14.9 C
London
Tuesday, April 30, 2024
Homeಕ್ರಿಕೆಟ್ಕೋವಿಡ್ ನಡುವೆ ದಾವಣಗೆರೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ಎಸ್.ಎಸ್.ಕಪ್-2020

ಕೋವಿಡ್ ನಡುವೆ ದಾವಣಗೆರೆಯಲ್ಲಿ ಕ್ರಿಕೆಟ್ ಪಂದ್ಯಾವಳಿ ಎಸ್.ಎಸ್.ಕಪ್-2020

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ದಾವಣಗೆರೆ  ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ವತಿಯಿಂದ   ಡಾ. ಶಾಮನೂರು ಶಿವಶಂಕರಪ್ಪ ನವರ ಹುಟ್ಟು ಹಬ್ಬದ ಅಂಗವಾಗಿ ಆಚರಿಸುತ್ತಿರುವ  ಎಸ್.ಎಸ್. ಕಪ್ -2020 ಟೆನ್ನಿಸ್ ಬಾಲ್ ಟೂರ್ನಮೆಂಟ್ ಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ರವರು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು,
ನಂತರ ಮಾತನಾಡಿದ ಅವರು ಉತ್ತಮ ಆರೋಗ್ಯಕ್ಕೆ ಕ್ರೀಡೆ ಅತಿ ಮುಖ್ಯವಾಗಿದ್ದು, ಈಗಿನ ಯುವಕರು ಮೊಬೈಲ್ ಗೆ ಹೆಚ್ಚು ಗಮನ ನೀಡದೆ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು ಹಾಗೂ ಟೂರ್ನಮೆಂಟ್ ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಆಟಗಾರರಿಗೂ ಶುಭ ಕೋರಿದರು, ಈ ಸಂದರ್ಭದಲ್ಲಿ ಬಡಾವಣೆ ಠಾಣೆ ಪಿ.ಎಸ್.ಐ ಅಶ್ವಿನ್ ಕುಮಾರ್, ದಾವಣಗೆರೆ ದಕ್ಷಿಣ ಸಂಚಾರಿ ಪಿ.ಎಸ್.ಐ ಕಿರಣ್ ಕುಮಾರ್, ಕ್ರೀಡಾ ಪ್ರೋತ್ಸಾಹಕರಾದ ಶ್ರೀನಿವಾಸ್ ಶಿವಗಂಗಾ, ಮಹದೇವ್, ರಾಜು ರೆಡ್ಡಿ, ರಮೇಶ್,ಸುರೇಶ್, ಶೌಕತ್, ರವಿ, ಸುರಭಿ ವಿನಯ್, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ, ಸಂಘಟಕರಾದ  ಕುರುಡಿ ಗಿರೀಶ್, ಜಯಪ್ರಕಾಶ್ ಗೌಡ ( ಕುಬೇರ) ಉಪಸ್ಥಿತರಿದ್ದರು.
ಜೂನ್ 16 ರ ವರೆಗೆ ನಡೆಯಲಿರುವ ಈ ಪಂದ್ಯಾಕೂಟದಲ್ಲಿ ದಾವಣಗೆರೆ ಸುತ್ತ ಮುತ್ತಲಿನ 20 ಕಿ.ಮೀ ವ್ಯಾಪ್ತಿಯ 20 ತಂಡಗಳು ಭಾಗವಹಿಸಿದ್ದು,ಒಟ್ಟು 47 ಪಂದ್ಯಗಳು ಸತತ 6 ದಿನಗಳ ಕಾಲ ಸಾಗಲಿದೆ.ಅಲ್ಲದೇ ಪೋಲಿಸ್,ಪತ್ರಕರ್ತರು,ವಕೀಲರು,ವೈದ್ಯರು, ಉದ್ಯಮಿಗಳು ಸೇರಿ 6 ತಂಡಗಳ ವಿಶೇಷ ಪಂದ್ಯಗಳು ನಡೆಯಲಿದ್ದು,ವಿಜೇತ ತಂಡಗಳು ಕ್ರಮವಾಗಿ 33 ಹಾಗೂ 22 ಸಾವಿರ ನಗದು ಸಹಿತ ಎಸ್.ಎಸ್.ಕಪ್-2020 ಪಡೆಯಲಿದ್ದಾರೆ.
ದಾವಣಗೆರೆ ಜಯಪ್ರಕಾಶ್ ಗೌಡ(ಜೆ.ಪಿ)ಸಾರಥ್ಯದಲ್ಲಿ ಈವರೆಗೆ 12 ರಾಷ್ಟ್ರೀಯ ಮಟ್ಟದ  ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆದಿದ್ದು,ರಾಜ್ಯದಲ್ಲಿಯೇ ಅತ್ಯಂತ ವೈಭವೋಪೇತ ಪಂದ್ಯಾಕೂಟ ಎನಿಸಿಕೊಂಡಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

ten − 4 =