ಲಿ ನಾಲ್ಕು ಪಿಚ್‌ಗಳು ಹಾಗೂ ಹುಲ್ಲುಹಾಸನ್ನು ಹದಗೊಳಿಸುವ ಕಾರ್ಯ ಅಂತಿಮ ಹಂತ ತಲುಪಿದೆ. ಮೈದಾನದ ಸುತ್ತಲೂ ಭದ್ರತಾ ಕಾರಣಕ್ಕಾಗಿ ಬ್ಯಾರಿಕೇಡ್ ಹಾಗೂ ಕಬ್ಬಿಣದ ಶೀಟ್‌ಗಳಿಂದ ತಡೆಗೋಡೆಗಳನ್ನು ನಿರ್ಮಿಸಲಾಗುತ್ತಿದೆ.

ನಿತ್ಯ ಎರಡು ಪಂದ್ಯಗಳು — ಮಧ್ಯಾಹ್ನ 3.15 ಹಾಗೂ ಸಂಜೆ 7.15ಕ್ಕೆ — ನಡೆಯಲಿವೆ. ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಸ್ಪರ್ಧಿಸಲಿವೆ.

 

 

LEAVE A REPLY

Please enter your comment!
Please enter your name here

eight + 10 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you