5 C
London
Wednesday, April 24, 2024
Homeಕ್ರಿಕೆಟ್ತುಮಕೂರು-"ಕರ್ನಾಟಕ ರಾಕ್" TCL season -2 ಮೇಯರ್ಸ್ ಕಪ್-2020 ಚಾಂಪಿಯನ್ಸ್

ತುಮಕೂರು-“ಕರ್ನಾಟಕ ರಾಕ್” TCL season -2 ಮೇಯರ್ಸ್ ಕಪ್-2020 ಚಾಂಪಿಯನ್ಸ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ರಾಕ್ ಯೂತ್ ಕ್ಲಬ್(ರಿ)ತುಮಕೂರು ಇವರ ಆಶ್ರಯದಲ್ಲಿ,ರಾಕ್ ರಾಜು,ರಾಕ್ ರವಿ,ರಾಕ್ ಅಝ್ಝು, ಮುಜ್ಜು ,ಯತೀಶ್,ರಾಕ್ ರಘು,ಶಂಕು ಇವರೆಲ್ಲರ ಸಾರಥ್ಯದಲ್ಲಿ ತುಮಕೂರು ಜಿಲ್ಲೆಯ ಆಟಗಾರರಿಗಾಗಿ ತುಮಕೂರಿನ ಸರಕಾರಿ ಹೈಸ್ಕೂಲ್ ಫೀಲ್ಡ್ ಮೈದಾನದಲ್ಲಿ ಆಯೋಜಿಸಿದ್ದ ಮೇಯರ್ಸ್ ಕಪ್ T.C.L-2020 ಪ್ರಶಸ್ತಿಯನ್ನು ರಾಕ್ ರವಿ ಸಾರಥ್ಯದ ಕರ್ನಾಟಕ ರಾಕ್ ತಂಡ ಜಯಿಸಿದೆ.
ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ಸಾಗಿದ ಈ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು,ಅಂತಿಮವಾಗಿ ಫೈನಲ್ ನಲ್ಲಿ ಕರ್ನಾಟಕ ರಾಕ್ ತಂಡದ ಆಟಗಾರರ ಸಂಘಟಿತ ಹೋರಾಟದ ಫಲವಾಗಿ ಶ್ರೀ ಪ್ರಿನ್ಸ್ ಸಿಟಿ ಕ್ಲಬ್ ತಂಡವನ್ನು ಮಣಿಸಿ ಪ್ರಶಸ್ತಿ ಜಯಿಸಿತು.
ಪ್ರಥಮ ಪ್ರಶಸ್ತಿ ವಿಜೇತ ತಂಡ  ಕರ್ನಾಟಕ ರಾಕ್ ತಂಡ1 ಲಕ್ಷ ಹಾಗೂ ದ್ವಿತೀಯ ಸ್ಥಾನಿ ಶ್ರೀ ಪ್ರಿನ್ಸ್ ಸಿಟಿ ಕ್ಲಬ್ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.
ವೈಯಕ್ತಿಕ ಪ್ರಶಸ್ತಿ ಕ್ರಮವಾಗಿ ಬೆಸ್ಟ್ ಬ್ಯಾಟ್ಸ್‌ಮನ್ ಶ್ರೀ ಪ್ರಿನ್ಸ್ ಸಿಟಿಯ ನಿತಿನ್,ಬೆಸ್ಟ್ ಬೌಲರ್ ಆರ್.ಆರ್.ಹೆಗ್ಗೆರೆಯ ರಘುಪತಿ ಹಾಗೂ ಕರ್ನಾಟಕ ರಾಕ್ ತಂಡದ ಶಂಕು ಸರಣಿಶ್ರೇಷ್ಟ ಪ್ರಶಸ್ತಿ ಪಡೆದರು.
ತುಮಕೂರಿನ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಪಂದ್ಯಾವಳಿ ಉದ್ಘಾಟಿಸಿ
“ಕ್ರೀಡೆಯಿಂದ ಮಾನಸಿಕ ಮತ್ತು ದೈಹಿಕ ಸ್ಥೈರ್ಯ,ಸೌಹಾರ್ದ ಮನೋಭಾವದ ಜೊತೆಗೆ ರಾಷ್ಟ್ರೀಯ ಭಾವೈಕ್ಯತೆ ಹೆಚ್ಚಾಗುತ್ತದೆ ಎಂದು ಹೇಳಿದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತುಮಕೂರಿನ ಮಾನ್ಯ ಮಹಾಪೌರರಾದ ಶ್ರೀಮತಿ‌ ಫರೀದಾ ಬೇಗಂ,ಜೆ‌.ಡಿ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ  ಶ್ರೀ,ಗೋವಿಂದರಾಜು,ತುಮಕೂರು ಜೆ.ಡಿ.ಎಸ್ ಯುವ ಮುಖಂಡರು ರುದ್ರೇಶ್,ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರು ತುಮಕೂರಿನ ಎನ್. ನರಸಿಂಹರಾಜು(ರಾಕ್ ರಾಜು),ರಾಕ್ ಮೆನೇಜರ್ ರಾಕ್ ರವಿ,ಮಾಜಿ ಕಪ್ತಾನ‌ ರಾಕ್ ರಘು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
ಪಂದ್ಯಾವಳಿಯ ನೇರ ಪ್ರಸಾರ M9 ಸ್ಪೋರ್ಟ್ಸ್ ಬಿತ್ತರಿಸಿದರೆ,ಹಿರಿಯ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ,ರಾಜಶೇಖರ್ ಶ್ಯಾಮರಾವ್ ಉಡುಪಿ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಿದ್ದರು.ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಹಾಗೂ ಫ್ರೆಂಡ್ಸ್ ಬೆಂಗಳೂರು ಸಾಗರ್ ಭಂಡಾರಿ ಮಾಲೀಕತ್ವದ ಎಸ್‌‌.ಆರ್.ಬಿ ಸ್ಪೋರ್ಟ್ಸ್ ಪಂದ್ಯಾವಳಿಗೆ ಸಂಪೂರ್ಣ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eight + seven =