ಕ್ರಿಕೆಟ್ಬಿ.ಜಿ.ಸೂಪರ್ ಕಿಂಗ್ಸ್ ತಂಡಕ್ಕೆ ಬೀಡಿನಗುಡ್ಡೆ ಪ್ರೀಮಿಯರ್ ಲೀಗ್ B.P.L-2020 ಪ್ರಶಸ್ತಿಯ ಗರಿ

ಬಿ.ಜಿ.ಸೂಪರ್ ಕಿಂಗ್ಸ್ ತಂಡಕ್ಕೆ ಬೀಡಿನಗುಡ್ಡೆ ಪ್ರೀಮಿಯರ್ ಲೀಗ್ B.P.L-2020 ಪ್ರಶಸ್ತಿಯ ಗರಿ

-

- Advertisment -spot_img
ರವಿವಾರ ನವೆಂಬರ್ 22 ರಂದು ಉಡುಪಿಯ
ಬೀಡಿನಗುಡ್ಡೆ ಫ್ರೆಂಡ್ಸ್ (ಬಿ‌.ಜಿ ಫ್ರೆಂಡ್ಸ್) ತಂಡದ ವತಿಯಿಂದ ಬೀಡಿನಗುಡ್ಡೆ ಅಂಗಣದಲ್ಲಿ ಅಭ್ಯಾಸ ನಡೆಸುವ ಆಟಗಾರರಿಗಾಗಿ ಆಯೋಜಿಸಲಾಗಿದ್ದ 5 ನೇ ಆವೃತ್ತಿಯ”ಬೀಡಿನಗುಡ್ಡೆ ಪ್ರೀಮಿಯರ್ ಲೀಗ್ B.P.L-2020″ ಟ್ರೋಫಿಯನ್ನು ಬಿ.ಜಿ.ಸೂಪರ್ ಕಿಂಗ್ಸ್ ಜಯಿಸಿದೆ.
90 ರ ದಶಕದ ಹಿರಿಯ ಆಟಗಾರರು ಹಾಗೂ ಪ್ರಸ್ತುತ ರಾಜ್ಯ ಮಟ್ಟದಲ್ಲಿ ಮಿಂಚುತ್ತಿರುವ ಯುವ ಕ್ರಿಕೆಟಿಗರ ಸಮ್ಮಿಶ್ರಣದ 4 ತಂಡಗಳು ಭಾಗವಹಿಸಿದ್ದು,ರೋಚಕ ಹಣಾಹಣಿಗಳ ಬಳಿಕ ಫೈನಲ್ ನಲ್ಲಿ
ಬಿ.ಜಿ.ಸೂಪರ್ ಕಿಂಗ್ಸ್ ನ ಸಾಂಘಿಕ ಹೋರಾಟದ ಫಲವಾಗಿ ಎದುರಾಳಿ ಬಿ.ಜಿ‌.ಅಲೆವೂರು ಫೈಟರ್ಸ್ ತಂಡವನ್ನು ಸೋಲಿಸಿ ಆಕರ್ಷಕ ಟ್ರೋಫಿ ಸಹಿತ 55,555 ನಗದನ್ನು ತನ್ನದಾಗಿಸಿಕೊಂಡಿತು.ದ್ವಿತೀಯ ಸ್ಥಾನಿ ಬಿ‌.ಜಿ.ಅಲೆವೂರು ಫೈಟರ್ಸ್  33,333 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.

ವೈಯಕ್ತಿಕ ಬಹುಮಾನಗಳ ರೂಪದಲ್ಲಿ ಕ್ರಮವಾಗಿ ಫೈನಲ್ ನ ಪಂದ್ಯಶ್ರೇಷ್ಟ ಭರತ್,ಬೆಸ್ಟ್ ಬ್ಯಾಟ್ಸ್‌ಮನ್ ಜೀಶಾನ್,ಬೆಸ್ಟ್ ಬೌಲರ್ ಅರ್ಜುನ್,ಸರಣಿಶ್ರೇಷ್ಟ ಭರತ್,ಗೇಮ್ ಚೇಂಜರ್ ಅರ್ಜುನ್,ಎಮರ್ಜಿಂಗ್ ಪ್ಲೇಯರ್ ಪ್ರಸನ್ನ ಹಾಗೂ ಬೆಸ್ಟ್ ಫೀಲ್ಡರ್ ಪ್ರಶಸ್ತಿಯನ್ನು ಕಿರಣ್ ಶೆಟ್ಟಿ ಪಡೆದುಕೊಂಡರು.

