ಕ್ರಿಕೆಟ್ಭಾರತ-ಪಾಕಿಸ್ತಾನ ಪ್ರಶಸ್ತಿ ಕಾದಾಟ: ದಾಖಲೆ ಬರೆಯುವ ಕನಸಿನಲ್ಲಿ ಸೂರ್ಯಕುಮಾರ್

ಭಾರತ-ಪಾಕಿಸ್ತಾನ ಪ್ರಶಸ್ತಿ ಕಾದಾಟ: ದಾಖಲೆ ಬರೆಯುವ ಕನಸಿನಲ್ಲಿ ಸೂರ್ಯಕುಮಾರ್

-

- Advertisment -spot_img

ಭಾರತ-ಪಾಕಿಸ್ತಾನ ಪ್ರಶಸ್ತಿ ಕಾದಾಟ: ದಾಖಲೆ ಬರೆಯುವ ಕನಸಿನಲ್ಲಿ ಸೂರ್ಯಕುಮಾರ್

ದುಬೈ: ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿ ಇದೀಗ ಅಂತಿಮ ಹಂತಕ್ಕೆ ಕಾಲಿಟ್ಟಿದೆ. ಪ್ರಶಸ್ತಿ ಸುತ್ತಿನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಟೂರ್ನಿಯಲ್ಲಿ ಇದು ಉಭಯ ತಂಡಗಳ ಮೂರನೇ ಮುಖಾಮುಖಿ ಆಗಿದ್ದು, ಕಳೆದ ಎರಡು ಭಾನುವಾರಗಳಲ್ಲಿ ಎದುರು ಕಂಡಿರುವ ತಂಡಗಳು ಮೂರನೇ ಬಾರಿಗೆ ಮೈದಾನಕ್ಕಿಳಿಯುತ್ತಿವೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡವೇ ಪ್ರಶಸ್ತಿ ಗೆಲುವಿನ ಗರಿಮೆಯನ್ನು ಪಡೆಯಲಿದೆ.

ಅಜೇಯ ಭಾರತದ ಹ್ಯಾಟ್ರಿಕ್ ಗೆಲುವಿನ ಹಂಬಲ

ಭಾರತ ತಂಡವು ಲೀಗ್ ಹಂತದಿಂದ ಸೂಪರ್-4 ಹಂತದವರೆಗೆ ಸ್ಥಿರ ಪ್ರದರ್ಶನ ನೀಡುತ್ತಾ, ಅಜೇಯ ಓಟವನ್ನು ಮುಂದುವರಿಸಿದೆ. ಈ ವೇಳೆ ಭಾರತ ತಂಡವು ಪಾಕಿಸ್ತಾನ ವಿರುದ್ಧ ಒಂದೇ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸುವ ಮೂಲಕ ದಾಖಲೆ ನಿರ್ಮಿಸುವ ಕನಸಿನಲ್ಲಿದೆ.

ಟಾಸ್ ಮಹತ್ವದ ಪಾತ್ರ

ದುಬೈ ಪಿಚ್ ಅಂಕಿ-ಅಂಶಗಳ ಪ್ರಕಾರ ಎರಡನೇ ಬಾರಿಗೆ ಬ್ಯಾಟಿಂಗ್ ಮಾಡಿದ ತಂಡಗಳಿಗೆ ಹೆಚ್ಚಿನ ಗೆಲುವು ಸಿಕ್ಕಿರುವುದರಿಂದ, ಟಾಸ್ ಫಲಿತಾಂಶ ಪಂದ್ಯ ಫಲಿತಾಂಶಕ್ಕೆ ಮಹತ್ವದ ಪಾತ್ರವಹಿಸಲಿದೆ. ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು.

ಬಲಿಷ್ಠ ಟೀಮ್ ಇಂಡಿಯಾ

ಭಾರತದ ಬ್ಯಾಟಿಂಗ್ ಶಕ್ತಿ ತಂಡದ ಪ್ರಮುಖ ಬಲವಾಗಿದೆ. ಟೂರ್ನಿಯಲ್ಲೇ ಅತಿ ಹೆಚ್ಚು ರನ್ ಗಳಿಸಿದ ಅಭಿಷೇಕ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಶುಭಮನ್ ಗಿಲ್ ಸ್ಥಿರ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ. ನಾಯಕ ಸೂರ್ಯಕುಮಾರ್ ಯಾದವ್ ಈ ನಿರ್ಣಾಯಕ ಪಂದ್ಯದಲ್ಲಿ ದೊಡ್ಡ ಇನ್ನಿಂಗ್ಸ್ ಆಡುವುದು ತಂಡಕ್ಕೆ ಅಗತ್ಯವಾಗಿದೆ.

