ಬ್ಯಾಡ್ಮಿಂಟನ್ಭಾರತದ ಅನುಭವಿ ಬ್ಯಾಡ್ಮಿಂಟನ್‌ ಪಟುಗಳಾದ ಸೈನಾ, ಶ್ರೀಕಾಂತ್‌ ಮೇಲೆ ನಿರೀಕ್ಷೆ, ಒಲಿಂಪಿಕ್ಸ್‌ಗೆ...

ಭಾರತದ ಅನುಭವಿ ಬ್ಯಾಡ್ಮಿಂಟನ್‌ ಪಟುಗಳಾದ ಸೈನಾ, ಶ್ರೀಕಾಂತ್‌ ಮೇಲೆ ನಿರೀಕ್ಷೆ, ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇನ್ನೂ ಸಾಧ್ಯವಾಗಿಲ್ಲ

-

- Advertisment -spot_img

ಬ್ಯಾಂಕಾಕ್‌ : ಭಾರತದ ಅನುಭವಿ ಬ್ಯಾಡ್ಮಿಂಟನ್‌ ಪಟುಗಳಾದ ಸೈನಾ ನೆಹ್ವಾಲ್‌ ಮತ್ತು ಕಿದಂಬಿ ಶ್ರೀಕಾಂತ್‌ ಅವರಿಗೆ ಇನ್ನು ಆರು ತಿಂಗಳಲ್ಲಿ ಆರಂಭವಾಗುವ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಇನ್ನೂ ಸಾಧ್ಯವಾಗಿಲ್ಲ. ಈ ಅವಕಾಶ ಜೀವಂತವಾಗಿಟ್ಟುಕೊಳ್ಳಬೇಕಾದರೆ, ಬುಧವಾರ ಆರಂಭವಾಗುವ ಥಾಯ್ಲೆಂಡ್‌ ಮಾಸ್ಟರ್ಸ್‌ ಸೂಪರ್‌ 300 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಉತ್ತಮ ಸಾಧನೆ ತೋರಬೇಕಾಗಿದೆ.

ಕಳೆದ ವರ್ಷ ಸ್ಥಿರ ಪ್ರದರ್ಶನ ನೀಡಲು ವಿಫಲವಾಗಿರುವ ಕಾರಣ ಸೈನಾ ಮತ್ತು ಶ್ರೀಕಾಂತ್‌ ಅವರು ‘ವಿಶ್ವ ಬ್ಯಾಡ್ಮಿಂಟನ್‌ ಫೆಡರೇಷನ್‌ನ (ಬಿಡಬ್ಲ್ಯುಎಫ್‌) ಟೋಕಿಯೊ ರ‍್ಯಾಂಕಿಂಗ್‌’ನಲ್ಲಿ ಕ್ರಮವಾಗಿ 22 ಮತ್ತು 23ನೇ ಸ್ಥಾನದಲ್ಲಿದ್ದಾರೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಏಪ್ರಿಲ್‌ 26 ಅಂತಿಮ ದಿನವಾಗಿದೆ. ಥಾಯ್ಲೆಂಡ್ ಟೂರ್ನಿ ಸೇರಿದಂತೆ ಏಪ್ರಿಲ್‌ಗೆ ಮೊದಲು ಒಟ್ಟು ಎಂಟು ಟೂರ್ನಿಗಳು ಆಡಲು ಉಳಿದಿವೆ. ಈ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ಭಾರತದ ಈ ಇಬ್ಬರು ಸ್ಪರ್ಧಿಗಳಿಗೆ ಟೋಕಿಯೊಗೆ ಟಿಕೆಟ್‌ ಖಚಿತಪಡಿಸಿಕೊಳ್ಳಬಹುದು.

ಸೈನಾ ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಡೆನ್ಮಾರ್ಕ್‌ನ ಡೆನ್ಮಾರ್ಕ್‌ನ ಲಿನೆ ಹೊಜ್‌ಮಾರ್ಕ್ ವಿರುದ್ಧ ಆಡಲಿದ್ದಾರೆ. ಶ್ರೀಕಾಂತ್‌ ಪುರುಷರ ಸಿಂಗಲ್ಸ್‌ನಲ್ಲಿ ಶೆಸರ್‌ ಹಿರೆನ್‌ ರುಸ್ಟಾವಿಟೊ ಅವರನ್ನು ಮತ್ತೆ ಎದುರಿಸಲಿದ್ದಾರೆ.

 

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve − seven =

Latest news

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...
- Advertisement -spot_imgspot_img

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು

ಬೈಂದೂರಿನಲ್ಲಿ ಆರಂಭವಾದ “ವಿಕ್ರಂ ಟ್ರೋಫಿ-2026” ಕ್ರಿಕೆಟ್ ಸಂಭ್ರಮ;  ಇಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಬೈಂದೂರು : ವಿಕ್ರಂ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಹಾಗೂ ಉಡುಪಿ ಜಿಲ್ಲಾ...

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ

ಮಹಿಳಾ ಅಂಡರ್-15 ಕ್ರಿಕೆಟ್ ತಂಡಕ್ಕೆ ಸಮೃದ್ಧಿ ಆಯ್ಕೆ ಉಡುಪಿ ಜಿಲ್ಲೆಯ ಪ್ರತಿಭಾವಂತ ಕ್ರಿಕೆಟಿಗೆಯಾದ ಸಮೃದ್ಧಿ ಅವರು ಮಹಿಳಾ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ತಂಡಕ್ಕೆ ಆಲ್‌ರೌಂಡರ್‌...

Must read

- Advertisement -spot_imgspot_img

You might also likeRELATED
Recommended to you