ಕ್ರಿಕೆಟ್ವೆಂಕಟರಮಣ ಟ್ರೋಫಿ-2020 ಸ್ವರ್ಣ ಖಚಿತ ಟ್ರೋಫಿ-ಶಿಸ್ತುಬದ್ಧ ಪಂದ್ಯಾವಳಿ

ವೆಂಕಟರಮಣ ಟ್ರೋಫಿ-2020 ಸ್ವರ್ಣ ಖಚಿತ ಟ್ರೋಫಿ-ಶಿಸ್ತುಬದ್ಧ ಪಂದ್ಯಾವಳಿ

-

- Advertisment -spot_img

“ವೆಂಕಟರಮಣ ಟ್ರೋಫಿ-2020
ಸ್ವರ್ಣ ಖಚಿತ ಟ್ರೋಫಿ-ಶಿಸ್ತುಬದ್ಧ ಪಂದ್ಯಾವಳಿ” ಜನವರಿ 3,4 ಹಾಗೂ 5 ರಂದು…

ಮೂರು ದಶಕಗಳಿಂದ ಸತತ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಹಾಗೂ ಸಾಂಸ್ಕೃತಿಕ
ಕಾರ್ಯಗಳಲ್ಲಿ ಮಾತ್ರವಲ್ಲದೇ,ಆದರ್ಶ ನಾಯಕ ಪ್ರವೀಣ್‌ ಪಿತ್ರೋಡಿ ನಾಯಕತ್ವದಲ್ಲಿ ಕ್ರೀಡಾ ಲೋಕದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ತೊಡಗಿಸಿಕೊಂಡು
15 ಬಾರಿ ರಾಜ್ಯದ ಶಿಸ್ತಿನ ತಂಡ ಪ್ರಶಸ್ತಿ ಪಡೆದು ಇತಿಹಾಸ ಬರೆದ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್” ಪಿತ್ರೋಡಿ.

ಟೆನ್ನಿಸ್ ಕ್ರಿಕೆಟ್ ವಿನೂತನ ಪ್ರಯೋಗಗಳನ್ನು ನಡೆಸಿ,ಯಶಸ್ಸು ಕಂಡ ವೆಂಕಟರಮಣ ಸಂಸ್ಥೆ
ಈ ಬಾರಿ ರಾಜ್ಯ ಮಟ್ಟವಲ್ಲದೇ,ಜಿಲ್ಲಾ ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೂ ಸಮಾನ‌ ಅವಕಾಶ ಕಲ್ಪಿಸಿದ್ದು, ಜನವರಿ 3,4 ಹಾಗೂ 5 ಜನವರಿಯಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ
ಸತತ ಮೂರು ದಿನಗಳ ಕಾಲ ಹಗಲಿನಲ್ಲಿ ರಾಜ್ಯ ಮಟ್ಟದ “ವೆಂಕಟರಮಣ ಟ್ರೋಫಿ-2020” ಪಂದ್ಯಾವಳಿಯನ್ನು ಆಯೋಜಿಸಿದೆ.

ಈಗಾಗಲೇ 24 ತಂಡಗಳು ಪ್ರವೇಶಾತಿ ನೋಂದಾಯಿಸಿಕೊಂಡಿದ್ದು,
3 ಶುಕ್ರವಾರದಂದು ಗ್ರಾಮೀಣ ತಂಡಗಳು ಸ್ಪರ್ಧಿಸಿದರೆ,4 ರಂದು ಜಿಲ್ಲಾ ಮಟ್ಟದ ತಂಡಗಳು ಹಾಗೂ 5 ರವಿವಾರದಂದು ರಾಜ್ಯದ ಪ್ರತಿಷ್ಟಿತ ತಂಡಗಳು ಸೆಣಸಾಡಲಿದೆ.

ಸ್ವರ್ಣ ಖಚಿತ ಮಿನುಗುವ ಟ್ರೋಫಿಯೊಂದಿಗೆ ನಗದು ಬಹುಮಾನಗಳು.

