ಕ್ರಿಕೆಟ್ತಬ್ಬು-ಶಂಕರ್ ಕರಾಮತ್ತು-ಜೆ.ಪಿ ಪಾರ್ಕ್ ನಲ್ಲಿ ಜೈ ಕರ್ನಾಟಕ ಲೆಜೆಂಡ್ಸ್

ತಬ್ಬು-ಶಂಕರ್ ಕರಾಮತ್ತು-ಜೆ.ಪಿ ಪಾರ್ಕ್ ನಲ್ಲಿ ಜೈ ಕರ್ನಾಟಕ ಲೆಜೆಂಡ್ಸ್

-

- Advertisment -spot_img

ಬೆಂಗಳೂರಿನ ಜೆ.ಪಿ ಪಾರ್ಕ್ ಹಾಗೂ ರೈಲ್ವೇಸ್ ಅಂಗಣದಲ್ಲಿ ನಡೆದ Y.P.L ಪಂದ್ಯಾವಳಿಯ 40 ರ ವಯೋಮಿತಿ “ಲೆಜೆಂಡ್ಸ್ ಕಪ್” ನ್ನು ಸೆಂಥಿಲ್ ಅಶ್ವತ್ಥ್ ಕುಮಾರ್ ಸಾರಥ್ಯದ ಜೈ ಕರ್ನಾಟಕ ಬೆಂಗಳೂರಿನ ಸೀನಿಯರ್ಸ್ ತಂಡ ಗೆದ್ದುಕೊಂಡಿದೆ.

12 ಹಿರಿಯ ತಂಡಗಳು ಭಾಗವಹಿಸಿದ್ದ ಈ ಟೂರ್ನಿಯ ಲೀಗ್ ಹಂತದ ಹೋರಾಟದ ಬಳಿಕ ನಡೆದ 2 ಸೆಮಿಫೈನಲ್ಸ್ ಪ್ರೇಕ್ಷಕರನ್ನು ರೋಮಾಂಚನದ ತುತ್ತತುದಿಗೆ ಕೊಂಡೊಯ್ದಿತ್ತು.

ಪ್ರಥಮ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು ಹಿರಿಯರ ತಂಡ ನೀಡಿದ್ದ ಬೃಹತ್ ಮೊತ್ತವನ್ನು ಸಾಯಿ ಸವ್ಯಸಾಚಿ ತಂಡದ ಮೌನ್ಸಿ ಕೊನೆಯ ಎರಡು ಎಸೆತದಲ್ಲಿ ಬಾರಿಸಿದ ಅಬ್ಬರದ ಸಿಕ್ಸರ್ ಗಳು ಸವ್ಯಸಾಚಿ ತಂಡವನ್ನು ಫೈನಲ್ ಗೆ ಕೊಂಡೊಯ್ದರೆ,

ದ್ವಿತೀಯ ಸೆಮಿಫೈನಲ್ ನಲ್ಲಿ ಆನಂದ್ ಇಲೆವೆನ್ ವಿರುದ್ಧ ಜೈ ಕರ್ನಾಟಕದ ಎಸೆತಗಾರ ಶಂಕರ್ ಕೊನೆಯ ಓವರ್ ನ ಸ್ಪಿನ್ ಕರಾಮತ್ತಿಗೆ ಜೈ ಕರ್ನಾಟಕ ಫೈನಲ್ ಗೆ ತೇರ್ಗಡೆಗೊಂಡಿತ್ತು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೈ ಕರ್ನಾಟಕ ಆರಂಭಿಕ ತಬ್ರೇಜ್(ಟಬ್ಬು) ಬಿರುಸಿನ ಸಿಕ್ಸರ್ ಬೌಂಡರಿಗಳ ಮೂಲಕ 22 ಎಸೆತಗಳಲ್ಲಿ 44 ರನ್ ಗಳಿಸಿ ಎದುರಾಳಿ ತಂಡಕ್ಕೆ 63 ರನ್ ಗಳ ಕಠಿಣ ಗುರಿಯನ್ನು ನೀಡಿತ್ತು.
ಆದರೆ ಸವ್ಯಸಾಚಿಯ ಪರವಾಗಿ‌ ಆರಂಭಿಕ ಆಟಗಾರರಾಗಿ ಕ್ರೀಸಿಗಿಳಿದ  ಶೇಖರ್ ಹಾಗೂ ಮೌನ್ಸಿ ಕ್ರೀಸಿಗೆ ತಳವೂರಿ ನಿಂತು 4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದ್ದರು.

ಸವ್ಯಸಾಚಿಯ ಅನಾಯಾಸ ಗೆಲುವಿನ ನಾಗಾಲೋಟಕ್ಕೆ ಜೈ ಕರ್ನಾಟಕದ ವೇಗಿ ಶೇಕ್ ಲೀ ಬ್ರೇಕ್ ಹಾಕಿದ್ದರು. 2 ಓವರ್ ಗಳಲ್ಲಿ ಕೇವಲ 6 ರನ್ ನೀಡಿ ಅಮೂಲ್ಯ 3 ವಿಕೆಟ್ ಉರುಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಜೈ ಕರ್ನಾಟಕದ ಪರವಾಗಿ ವೀಲ್ &ಎಕ್ಸೆಲ್ ಹಾಗೂ ಜಸ್ಟ್ ಕ್ರಿಕೆಟ್ ಅಕಾಡೆಮಿಯ ಬ್ಯಾಟಿಂಗ್ ಕೋಚ್ ಮುಕೇಶ್ ಹಾಗೂ ಇಂಡೋರ್ ಮಾಸ್ಟರ್ಸ್ ವರ್ಲ್ಡ್ ಕಪ್ ಭಾರತ ತಂಡವನ್ನು ಪ್ರತಿನಿಧಿಸಿದ್ದ ನಾಗೇಶ್ ಸಿಂಗ್,ತಂಡವನ್ನು ಹಲವು ವರ್ಷಗಳ ಕಾಲ ಮುನ್ನಡೆಸಿದ್ದ ನಾಯಕ ಆರ್.ಮನೋಹರನ್, ನಾಗೇಂದ್ರ ಚಂದ್ರಶೇಖರ್,ಬಾಬು,ಸಾಂಬಾಜಿ ಯಂತಹ ಹಿರಿಯ ಆಟಗಾರರು ಕಣಕ್ಕಿಳಿದಿದ್ದರು.

ಜೈ ಕರ್ನಾಟಕ ಹಿರಿಯರ ತಂಡ ಈ ಪಂದ್ಯಾವಳಿಯನ್ನು ಕೈಗೆ ಕಪ್ಪು ಪಟ್ಟಿ ಧರಿಸಿ ಆಡಿದ್ದು,ಲೆಜೆಂಡ್ಸ್ ಕಪ್ ನ ರೋಚಕ ಗೆಲುವನ್ನು ಇತ್ತೀಚೆಗಷ್ಟೇ ಅಗಲಿದ ಟೆನ್ನಿಸ್ ಕ್ರಿಕೆಟ್ ನ ದಂತಕಥೆ, ಹಿರಿಯ ಆಟಗಾರ ಮೆರ್ವಿನ್ ಹಾಗೂ ನರಹರಿ (ಕುಮ್ಮಿ) ಯವರಿಗೆ ಸಮರ್ಪಿಸಿದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 6 =

Latest news

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...
- Advertisement -spot_imgspot_img

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

Must read

- Advertisement -spot_imgspot_img

You might also likeRELATED
Recommended to you