 

 

 

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಕ್ರಿಕೆಟಿಗರು ಹಾಗೂ ಬಿ‌.ಜಿ.ಫ್ರೆಂಡ್ಸ್ ನ ಗೌರವಾಧ್ಯಕ್ಷರು ಶ್ರೀ ಚಂದ್ರಹಾಸ ಅಡಿಗ,ಶ್ರೀ ವಾದಿರಾಜ ಆಚಾರ್ಯ ಹಾಗೂ ಕೊರೋನಾ ವಾರಿಯರ್ ಹಾಗೂ ಕ್ರೀಡಾಪಟು ನಾಗಾರ್ಜುನ ಪೂಜಾರಿಯವರನ್ನು‌ ಸನ್ಮಾನಿಸಲಾಯಿತು.ಈ ಸಂದರ್ಭ ನಗರಸಭೆಯ ಸದಸ್ಯರಾದ ಶ್ರೀ ರಮೇಶ್ ಕಾಂಚನ್,ಜಿತೇಂದ್ರ ಶೆಟ್ಟಿ, ಸಚಿನ್ ಅಜ್ಜರಕಾಡು,ಅರುಣ್ ಶೆಟ್ಟಿ, ಕೋಟ ರಾಮಕೃಷ್ಣ ಆಚಾರ್,ಪ್ರವೀಣ್ ಕುರ್ಕಾಲು,ಆಕಾಶ್ ರಾವ್,ಮಹಮ್ಮದ್ ಅಮೀರ್,ಹಿರಿಯ ಕ್ರಿಕೆಟಿಗರಾದ ಯಾದವ್ ನಾಯಕ್ ಉಪಸ್ಥಿತರಿದ್ದರು.
ವೀಕ್ಷಕ ವಿವರಣೆಕಾರರಾಗಿ ಹಿರಿಯ ವೀಕ್ಷಕ ವಿವರಣೆಕಾರ ವಿನಯ್ ಉದ್ಯಾವರ ಭಾಗವಹಿಸಿದರೆ,ಎ.ಕೆ‌.ಸ್ಪೋರ್ಟ್ಸ್ ನ ಹಮೀದ್ ಹಾಗೂ ಸಫ್ವಾನ್ ನಿರ್ಣಾಯಕರಾಗಿ ಭಾಗವಹಿಸಿದರು.
ಪಂದ್ಯಾವಳಿಯ ನೇರ ಪ್ರಸಾರ M9ಸ್ಪೋರ್ಟ್ಸ್ ಬಿತ್ತರಿಸಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಹಕರಿಸಿದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

17 − eight =

Latest news

“ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ನಿಟ್ಟೆಯ ವಿದ್ಯಾ ಸಂಸ್ಥೆಯ ಹರಿಕಾರ ವಿನಯ್ ಹೆಗ್ಡೆ”-ಹರಿಪ್ರಸಾದ್ ರೈ

"ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ನಿಟ್ಟೆಯ ವಿದ್ಯಾ ಸಂಸ್ಥೆಯ ಹರಿಕಾರ ವಿನಯ್ ಹೆಗ್ಡೆ"-ಹರಿಪ್ರಸಾದ್ ರೈ ಕಾರ್ಕಳ- ಇಲ್ಲಿನ ನಿಟ್ಟೆ ವಿಶ್ವ ವಿದ್ಯಾಲಯದ ಅಧೀನದಲ್ಲಿರುವ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ಅಂತರ್...

ವಿಕ್ರಮ್ ಕ್ರಿಕೆಟ್ ಕ್ಲಬ್ ವತಿಯಿಂದ ಪ್ರೀ ಸಮ್ಮರ್ ಕ್ರಿಕೆಟ್ ತರಬೇತಿ ಶಿಬಿರ

ವಿಕ್ರಮ್ ಕ್ರಿಕೆಟ್ ಕ್ಲಬ್ ವತಿಯಿಂದ ಪ್ರೀ ಸಮ್ಮರ್ ಕ್ರಿಕೆಟ್ ತರಬೇತಿ ಶಿಬಿರ ಬೈಂದೂರು: ವಿಕ್ರಮ್ ಕ್ರಿಕೆಟ್ ಕ್ಲಬ್, ಬೈಂದೂರು ವತಿಯಿಂದ ಯುವಕರಲ್ಲಿ ಕ್ರಿಕೆಟ್ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ...

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ...

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...
- Advertisement -spot_imgspot_img

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

Must read

- Advertisement -spot_imgspot_img

You might also likeRELATED
Recommended to you