ಕ್ರಿಕೆಟ್ಈಗಲ್ಸ್ ಕುಂಭಾಶಿ ತಂಡಕ್ಕೆ  "ಫ್ರೆಂಡ್ಸ್ ಟ್ರೋಫಿ-2020".

ಈಗಲ್ಸ್ ಕುಂಭಾಶಿ ತಂಡಕ್ಕೆ  “ಫ್ರೆಂಡ್ಸ್ ಟ್ರೋಫಿ-2020”.

-

- Advertisment -spot_img
ಈಗಲ್ಸ್ ಕುಂಭಾಶಿ ತಂಡಕ್ಕೆ
“ಫ್ರೆಂಡ್ಸ್ ಟ್ರೋಫಿ-2020”.
ಗ್ರಾಮೀಣ ಮಟ್ಟದ ಯುವ ಪ್ರತಿಭೆಗಳ ಅನ್ವೇಷಣೆ,ವಲಯ ಮಟ್ಟದ ತಂಡಗಳ ಬಲವರ್ಧನೆ ಸದುದ್ದೇಶದಿಂದ,
ನ್ಯೂ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ಕೋಟೇಶ್ವರ ಆಯೋಜಿಸಿದ್ದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ “ಫ್ರೆಂಡ್ಸ್ ಟ್ರೋಫಿಯನ್ನು ಈಗಲ್ಸ್ ಕುಂಭಾಶಿ ತಂಡ ಗೆದ್ದುಕೊಂಡಿತು.
ಆಯಾಯ ವಲಯದ 36 ತಂಡಗಳು ಭಾಗವಹಿಸಿದ್ದ ಈ ಟೂರ್ನಿಯ ಲೀಗ್ ಹಂತದ ಹೋರಾಟದ ಬಳಿಕ
ಉಪಾಂತ್ಯ ಪಂದ್ಯಗಳಲ್ಲಿ
ನಾಗಬನ ಚಾಲೆಂಜರ್ಸ್ ಬೀಜಾಡಿ,
ಮಿತ್ರವೃಂದ ಗೋಪಾಡಿ
ತಂಡವನ್ನು ಹಾಗೂ ಈಗಲ್ಸ್ ,ಚಾಲೆಂಜ್ ಕುಂದಾಪುರವನ್ನು ಸೋಲಿಸಿ ಫೈನಲ್ ಗೆ ಭಡ್ತಿ ಪಡೆದಿದ್ದರು.
ಫೈನಲ್ ನಲ್ಲಿ ಈಗಲ್ಸ್ ತಂಡ ನಾಗಬನ ಚಾಲೆಂಜರ್ಸ್ ತಂಡವನ್ನು ಸೋಲಿಸಿದರು.
ವಿಜೇತ ಈಗಲ್ಸ್ ಕುಂಭಾಶಿ
30,030 ರೂ ನಗದು,ದ್ವಿತೀಯ ಸ್ಥಾನಿ ನಾಗಬನ ಚಾಲೆಂಜರ್ಸ್ 20,020 ರೂ ನಗದು ಜೊತೆಯಾಗಿ ಆಕರ್ಷಕ ಟ್ರೋಫಿಗಳನ್ನು ಪಡೆದರೆ.
ಟೂರ್ನಿಯ ಬೆಸ್ಟ್ ಬ್ಯಾಟ್ಸ್‌ಮನ್
ಗಣೇಶ್ ಬೀಜಾಡಿ,ಬೆಸ್ಟ್ ಬೌಲರ್ ಮಹೇಶ್ ಬೀಜಾಡಿ,ಬೆಸ್ಟ್ ಫೀಲ್ಡರ್ ರಿತೇಶ್ ಗೋಪಾಡಿ,ಬೆಸ್ಟ್ ಕೀಪರ್ ರಂಜನ್ ಉಡುಪ ಕೋಟೇಶ್ವರ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಈಗಲ್ಸ್ ನ ಸುಧಾಕರ್ ಕುಂಭಾಶಿ ಪಡೆದುಕೊಂಡರು.
ಶನಿವಾರ ನಡೆದಿದ್ದ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಮಂಜು ಬಿಲ್ಲವ,ಶ್ರೀಲತಾ ಸುರೇಶ್ ಶೆಟ್ಟಿ, ಗ್ರಾ.ಪ.ಕೋಟೇಶ್ವರದ ಅಧ್ಯಕ್ಷರು ಶ್ರೀಮತಿ ಶಾಂತ ಗೋಪಾಲಕೃಷ್ಣ ,ಕ.ಪ.ಸ್ಕೂಲ್ ಕೋಟೇಶ್ವರದ ಶಿಕ್ಷಕಿ ಶ್ರೀಮತಿ ಲತಾ ಶೇಟ್,ರಘುರಾಮ್ ಉಡುಪ ಹಾಗೂ ಸ್ಪೋರ್ಟ್ಸ್ ಕನ್ನಡ ಸಂಚಾಲಕರು ಕೋಟ ರಾಮಕೃಷ್ಣ ಆಚಾರ್ಯ ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ
ಕೋಟೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ಮಠದಬೆಟ್ಟು,ಸುಧಾಕರ್ ಪೈಂಟರ್,ರಾಕೇಶ್ ಮೂಡುಗೋಪಾಡಿ,ಟೂರ್ನಿಯ ಪ್ರಮುಖ ರೂವಾರಿಗಳಾದ ರಾಜೇಶ್ ಪ್ರಭು,ಪುರುಷೋತ್ತಮ ಕಾಮತ್,ನಯಾಝ್ ಸರ್ದಾರ್ ಹಾಗೂ ನ್ಯೂ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.
        ಆರ್.ಕೆ.ಆಚಾರ್ಯ ಕೋಟ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × 3 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you