ಕ್ರಿಕೆಟ್ಏಷ್ಯಾ ಕಪ್‌ಗೆ ಕಾತರ – ಮಂಗಳವಾರ ಪ್ರಕಟವಾಗಲಿದೆ ಟೀಮ್ ಇಂಡಿಯಾ

ಏಷ್ಯಾ ಕಪ್‌ಗೆ ಕಾತರ – ಮಂಗಳವಾರ ಪ್ರಕಟವಾಗಲಿದೆ ಟೀಮ್ ಇಂಡಿಯಾ

-

- Advertisment -spot_img

 

ಏಷ್ಯಾ ಕಪ್‌ಗೆ ಕಾತರ – ಮಂಗಳವಾರ ಪ್ರಕಟವಾಗಲಿದೆ ಟೀಮ್ ಇಂಡಿಯಾ

ಏಷ್ಯಾ ಕಪ್‌ಗಾಗಿ ಕ್ರಿಕೆಟ್ ಜಗತ್ತು ಸಜ್ಜಾಗುತ್ತಿದೆ. ಯುಎಇಯಲ್ಲಿ ನಡೆಯಲಿರುವ ಟೂರ್ನಿಗೆ ಕೆಲವೇ ವಾರಗಳು ಬಾಕಿ ಇರುವಾಗ, ಅಭಿಮಾನಿಗಳು ಭಾರತೀಯ ತಂಡದ ಘೋಷಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಮಂಗಳವಾರ (19) ಭಾರತೀಯ ತಂಡವನ್ನು ಘೋಷಿಸುವ ನಿರೀಕ್ಷೆಯಿದೆ. ಬಹಳಾ ಸಮಯದ ನಂತರ ಭಾರತ ತಂಡ ಟಿ20ಗೆ ಮರಳುತ್ತಿರುವ ಟೂರ್ನಿಯೂ ಇದಾಗಿದೆ.

ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲಿರುವ ಏಷ್ಯಾಕಪ್, ಈ ವರ್ಷ ಭಾರತ ತಂಡ ಆಡಲಿರುವ ಕೊನೆಯ ಅಂತರರಾಷ್ಟ್ರೀಯ ಪಂದ್ಯಾವಳಿಯಾಗಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ, ಅವರು ಅತ್ಯಂತ ಆಕ್ರಮಣಕಾರಿ ಯುವ ತಂಡವನ್ನು ಕಣಕ್ಕಿಳಿಸಲು ತಯಾರಿ ನಡೆಸುತ್ತಿದ್ದಾರೆ. ಹಾಲಿ ಚಾಂಪಿಯನ್ ಆಗಿರುವ ಭಾರತವು ಈ ಬಾರಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಶೀಘ್ರದಲ್ಲೇ ಭಾರತೀಯ ತಂಡವನ್ನು ಘೋಷಿಸಲಿದೆ. ಮಂಗಳವಾರ ತಂಡವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿದುಬಂದಿದೆ. ಐಪಿಎಲ್ ಮೂಲಕ ಟಿ-20 ಸ್ವರೂಪದಲ್ಲಿ ಅನೇಕ ಹೊಸ ಆಟಗಾರರು ಉದಯಿಸಿದ ಹಿನ್ನಲೆಯಲ್ಲಿ, ತಂಡದ ಅಂತಿಮ ಆಯ್ಕೆ ಪ್ರಕ್ರಿಯೆ ಈ ಬಾರಿ ಹೆಚ್ಚಿನ ಸವಾಲಿನದ್ದಾಗಿದೆ. ಆದ್ದರಿಂದ, ಏಷ್ಯಾ ಕಪ್‌ಗಾಗಿ ಭಾರತದ ಅಂತಿಮ ತಂಡವನ್ನು ಆಯ್ಕೆ ಮಾಡಲು ಆಯ್ಕೆದಾರರು ತಲೆ ಕೆಡಿಸಿಕೊಳ್ಳಬೇಕಾಗುತ್ತದೆ.

ಭಾರತೀಯ ಕ್ರಿಕೆಟ್ ಈಗ ಒಂದೇ ಬಾರಿಗೆ ಒಂದಕ್ಕಿಂತ ಹೆಚ್ಚು ತಂಡಗಳನ್ನು ಆಡಿಸುವಷ್ಟು ಪ್ರತಿಭಾನ್ವಿತ ತಂಡವನ್ನು ಹೊಂದಿದೆ. ಟೀಮ್ ಇಂಡಿಯಾದಲ್ಲಿ ಇಷ್ಟೊಂದು ಪ್ರತಿಭಾನ್ವಿತ ಆಟಗಾರರಿರುವುದರಿಂದ, ಏಷ್ಯಾಕಪ್‌ಗೆ ಭಾರತೀಯ ತಂಡವನ್ನು ಆಯ್ಕೆ ಮಾಡುವುದು ತುಂಬಾ ಕಷ್ಟಕರವಾಗಿದೆ.

 

 

LEAVE A REPLY

Please enter your comment!
Please enter your name here

3 × 3 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you