ಕ್ರಿಕೆಟ್ಹಿರಿಯ ಕ್ರಿಕೆಟ್ ಆಟಗಾರ ಯಾದವ್ ನಾಯ್ಕ್ ಕೆಮ್ಮಣ್ಣು ಅವರಿಗೆ ಸನ್ಮಾನ

ಹಿರಿಯ ಕ್ರಿಕೆಟ್ ಆಟಗಾರ ಯಾದವ್ ನಾಯ್ಕ್ ಕೆಮ್ಮಣ್ಣು ಅವರಿಗೆ ಸನ್ಮಾನ

-

- Advertisment -spot_img

 

ಹಿರಿಯ ಕ್ರಿಕೆಟ್ ಆಟಗಾರ ಯಾದವ್ ನಾಯ್ಕ್ ಕೆಮ್ಮಣ್ಣು ಅವರಿಗೆ ಸನ್ಮಾನ

ಮಲ್ಪೆ:

ತೋನ್ಸೆ ಹೆಲ್ತ್ ಸೆಂಟರ್ ಹಾಗೂ ಬೈಕಾಡಿ ಹಸನ್ ಸಾಹೇಬ್ ಮೆಮೊರಿಯಲ್ ಚಾರಿಟಬಲ್ ಟ್ರಸ್ಟ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಹೆಲ್ತ್ ಸೆಂಟರ್ ಸಭಾಭವನದಲ್ಲಿ ಇತ್ತೀಚೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಬ್ಯಾಂಕ್ ಮಂಗಳೂರು ವಲಯದ ಮಾಜಿ ಕ್ರಿಕೆಟ್ ಆಟಗಾರರಾಗಿರುವ ಹಿರಿಯ ಕ್ರೀಡಾಪಟು ಯಾದವ್ ನಾಯ್ಕ್ ಕೆಮ್ಮಣ್ಣು ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಪ್ಯಾರಡೈಸ್ ಬನ್ನಂಜೆ, ಕೆಮ್ಮಣ್ಣು ಕ್ರಿಕೆಟರ್ಸ್, ಸಿಂಡಿಕೇಟ್ ಬ್ಯಾಂಕ್ ಹಾಗೂ ಮಂಗಳೂರು ವಿಶ್ವವಿದ್ಯಾಲಯ ತಂಡಗಳನ್ನು ಪ್ರತಿನಿಧಿಸಿ ಯಶಸ್ವಿಯಾಗಿ ಕ್ರಿಕೆಟ್ ಆಡಿದ ಅನುಭವ ಹೊಂದಿರುವ ಯಾದವ್ ನಾಯ್ಕ್ ಕೆಮ್ಮಣ್ಣು ಅವರನ್ನು ಶಾಲು ಹೊದಿಸಿ ಗೌರವ ಪತ್ರದೊಂದಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕರಾದ ಬಿ. ಎಂ. ಜಾಫರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಜನಾರ್ಧನ ತೋನ್ಸೆ, ಕೆಮ್ಮಣ್ಣು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕುಸುಮ ರವೀಂದ್ರ, ನಿವೃತ್ತ ಪ್ರಿನ್ಸಿಪಾಲ್ ಡಾ. ಜೆರಾಲ್ಡ್ ಪಿಂಟೋ, ಮುಸ್ತಾಕ್ ಬೆಳ್ವೆ, ಮೊಹಮ್ಮದ್ ಇಮ್ತಿಯಾಜ್, ಮಾಹೆ–ಮಣಿಪಾಲದ ರಮೇಶ್ ಕಾಮತ್, ಬೈಕಾಡಿ ಹುಸೈನ್ ಸಾಹೇಬ್ ಹಾಗೂ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರುತಿ ಅವರು ಉಪಸ್ಥಿತರಿದ್ದರು.

ಗೌರವಿತರ ಪರಿಚಯ ಹಾಗೂ ಗೌರವ ಪತ್ರದ ವಾಚನವನ್ನು ಡಾ. ಶ್ರುತಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಐದು ಉದ್ಯೋಗಿಗಳನ್ನು ಅವರ ಉತ್ತಮ ಸೇವೆಯನ್ನು ಗುರುತಿಸಿ ವರ್ಷದ ಉದ್ಯೋಗಿ ಪ್ರಮಾಣಪತ್ರ ಹಾಗೂ ನಗದು ಬಹುಮಾನಗಳೊಂದಿಗೆ ಗಣ್ಯರ ಉಪಸ್ಥಿಯಲ್ಲಿ ಸನ್ಮಾನಿಸಲಾಯಿತು.

ಇದೇ ಸಂಧರ್ಭ ಕೆಮ್ಮಣ್ಣು ಕ್ರಿಕೇಟರ್ಸ್‌ನ ಆಸಿಫ್, ನೆಲ್ಸನ್, ಖ್ಯಾತ ಕ್ರಿಕೆಟರ್ ಸದಾಕತ್, ಊರ ಪರವೂರಿನ ಅಭಿಮಾನಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳ ಸಮ್ಮುಖದಲ್ಲಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀಮಾನ್ ರಮೇಶ್ ತಿಂಗಳಾಯ, ಡಾ. ಹಾಜಿ ಅಬ್ದುಲ್ ವಾಹಿದ್ ಹಾಗೂ ರೆಜಿನಾಲ್ಡ್ ಫುರ್ಟಾಡೋ ಇವರನ್ನೂ ಈ ಸಂದರ್ಭದಲ್ಲೇ ಶಾಲು ಹೊದಿಸಿ ಗೌರವ ಪತ್ರದೊಂದಿಗೆ ಗೌರವಿಸಲಾಯಿತು.

ಕಾರ್ಯಕ್ರಮದ ನಿರೂಪಣೆ ಹಾಗೂ ಧನ್ಯವಾದ ಅರ್ಪಣೆಯನ್ನು ಸಂಸ್ಥೆಯ ಮ್ಯಾನೇಜರ್ ಹರೀಶ್ ಶೆಟ್ಟಿ ಅವರು ನಿರ್ವಹಿಸಿದರು.

LEAVE A REPLY

Please enter your comment!
Please enter your name here

fifteen + 4 =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you