11.4 C
London
Wednesday, May 1, 2024
Homeಕ್ರಿಕೆಟ್ಸಂಕ್ರಾಂತಿ ಕಪ್ ಗೆದ್ದು ಹೊಸವರ್ಷದ ಶುಭಾರಂಭಗೈದ ಜೈ ಕರ್ನಾಟಕ ಬೆಂಗಳೂರು

ಸಂಕ್ರಾಂತಿ ಕಪ್ ಗೆದ್ದು ಹೊಸವರ್ಷದ ಶುಭಾರಂಭಗೈದ ಜೈ ಕರ್ನಾಟಕ ಬೆಂಗಳೂರು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಹೆಬ್ಬಾಳ ಕ್ರಿಕೆಟರ್ಸ್ ವತಿಯಿಂದ ಮಕರ ಸಂಕ್ರಾಂತಿಯ ಪ್ರಯುಕ್ತ ನಡೆದ 2 ನೇ ರಾಜ್ಯ ಮಟ್ಟದ ಹಗಲಿನ ಪಂದ್ಯಾವಳಿ “ಸಂಕ್ರಾಂತಿ ಕಪ್ ಸೀಸನ್ 2 ನ್ನು ಸತತ 2 ನೇ ಬಾರಿ ಜೈ ಕರ್ನಾಟಕ ಬೆಂಗಳೂರು ಗೆದ್ದುಕೊಂಡಿತು.

16 ಬಲಿಷ್ಠ ತಂಡಗಳು ಭಾಗವಹಿಸಿದ್ದ ಪಂದ್ಯಾವಳಿಯ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು ಮೈಟಿ ತಂಡವನ್ನು ಹಾಗೂ ಜೈ ಕರ್ನಾಟಕ
ಜೆ.ಎಮ್.ಸಿ.ಎಮ್.ಬಿ.ಸಿ.ಸಿ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿದ್ದವು.

ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೈ ಕರ್ನಾಟಕದ ಉತ್ತಪ್ಪ 14 ಎಸೆತಗಳಲ್ಲಿ ಬಿರುಸಿನ 35 ರನ್ ಹಾಗೂ ಪ್ರದೀಪ್ ಇನ್ನಿಂಗ್ಸ್ ನ ಕೊನೆಯ ಹಂತದಲ್ಲಿ ಸಿಡಿಸಿದ ಹ್ಯಾಟ್ರಿಕ್ ಸಿಕ್ಸರ್ ನೆರವಿನಿಂದ 6 ಓವರ್ ಗಳಲ್ಲಿ 70 ರನ್ ಗಳಿಸಿತ್ತು.
ಚೇಸಿಂಗ್ ವೇಳೆ ಫ್ರೆಂಡ್ಸ್ ಬೆಂಗಳೂರು ನವೀನ್ ಬಿರುಸಿನ 27 ರನ್ ಗಳ ಹೊರತಾಗಿಯೂ,ಭಾಗೇದಾರಿಕೆಗೆ ಅವಕಾಶ ನೀಡದ
ಜೈ ಕರ್ನಾಟಕ ಬೌಲರ್ ಗಳ ಮೊನಚಾದ ದಾಳಿಯೆದುರು 42 ರನ್ ಗಳಷ್ಟೇ ಗಳಿಸಲು ಶಕ್ತವಾಯಿತು.

ಪ್ರಥಮ ಪ್ರಶಸ್ತಿ ವಿಜೇತ ಜೈ ಕರ್ನಾಟಕ 1 ಲಕ್ಷ,ರನ್ನರ್ಸ್
ಫ್ರೆಂಡ್ಸ್ ಬೆಂಗಳೂರು 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರೆ,
ಫ್ರೆಂಡ್ಸ್ ನ ಭರತ್ ಗಿಳಿಯಾರು ಬೆಸ್ಟ್ ಬೌಲರ್ ಅದೇ ತಂಡದ ನವೀನ್ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿ ಪಡೆದರೆ,
ಜೈ ಕರ್ನಾಟಕ ಡೇವಿಡ್ ಬೆಸ್ಟ್ ಕೀಪರ್ ಹಾಗೂ ಸರಣಿಯುದ್ದಕ್ಕೂ ಸರ್ವಾಂಗೀಣ ಪ್ರದರ್ಶನ ತೋರಿದ ಸಚಿನ್ ಮಹಾದೇವ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

ಪಂದ್ಯಾವಳಿಯ ನೇರ ಪ್ರಸಾರವನ್ನು M.Sports ಬಿತ್ತರಿಸಿದರೆ,ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ತೀರ್ಪುಗಾರರಾಗಿ,ವೀಕ್ಷಕ ವಿವರಣೆಯಲ್ಲಿ ಉಡುಪಿಯ ಭಾನುಪ್ರಕಾಶ್ ಕಾರ್ಯ ನಿರ್ವಹಿಸಿದ್ದರು.
ಆರ್‌.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eighteen − two =