ಅಥ್ಲೆಟಿಕ್ಸ್ತನುಶ್ರೀ ಮುಕುಟಕ್ಕೆ ಪಂಚಮ ವಿಶ್ವ ದಾಖಲೆಯ ಗರಿ

ತನುಶ್ರೀ ಮುಕುಟಕ್ಕೆ ಪಂಚಮ ವಿಶ್ವ ದಾಖಲೆಯ ಗರಿ

-

- Advertisment -spot_img

 

ಸಾಧನೆ ಮಾಡುವುದಕ್ಕೆ ವಯಸ್ಸಿನ ಮಿತಿ ಇಲ್ಲ ಸಾಧಿಸುವ ಛಲ ಒಂದು ಇದ್ದರೆ ಸಾಕು. ಈ ದಾಖಲೆಯ ಸಾಧನೆಗೆ ಸಾಕ್ಷಿಯಾಗಿ ನಿಂತಿರುವ 11 ವರ್ಷದ ಬಾಲೆ ತನುಶ್ರೀ. ಚಕ್ರಾಸನ ರೇಸ್ ನ 100 ಮೀಟರ್ ನ ವಿಭಾಗದಲ್ಲಿ ಹಿಮಾಚಲ ಪ್ರದೇಶದ ಸಮೀಕ್ಷಾ ಡೋಗ್ರಾ ಹೆಸರಿನಲ್ಲಿದ್ದ 6 ನಿಮಿಷದ ದಾಖಲೆಯನ್ನು ಮುರಿದು ಇದೀಗ ಕೇವಲ 1.14 ನಿಮಿಷದಲ್ಲಿ ಕ್ರಮಿಸಿ ಐದನೆಯ ವಿಶ್ವ ದಾಖಲೆಯನ್ನು ಬರೆದ ದಾಖಲೆಯ ಹುಡುಗಿ ತನುಶ್ರೀ.ಇದು ಒಂದು ವರ್ಷದ ಅವಧಿಯಲ್ಲಿ ಈಕೆ ಬರೆದ ಮೂರನೆಯ ವಿಶ್ವ ದಾಖಲೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯೋಗದ ಮೂಲಕ ವಿಶ್ವ ದಾಖಲೆಯನ್ನು ಬರೆದ ಈ ಪುಟ್ಟ ಬಾಲೆಯ ಸಾಧನೆಗೆ ಸಾಕ್ಷಿಯಾಗಿದ್ದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನ ದಕ್ಷಿಣ ಏಷ್ಯಾದ ನಿರ್ದೇಶಕ ಮನೀಷ್ ಬಿಶ್ನೋಯ್ ವಿಶ್ವದಾಖಲೆಯನ್ನು ಅಧಿಕೃತವಾಗಿ ಘೋಷಿಸಿ,ತನುಶ್ರೀ ಹ್ಯಾಟ್ರಿಕ್ ದಾಖಲೆಗೈದಿದ್ದು ಈಕೆ ಉಡುಪಿಯ ಹೆಮ್ಮೆ, ಗೋಲ್ಡನ್ ಗರ್ಲ್ ಎಂಬ ಬಿರುದನ್ನೂ ನೀಡಿದರು‌.

ಯೋಗ ಗುರುಗಳಾದ ಶ್ರೀ ರಾಮಕೃಷ್ಣ ಕೊಡಂಚ ಮಾತನಾಡಿ  ತನುಶ್ರೀ ಸಾಧನೆಗಾಗಿಯೇ ಜನಿಸಿದವಳು,ಪ್ರತಿಭೆಯ ಜೊತೆಗೆ ವಿನಯ,ವಿನಮ್ರತೆ ದಾಖಲೆಗೆ ಕಾರಣವಾಗಿದೆ,ಇದು ಇತರರಿಗೆ ಪ್ರೇರಣೆಯಾಗುವಂತೆ ಆಶಯವನ್ನು ವ್ಯಕ್ತಪಡಿಸಿದರು.ದಾಖಲೆ ಸೃಷ್ಟಿಸಿದ ಈ ಬಾಲೆ ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಹಾಗೂ ರಾಜ್ಯದ ಶಿಸ್ತು,ಮಾದರಿಯ ಸಂಸ್ಥೆ ವೆಂಕಟರಮಣ ಸಂಸ್ಥೆಯ ಸಕ್ರಿಯ ಸದಸ್ಯ ಉದಯ ಕುಮಾರ್ ಹಾಗೂ ಸಂಧ್ಯಾ ದಂಪತಿಯ ಪುತ್ರಿ.

ಉದ್ಯಾವರದ ಗ್ರಾಮ ಪಂಚಾಯತಿ ಮೈದಾನದಲ್ಲಿ ಇದೇ ಮೊದಲ ಬಾರಿ ವಿಶ್ವದಾಖಲೆ ಸ್ಥಾಪನೆಯಾಗಿದ್ದು,ಈ ಐತಿಹಾಸಿಕ ಕ್ಷಣಕ್ಕೆ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್,ಜಯಕರ ಶೆಟ್ಟಿ ಇಂದ್ರಾಳಿ,ಜಿತೇಂದ್ರ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ ಮುನಿಯಾಲು,ವಿಜಯ್ ಕುಮಾರ್ ಮುದ್ರಾಡಿ,ಪ್ರವೀಣ್.ಎಮ್.ಪೂಜಾರಿ,ದಿವಾಕರ್ ಸನಿಲ್,
ಸುಗಂಧಿ ಶೇಖರ್,ನಾಗೇಶ್ ಉದ್ಯಾವರ,ನಯನಾ ಗಣೇಶ್,ಗೀತಾಂಜಲಿ ಸುವರ್ಣಾ,ವಿಜಯ್ ಕೋಟ್ಯಾನ್,ಮಲ್ಲೇಶ್ ಕುಮಾರ್,ಪ್ರವೀಣ್ ಪಿತ್ರೋಡಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ತನುಶ್ರೀ ಹೆಸರಿನಲ್ಲಿ ಇನ್ನಷ್ಟು ವಿಶ್ವದಾಖಲೆಗಳು ಮೂಡಿ ಬರಲಿ.
ಇದು ಸ್ಪೋರ್ಟ್ಸ್ ಕನ್ನಡದ ಹಾರೈಕೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three + seventeen =

Latest news

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...
- Advertisement -spot_imgspot_img

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

Must read

- Advertisement -spot_imgspot_img

You might also likeRELATED
Recommended to you