ಕ್ರಿಕೆಟ್ಕುಂದಾಪುರದಲ್ಲಿ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಸಮ್ಮರ್ ಕ್ರಿಕೆಟ್ ಕೋಚಿಂಗ್ ಶಿಬಿರ –...

ಕುಂದಾಪುರದಲ್ಲಿ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಸಮ್ಮರ್ ಕ್ರಿಕೆಟ್ ಕೋಚಿಂಗ್ ಶಿಬಿರ – 2026

-

- Advertisment -spot_img

ಕುಂದಾಪುರದಲ್ಲಿ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಸಮ್ಮರ್ ಕ್ರಿಕೆಟ್ ಕೋಚಿಂಗ್ ಶಿಬಿರ – 2026

ಕುಂದಾಪುರ: ಸ್ಥಳೀಯವಾಗಿ ಯುವ ಪ್ರತಿಭೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಚಕ್ರವರ್ತಿ ಕ್ರಿಕೆಟ್ ಕ್ಲಬ್, ಕುಂದಾಪುರ ವತಿಯಿಂದ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸಮ್ಮರ್ ಕ್ರಿಕೆಟ್ ಕೋಚಿಂಗ್ ಶಿಬಿರವನ್ನು ಏರ್ಪಡಿಸಲಾಗಿದೆ.

29 ಬಾರಿಗೆ ನಡೆಯುತ್ತಿರುವ ಈ ಶಿಬಿರವು ಏಪ್ರಿಲ್ 1ರಿಂದ ಏಪ್ರಿಲ್ 30, 2026ರವರೆಗೆ ನಡೆಯಲಿದ್ದು, ಕುಂದಾಪುರದ ಗಾಂಧಿ ಮೈದಾನದಲ್ಲಿ ಪ್ರತಿದಿನ ತರಬೇತಿ ನೀಡಲಾಗುತ್ತದೆ. ಬೆಳಿಗ್ಗೆ 7.00ರಿಂದ 9.00ರವರೆಗೆ ಹಾಗೂ ಸಂಜೆ 4.00ರಿಂದ 6.00ರವರೆಗೆ ಎರಡು ಅವಧಿಗಳಲ್ಲಿ ತರಗತಿಗಳು ನಡೆಯಲಿವೆ.

ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಸೇರಿದಂತೆ ಕ್ರಿಕೆಟ್‌ನ ಮೂಲ ತಂತ್ರಗಳನ್ನು ಪರಿಣಿತರ ಮೂಲಕ ತರಬೇತಿ ನೀಡಲಾಗುತ್ತದೆ. ಎರಡು ಪ್ರಾಕ್ಟಿಸ್ ಪಿಚ್‌ಗಳು (ಒಂದು ಹೊಸ ಆಸ್ಟ್ರೋ ಟರ್ಫ್ ಪಿಚ್ ಸೇರಿ) ಲಭ್ಯವಿದ್ದು, ಜೂನಿಯರ್ (13 ವರ್ಷ ಒಳಗಿನವರು) ಮತ್ತು ಸೀನಿಯರ್ (14 ವರ್ಷ ಮೇಲ್ಪಟ್ಟವರು) ವಿಭಾಗಗಳಲ್ಲಿ ಪ್ರತ್ಯೇಕ ಗುಂಪುಗಳನ್ನು ರಚಿಸಲಾಗುತ್ತದೆ. ಶಿಬಿರದ ಅವಧಿಯಲ್ಲಿ ಒಳಾಂಗಣ ಮತ್ತು ಇಂಟರ್-ಕ್ಯಾಂಪ್ ಪಂದ್ಯಾವಳಿಗಳನ್ನೂ ಆಯೋಜಿಸಲಾಗುತ್ತದೆ.

ಈ ಸಮ್ಮರ್ ಕ್ಯಾಂಪ್ ಗೆ ರೂ. 2,000 ಶುಲ್ಕ ನಿಗದಿಪಡಿಸಲಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪ್ರದೀಪ್ ವಾಜ್ (9448252649), ಅರ್ಮಾನ್ (7676075893) ಅಥವಾ ಸುಕೇಶ್ (9535365456) ಅವರನ್ನು ಸಂಪರ್ಕಿಸಬಹುದು.

ಈ ಶಿಬಿರವು ಯುವಕರಿಗೆ ಉತ್ತಮ ತರಬೇತಿ ಹಾಗೂ ಕ್ರೀಡಾ ಕೌಶಲ್ಯ ವೃದ್ಧಿಗೆ ಉತ್ತಮ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

8 − 2 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you