ಪ್ರಥಮ‌ ಸ್ಥಾನಿ ತಂಡಕ್ಕೆ 1 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ‌ ತಂಡಕ್ಕೆ 50 ಸಾವಿರ ನಗದು ಸಹಿತ,2017 ರ ಪಂದ್ಯಾವಳಿಯಲ್ಲಿ ಬೆಳ್ಳಿಯ ಟ್ರೋಫಿ ನೋಡಿ ದಾಖಲೆ ಬರೆದಿದ್ದ ಸಂಸ್ಥೆ,ಈ ಬಾರಿ
ಟೆನ್ನಿಸ್ ಬಾಲ್ ಇತಿಹಾಸದಲ್ಲಿಯೇ
ಇದೇ ಮೊದಲ ಬಾರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ
ಸ್ವರ್ಣ ಖಚಿತ ಮಿನುಗುವ ಟ್ರೋಫಿಯನ್ನು ನೀಡಿ ವಿನೂತನ ಮೈಲಿಗಲ್ಲನ್ನು ಸ್ಥಾಪಿಸಲಿದೆ.
ಪಂದ್ಯಾವಳಿಯ ನೇರ ಪ್ರಸಾರವನ್ನು
ವೆಂಕಟರಮಣ ಸಂಸ್ಥೆಯ ಸದಸ್ಯರೇ ಖುದ್ದಾಗಿ ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಯೂ ಟ್ಯೂಬ್
ಚಾನೆಲ್ ನಲ್ಲಿ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಿದ್ದಾರೆ.

ಶಿಸ್ತಿಗಾಗಿ ಕ್ರಿಕೆಟ್,ಸಮಾಜಕ್ಕಾಗಿ ತಂಡ

ಶಿಸ್ತಿಗಾಗಿ ಕ್ರಿಕೆಟ್, ಸಮಾಜಕ್ಕಾಗಿ ತಂಡ ಧ್ಯೇಯೋದ್ಧೇಶದಡಿ ಪಂದ್ಯಾವಳಿ ನಡೆಯಲಿದ್ದು,ವೆಂಕಟರಮಣ ಸಂಸ್ಥೆ
ಮಧ್ಯಮುಕ್ತ ಕ್ರಿಕೆಟ್ ಹಾಗೂ ಸಮಯಕ್ಕೆ ಹೆಚ್ಚಿನ‌ ಆದ್ಯತೆ ನೀಡುತ್ತಾ ಬಂದಿದ್ದು,
ಪ್ರತಿ ಪಂದ್ಯಕ್ಕೂ
ಡೋಪಿಂಗ್ ಟೆಸ್ಟ್ ನಡೆಸಲಿದ್ದು, ಯಾವುದೇ ಆಟಗಾರ ಮಧ್ಯ,ಮಾದಕ ದ್ರವ್ಯ ಸೇವಿಸಿದ್ದು ಕಂಡು ಬಂದಲ್ಲಿ ಟೂರ್ನಿಯಿಂದ ಹೊರಗಿರಿಸಲಾಗುತ್ತದೆ.ಭಾಗವಹಿಸುವ ತಂಡಗಳು ಪಂದ್ಯ ಪ್ರಾರಭವಾಗುವ 15 ನಿಮಿಷ ಮುಂಚಿತವಾಗಿ ಉಪಸ್ಥಿತಿ ತೋರ್ಪಡಿಸಬೇಕಾಗಿದೆ.
ಸಮಾರೋಪ ಸಮಾರಂಭದಲ್ಲಿ ಮಾದಕ ದ್ರವ್ಯ ನಿಷೇಧ ದ ಬಗ್ಗೆ ವಿಶೇಷ ಕಾರ್ಯಕ್ರಮ,ವಿವಿಧ ಕ್ಷೇತ್ರಗಳ‌ ಸಾಧಕರಿಗೆ ಸನ್ಮಾನ,ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ಸಂಸ್ಥೆಯ ರಕ್ತದಾನಿ ಸದಸ್ಯರುಗಳಿಗೆ ಹಾಗೂ ಉದ್ಯಾವರ ಕ್ರಿಕೆಟ್ ಪ್ರತಿಷ್ಟೆಯನ್ನು ಉಳಿಸಿದ ಹೆಮ್ಮೆಯ ತಂಡಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.ಉಡುಪಿ ಟೈಮ್ಸ್ ಹಾಗೂ ಸ್ಪೋರ್ಟ್ಸ್‌ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆಯೆಂದು
ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

11 − two =

Latest news

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...
- Advertisement -spot_imgspot_img

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

Must read

- Advertisement -spot_imgspot_img

You might also likeRELATED
Recommended to you