ಕ್ರಿಕೆಟ್10pl ಟೆನ್ನಿಸ್ ಕ್ರಿಕೆಟ್ ವಿಶ್ವ ಕಪ್- ಪಾಕ್ ನ್ನು ಚೆಂಡಾಡಿದ ಭಾರತೀಯರು‌

10pl ಟೆನ್ನಿಸ್ ಕ್ರಿಕೆಟ್ ವಿಶ್ವ ಕಪ್- ಪಾಕ್ ನ್ನು ಚೆಂಡಾಡಿದ ಭಾರತೀಯರು‌

-

- Advertisment -spot_img

ಕೊಲ್ಲಿ ರಾಷ್ಟ್ರದ ತೈಲ ಮತ್ತು ಅನಿಲ ಉತ್ಪಾದನಾ ಘಟಕ ಮತ್ತು ಶಾರ್ಜಾ ಕ್ರಿಕೆಟ್ ಕೌನ್ಸಿಲ್ ಸಹಭಾಗಿತ್ವದಲ್ಲಿ

ಶಾರ್ಜಾದ ಹುಲ್ಲುಹಾಸಿನ ಅಂತರಾಷ್ಟ್ರೀಯ ಅಂಗಣದಲ್ಲಿ ನಡೆದ ಟೆನ್ನಿಸ್ ಕ್ರಿಕೆಟ್
ವಿಶ್ವಕಪ್ ಖ್ಯಾತಿಯ 10pl ಸೀಸನ್-3 ಪಂದ್ಯಾಕೂಟದ ಪ್ರದರ್ಶನ ಪಂದ್ಯವೊಂದರಲ್ಲಿ ಭಾರತೀಯ ಟೆನ್ನಿಸ್ ಕ್ರಿಕೆಟ್ ತಂಡ ಬಲಿಷ್ಠ ಪಾಕ್ ತಂಡವನ್ನು ಹೀನಾಯವಾಗಿ ಮಣಿಸಿ ಗೆಲುವಿನ ಕೇಕೆ ಹಾಕಿದರು.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡದ ಪರವಾಗಿ‌ ಥಾಮಸ್ ಡಯಾಸ್ 25,ಸುಮೀತ್ ಧೇಖಲೆ 18, ಉಸ್ಮಾನ್ ಪಟೇಲ್ 18 ಹಾಗೂ ಕೃಷ್ಣ ಸಾತ್ಪುತೆ 12 ರನ್ ಗಳ ವೈಯಕ್ತಿಕ ಕೊಡುಗೆಯಿಂದ ಎದುರಾಳಿ ಬಲಿಷ್ಠ ಪಾಕ್ ತಂಡಕ್ಕೆ 10 ಓವರ್ ಗಳಲ್ಲಿ 86 ರನ್ ಗಳ ಸವಾಲಿನ ಗುರಿಯನ್ನು ನೀಡಿತ್ತು.

ಚೇಸಿಂಗ್ ವೇಳೆ ಎಡವಿದ ಪಾಕ್
ಭಾರತ ತಂಡದ ವೇಗಿಗಳಾದ ವಿಶ್ವಜೀತ್ ಠಾಕೂರ್,ಅಂಕುರ್ ಸಿಂಗ್,ವಿಜಯ್ ಪಾವ್ಲೆ ಹಾಗೂ ಸರೋಜ್ ಉರಿ ಚೆಂಡಿನ ದಾಳಿಗೆ ತತ್ತರಿಸಿ 8.5 ಓವರ್ ಗಳಲ್ಲಿ ಕೇವಲ 41 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಹೀನಾಯ ಸೋಲುಂಡಿತು.

2 ಓವರ್ ನಲ್ಲಿ 3 ರನ್ ನೀಡಿ ಬಲಿಷ್ಠ ಪಾಕ್ ನ 3 ವಿಕೆಟ್ ಉರುಳಿಸಿದ ರಾಯ್ ಗಡ್ ನ ಮೋಟ್ಯಾ ಯಾನೆ ವಿಶ್ವಜೀತ್ ಠಾಕೂರ್ ಅರ್ಹವಾಗಿ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.

ಈ ಪಂದ್ಯದಲ್ಲಿ 10 pl ಸೀಸನ್ 3 ಚಾಂಪಿಯನ್ ತಂಡ ಮೂಲ್ಕಿ ಮೂಲದ ಅಮಿತ್ ಫುರ್ಟಾಡೋ ಮಾಲೀಕತ್ವದ ಫ್ರೆಂಡ್ಸ್ ಕುವೈಟ್ ತಂಡದ ಹೆಚ್ಚಿನ ಆಟಗಾರರು ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಟೆನ್ನಿಸ್ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕ್ ಮುಖಾಮುಖಿ ಯಾಗಿದ್ದು,ಪ್ರಥಮ ಪಂದ್ಯದಲ್ಲೇ ಗೆಲುವನ್ನು ಸಾಧಿಸಿ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × two =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you