ಕ್ರಿಕೆಟ್ನವೆಂಬರ್ 28ರಿಂದ ಡಿಸೆಂಬರ್ 1ರ ದಾವಣಗೆರೆಯಲ್ಲಿ ಎಸ್.ಎಸ್.ಶ್ಯಾಮನೂರು ಡೈಮಂಡ್, ಶಿವಗಂಗಾ ಕಪ್-2019

ನವೆಂಬರ್ 28ರಿಂದ ಡಿಸೆಂಬರ್ 1ರ ದಾವಣಗೆರೆಯಲ್ಲಿ ಎಸ್.ಎಸ್.ಶ್ಯಾಮನೂರು ಡೈಮಂಡ್, ಶಿವಗಂಗಾ ಕಪ್-2019

-

- Advertisment -spot_img

ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ, ದಾವಣಗೆರೆ ವಿಧಾನ‌ಸಭಾ ಸದಸ್ಯ ಶ್ಯಾಮನೂರು ಶಿವಶಂಕರಪ್ಪನವರ ಧರ್ಮಪತ್ನಿ ದಿ||ಪಾರ್ವತಮ್ಮ ರವರ ಸವಿನೆನಪಿನ ಅಂಗವಾಗಿ, ಶಿವಗಂಗಾ ಟ್ರಾನ್ಸ್ ಪೋರ್ಟ್ ಮಾಲಿಕ ಶ್ರೀನಿವಾಸ್ ಶಿವಗಂಗಾ ಪ್ರಾಯೋಜಕತ್ವದಲ್ಲಿ, ಮುನ್ಸಿಪಾಲಿಟಿ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ, M.L.A ಆಪ್ತಕಾರ್ಯದರ್ಶಿ ಕುರುಡಿ ಗಿರೀಶ್ ರವರ ಸಹಕಾರದೊಂದಿಗೆ ದಾವಣಗೆರೆ ತಂಡದ ಮಾಲೀಕ, ಕ್ರೀಡಾ ಪ್ರೋತ್ಸಾಹಕ ಜಯಪ್ರಕಾಶ್ ಗೌಡರ ದಕ್ಷ ಸಾರಥ್ಯದಲ್ಲಿ, ನಾಯಕ ಹಾಲಪ್ಪ ಸಾರಥಿ ಹಾಗೂ ತಂಡದ ಸಹಕಾರದೊಂದಿಗೆ ದಾವಣಗೆರೆಯ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನವೆಂಬರ್ 28 ರಿಂದ ಡಿಸೆಂಬರ್ 1 ರ ತನಕ 4 ದಿನಗಳ ಹೊನಲು ಬೆಳಕಿನ ಪಂದ್ಯಾಕೂಟ ನಡೆಯಲಿದೆ.

ಸತತ 12 ನೇ ಬಾರಿಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಈ ಪಂದ್ಯಾಕೂಟ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತ್ಯಂತ ವಿಜೃಂಭಣೆ ಹಾಗೂ ವ್ಯವಸ್ಥಿತ ಪಂದ್ಯಾಕೂಟವೆಂದು ಪರಿಗಣಿಸಲ್ಪಡುತ್ತಿದೆ.ಕಳೆದ ಒಂದು ತಿಂಗಳಿನಿಂದ ಪಿಚ್ ಹಾಗೂ ಸುಸಜ್ಜಿತ ಕ್ರೀಡಾಂಗಣದ ನಿರ್ಮಾಣಕ್ಕಾಗಿ ದಾವಣಗೆರೆಯ ತಂಡ ಬಹಳಷ್ಟು ಶ್ರಮಿಸುತ್ತಿದೆ.

ಪ್ರಥಮ‌ ಸ್ಥಾನಿ ತಂಡ 3,55,000 ನಗದು,ದ್ವಿತೀಯ 2,25,000 ಹಾಗೂ ತೃತೀಯ ಸ್ಥಾನಿ ತಂಡ 1,25,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ‌. ಜೊತೆಯಾಗಿ ವೈಯಕ್ತಿಕ ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಗುತ್ತಿದೆ.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು M.Sports ಬಿತ್ತರಿಸಲಿದ್ದು, ವೀಕ್ಷಕ ವಿವರಣೆಕಾರರಾಗಿ ರಾಜ್ಯದ ಪ್ರಸಿದ್ಧ ಕಾಮೆಂಟೇಟರ್ಸ್ ಪ್ರಶಾಂತ್ ಅಂಬಲಪಾಡಿ ಹಾಗೂ ವಿನಯ್ ಉದ್ಯಾವರ ಭಾಗವಹಿಸಲಿದ್ದಾರೆಂದು ಟೂರ್ನಮೆಂಟ್ ನ ಮೀಡಿಯಾ ಪಾರ್ಟ್ನರ್ “ಸ್ಪೋರ್ಟ್ಸ್ ಕನ್ನಡ”ಕ್ಕೆ ತಿಳಿಸಿದ್ದಾರೆ.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 5 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you