ಕ್ರಿಕೆಟ್ವೆಂಕಟರಮಣ ಟ್ರೋಫಿ-2020 ಸ್ವರ್ಣ ಖಚಿತ ಟ್ರೋಫಿ-ಶಿಸ್ತುಬದ್ಧ ಪಂದ್ಯಾವಳಿ

ವೆಂಕಟರಮಣ ಟ್ರೋಫಿ-2020 ಸ್ವರ್ಣ ಖಚಿತ ಟ್ರೋಫಿ-ಶಿಸ್ತುಬದ್ಧ ಪಂದ್ಯಾವಳಿ

-

- Advertisment -spot_img

“ವೆಂಕಟರಮಣ ಟ್ರೋಫಿ-2020
ಸ್ವರ್ಣ ಖಚಿತ ಟ್ರೋಫಿ-ಶಿಸ್ತುಬದ್ಧ ಪಂದ್ಯಾವಳಿ” ಜನವರಿ 3,4 ಹಾಗೂ 5 ರಂದು…

ಮೂರು ದಶಕಗಳಿಂದ ಸತತ ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಹಾಗೂ ಸಾಂಸ್ಕೃತಿಕ
ಕಾರ್ಯಗಳಲ್ಲಿ ಮಾತ್ರವಲ್ಲದೇ,ಆದರ್ಶ ನಾಯಕ ಪ್ರವೀಣ್‌ ಪಿತ್ರೋಡಿ ನಾಯಕತ್ವದಲ್ಲಿ ಕ್ರೀಡಾ ಲೋಕದಲ್ಲಿ ಅತ್ಯಂತ ಶಿಸ್ತುಬದ್ಧವಾಗಿ ತೊಡಗಿಸಿಕೊಂಡು
15 ಬಾರಿ ರಾಜ್ಯದ ಶಿಸ್ತಿನ ತಂಡ ಪ್ರಶಸ್ತಿ ಪಡೆದು ಇತಿಹಾಸ ಬರೆದ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್” ಪಿತ್ರೋಡಿ.

ಟೆನ್ನಿಸ್ ಕ್ರಿಕೆಟ್ ವಿನೂತನ ಪ್ರಯೋಗಗಳನ್ನು ನಡೆಸಿ,ಯಶಸ್ಸು ಕಂಡ ವೆಂಕಟರಮಣ ಸಂಸ್ಥೆ
ಈ ಬಾರಿ ರಾಜ್ಯ ಮಟ್ಟವಲ್ಲದೇ,ಜಿಲ್ಲಾ ಹಾಗೂ ಗ್ರಾಮೀಣ ಮಟ್ಟದ ಪ್ರತಿಭೆಗಳಿಗೂ ಸಮಾನ‌ ಅವಕಾಶ ಕಲ್ಪಿಸಿದ್ದು, ಜನವರಿ 3,4 ಹಾಗೂ 5 ಜನವರಿಯಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ
ಸತತ ಮೂರು ದಿನಗಳ ಕಾಲ ಹಗಲಿನಲ್ಲಿ ರಾಜ್ಯ ಮಟ್ಟದ “ವೆಂಕಟರಮಣ ಟ್ರೋಫಿ-2020” ಪಂದ್ಯಾವಳಿಯನ್ನು ಆಯೋಜಿಸಿದೆ.

ಈಗಾಗಲೇ 24 ತಂಡಗಳು ಪ್ರವೇಶಾತಿ ನೋಂದಾಯಿಸಿಕೊಂಡಿದ್ದು,
3 ಶುಕ್ರವಾರದಂದು ಗ್ರಾಮೀಣ ತಂಡಗಳು ಸ್ಪರ್ಧಿಸಿದರೆ,4 ರಂದು ಜಿಲ್ಲಾ ಮಟ್ಟದ ತಂಡಗಳು ಹಾಗೂ 5 ರವಿವಾರದಂದು ರಾಜ್ಯದ ಪ್ರತಿಷ್ಟಿತ ತಂಡಗಳು ಸೆಣಸಾಡಲಿದೆ.

ಸ್ವರ್ಣ ಖಚಿತ ಮಿನುಗುವ ಟ್ರೋಫಿಯೊಂದಿಗೆ ನಗದು ಬಹುಮಾನಗಳು.