ಮಧ್ಯಮ ಕ್ರಮಾಂಕದ ತಿಲಕ್ ವರ್ಮಾ ಹಾಗೂ ಸಂಜು ಸ್ಯಾಮ್ಸನ್ ತಮ್ಮ ಮೇಲೆ ಇಟ್ಟ ನಂಬಿಕೆಗೆ ತಕ್ಕಂತೆ ಆಟ ಆಡುವುದು ಅಗತ್ಯ. ಆಲ್‌ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಮತೋಲನ ತರುವ ನಿರೀಕ್ಷೆಯಿದೆ.

ಬೌಲಿಂಗ್ ವಿಭಾಗದ ಸವಾಲು

ಜಸ್ಪ್ರೀತ್ ಬುಮ್ರಾ ಈ ಟೂರ್ನಿಯಲ್ಲಿ ತಮ್ಮ ಶ್ರೇಷ್ಠತೆಯನ್ನು ತೋರಲು ಸಾಧ್ಯವಾಗಿಲ್ಲ. ಫೈನಲ್‌ನಲ್ಲಿ ಅವರು ಬಿಗುವಿನ ದಾಳಿ ನಡೆಸಿ ತಂಡಕ್ಕೆ ಮುನ್ನಡೆ ನೀಡಬೇಕಿದೆ. ಸ್ಪಿನ್ ವಿಭಾಗದಲ್ಲಿ ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ಮಧ್ಯ ಓವರ್‌ಗಳಲ್ಲಿ ರನ್‌ಗಳಿಗೆ ಕಡಿವಾಣ ಹಾಕಿ ವಿಕೆಟ್ ಬೇಟೆ ನಡೆಸಬೇಕಿದೆ.

ಪಾಕಿಸ್ತಾನ ವಿರುದ್ಧದ ತಂತ್ರಗಳು

ಪಾಕಿಸ್ತಾನ ತಂಡದ ಆರಂಭಿಕರಾದ ಸಾಹಿಬ್‌ಜಾದಾ ಫರ್ಹಾನ್ ಮತ್ತು ಫಖರ್ ಜಮಾನ್ ಅವರನ್ನು ಶೀಘ್ರದಲ್ಲೇ ಪೆವಿಲಿಯನ್‌ಗೆ ಕಳುಹಿಸುವುದು ಭಾರತದ ಪ್ರಮುಖ ಗುರಿಯಾಗಿರುತ್ತದೆ. ಮಧ್ಯಮ ಕ್ರಮಾಂಕದಲ್ಲಿ ಮೊಹಮ್ಮದ್ ಹ್ಯಾರಿಸ್ ಹಾಗೂ ಕೆಳ ಕ್ರಮಾಂಕದಲ್ಲಿ ಶಾಹೀನ್ ಶಾ ಆಫ್ರಿದಿ ಅವರ ಸ್ಫೋಟಕ ಬ್ಯಾಟಿಂಗ್ ತಡೆಯುವುದು ನಿರ್ಣಾಯಕ. ಪಾಕಿಸ್ತಾನ ಬೌಲರ್‌ಗಳ ಲೈನ್ ಮತ್ತು ಲೆಂಥ್ ಹಾಳು ಮಾಡುವ ದಿಟ್ಟ ಬ್ಯಾಟಿಂಗ್ ನಡೆಸುವುದು ತಂಡದ ಯೋಜನೆಗೆ ಸೇರಲಿದೆ.

ಸೂರ್ಯಕುಮಾರ್‌ನ ಕನಸು

ಈ ಫೈನಲ್‌ನಲ್ಲಿ ಗೆಲುವು ಸಾಧಿಸುವ ಮೂಲಕ ನಾಯಕ ಸೂರ್ಯಕುಮಾರ್ ಯಾದವ್, ಎಂಎಸ್ ಧೋನಿ ನೇತೃತ್ವದ ಎಲೈಟ್ ಕ್ಲಬ್‌ಗೆ ಸೇರುವ ಕನಸು ಸಾಕಾರಗೊಳಿಸುವ ಹಂಬಲದಲ್ಲಿದ್ದಾರೆ.

LEAVE A REPLY

Please enter your comment!
Please enter your name here

11 + 18 =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you