ಕ್ರಿಕೆಟ್ರಾಕ್ ಯೂತ್ ಕ್ಲಬ್ ತುಮಕೂರು-ನೂತನ ಪದಾಧಿಕಾರಿಗಳ ಆಯ್ಕೆ

ರಾಕ್ ಯೂತ್ ಕ್ಲಬ್ ತುಮಕೂರು-ನೂತನ ಪದಾಧಿಕಾರಿಗಳ ಆಯ್ಕೆ

-

- Advertisment -spot_img
ಕ್ರೀಡಾ ಸಂಸ್ಥೆಯೊಂದು ತನ್ನ ಎಲ್ಲಾ ಸದಸ್ಯರ ಸಭೆ ಕರೆದು ನಾಯಕನನ್ನು ಆಯ್ಕೆ ಮಾಡಿರುವ ಅತಿ ವಿರಳ ಪ್ರಕರಣಗಳಲ್ಲಿ ಇದು ಒಂದಾಗಿದ್ದು, ಕಲೆ,ಕ್ರೀಡೆ,ಸಾಹಿತ್ಯ,ಪತ್ರಿಕೋದ್ಯಮ ಹೀಗೆ ಹಲವು ಆಯಾಮಗಳಲ್ಲಿ ಗುರುತಿಸಿಕೊಂಡಿರುವ ರಾಕ್ ಯೂತ್ ಕ್ಲಬ್ 2020-21 ನೇ ಸಾಲಿನ ನಾಯಕರನ್ನಾಗಿ ಪ್ರದೀಪ್ ಕುಮಾರ್ ಶಂಕು,ಉಪನಾಯಕನಾಗಿ ಭರತ್ ಹಾಗೂ ಫೀಲ್ಡ್ ಕ್ಯಾಪ್ಟನ್ ಆಗಿ ಅಜೇಯ್ ಆಯ್ಕೆಯಾಗಿದ್ದಾರೆ.
ತುಮಕೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಕ್ ಯೂತ್ ಕ್ಲಬ್ ನ ಹಾಲಿ ಸಂಯೋಜಕರು,ಜಿಲ್ಲಾ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು(ರಾಕ್ ರಾಜು),ಪ್ರಧಾನ ಕಾರ್ಯದರ್ಶಿ ರಾಕ್ ಲೈನ್ ರವಿಕುಮಾರ್,ಕ್ಲಬ್ ನ ಉಪಾಧ್ಯಕ್ಷ ಬೆಳ್ಳಿ ಲೋಕೇಶ್ ಸೇರಿದಂತೆ ಹಲವಾರು ಹಿರಿಯ ಕ್ರೀಡಾಪಟುಗಳು ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ರಾಕ್ ರಾಜು ರವರು,1989 ರಲ್ಲಿ ಆರಂಭವಾದ ಕ್ರೀಡಾ ಕ್ಲಬ್ ಹಲವಾರು ಎಡರು ತೊಡರುಗಳ ನಡುವೆ ಒಂದು ದಿನವೂ ಅಭ್ಯಾಸ ನಿಲ್ಲಿಸದೆ,ಇದುವರೆಗೂ ನಿರಂತರವಾಗಿ ಮುನ್ನಡೆಸಿಕೊಂಡು ಬಂದಿದೆ.ನಮ್ಮ ನಂತರದ ಪೀಳಿಗೆಗೂ ನಾಯಕತ್ವದ ಪರಿಚಯವಾಗಬೇಕು,ಅವರು ತಂಡವನ್ನು ಮುನ್ನಡೆಸುವ ಚಾಕಚಕ್ಯತೆ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ನಾಯಕನ ಆಯ್ಕೆ ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ರಾಕ್ ಯೂತ್ ಕ್ಲಬ್ ನ ಉಪಾಧ್ಯಕ್ಷ ಬೆಳ್ಳಿ ಲೋಕೇಶ್ ಮಾತನಾಡಿ,ನಮ್ಮ ತಂಡ ಇಡೀ ರಾಜ್ಯದಲ್ಲಿಯೇ ಶಿಸ್ತು ಮತ್ತು ತಾಳ್ಮೆಗೆ ಹೆಸರಾಗಿದೆ,ಯುವ ಪ್ರತಿಭೆಗಳಿಗೆ ತಂಡ ವೇದಿಕೆ ಕಲ್ಪಿಸಿಕೊಡಬೇಕೆಂಬ ಆಶಯ ವ್ಯಕ್ತ ಪಡಿಸಿದರು.
ಈ ವೇಳೆ ತಂಡದ ಮೆನೇಜರ್ ರಾಕ್ ರವಿ ಹಾಗೂ ಹಿರಿಯ ಕ್ರೀಡಾಪಟುಗಳಾದ ರವಿ,ಪ್ರದೀಪ್ ಕುಮಾರ್,ಗುರುಪ್ರಸಾದ್ ಸೇರಿದಂತೆ ಹಲವರು ನೂತನ ನಾಯಕನಿಗೆ ಶುಭಹಾರೈಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

17 − 6 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you