ಪ್ರಥಮ‌ ಸ್ಥಾನಿ ತಂಡಕ್ಕೆ 1 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ‌ ತಂಡಕ್ಕೆ 50 ಸಾವಿರ ನಗದು ಸಹಿತ,2017 ರ ಪಂದ್ಯಾವಳಿಯಲ್ಲಿ ಬೆಳ್ಳಿಯ ಟ್ರೋಫಿ ನೋಡಿ ದಾಖಲೆ ಬರೆದಿದ್ದ ಸಂಸ್ಥೆ,ಈ ಬಾರಿ
ಟೆನ್ನಿಸ್ ಬಾಲ್ ಇತಿಹಾಸದಲ್ಲಿಯೇ
ಇದೇ ಮೊದಲ ಬಾರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ
ಸ್ವರ್ಣ ಖಚಿತ ಮಿನುಗುವ ಟ್ರೋಫಿಯನ್ನು ನೀಡಿ ವಿನೂತನ ಮೈಲಿಗಲ್ಲನ್ನು ಸ್ಥಾಪಿಸಲಿದೆ.
ಪಂದ್ಯಾವಳಿಯ ನೇರ ಪ್ರಸಾರವನ್ನು
ವೆಂಕಟರಮಣ ಸಂಸ್ಥೆಯ ಸದಸ್ಯರೇ ಖುದ್ದಾಗಿ ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ಯೂ ಟ್ಯೂಬ್
ಚಾನೆಲ್ ನಲ್ಲಿ ವೀಕ್ಷಿಸುವ ಸೌಲಭ್ಯವನ್ನು ಕಲ್ಪಿಸಿದ್ದಾರೆ.

ಶಿಸ್ತಿಗಾಗಿ ಕ್ರಿಕೆಟ್,ಸಮಾಜಕ್ಕಾಗಿ ತಂಡ

ಶಿಸ್ತಿಗಾಗಿ ಕ್ರಿಕೆಟ್, ಸಮಾಜಕ್ಕಾಗಿ ತಂಡ ಧ್ಯೇಯೋದ್ಧೇಶದಡಿ ಪಂದ್ಯಾವಳಿ ನಡೆಯಲಿದ್ದು,ವೆಂಕಟರಮಣ ಸಂಸ್ಥೆ
ಮಧ್ಯಮುಕ್ತ ಕ್ರಿಕೆಟ್ ಹಾಗೂ ಸಮಯಕ್ಕೆ ಹೆಚ್ಚಿನ‌ ಆದ್ಯತೆ ನೀಡುತ್ತಾ ಬಂದಿದ್ದು,
ಪ್ರತಿ ಪಂದ್ಯಕ್ಕೂ
ಡೋಪಿಂಗ್ ಟೆಸ್ಟ್ ನಡೆಸಲಿದ್ದು, ಯಾವುದೇ ಆಟಗಾರ ಮಧ್ಯ,ಮಾದಕ ದ್ರವ್ಯ ಸೇವಿಸಿದ್ದು ಕಂಡು ಬಂದಲ್ಲಿ ಟೂರ್ನಿಯಿಂದ ಹೊರಗಿರಿಸಲಾಗುತ್ತದೆ.ಭಾಗವಹಿಸುವ ತಂಡಗಳು ಪಂದ್ಯ ಪ್ರಾರಭವಾಗುವ 15 ನಿಮಿಷ ಮುಂಚಿತವಾಗಿ ಉಪಸ್ಥಿತಿ ತೋರ್ಪಡಿಸಬೇಕಾಗಿದೆ.
ಸಮಾರೋಪ ಸಮಾರಂಭದಲ್ಲಿ ಮಾದಕ ದ್ರವ್ಯ ನಿಷೇಧ ದ ಬಗ್ಗೆ ವಿಶೇಷ ಕಾರ್ಯಕ್ರಮ,ವಿವಿಧ ಕ್ಷೇತ್ರಗಳ‌ ಸಾಧಕರಿಗೆ ಸನ್ಮಾನ,ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ಸಂಸ್ಥೆಯ ರಕ್ತದಾನಿ ಸದಸ್ಯರುಗಳಿಗೆ ಹಾಗೂ ಉದ್ಯಾವರ ಕ್ರಿಕೆಟ್ ಪ್ರತಿಷ್ಟೆಯನ್ನು ಉಳಿಸಿದ ಹೆಮ್ಮೆಯ ತಂಡಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.ಉಡುಪಿ ಟೈಮ್ಸ್ ಹಾಗೂ ಸ್ಪೋರ್ಟ್ಸ್‌ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆಯೆಂದು
ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 + 20 =

Latest news

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...
- Advertisement -spot_imgspot_img

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...

Must read

- Advertisement -spot_imgspot_img

You might also likeRELATED
Recommended to you