ಕ್ರಿಕೆಟ್ಯುವ ಕ್ರಿಕೆಟಿಗರಿಗೆ ಜವಾಬ್ದಾರಿ ಮೂಡಿಸುವತ್ತ ವೆಂಕಟರಮಣ ಪಿತ್ರೋಡಿ ಸಂಸ್ಥೆ ವಿಶಿಷ್ಟ ಪ್ರಯತ್ನ-ಭಾಂಧವ್ಯ...

ಯುವ ಕ್ರಿಕೆಟಿಗರಿಗೆ ಜವಾಬ್ದಾರಿ ಮೂಡಿಸುವತ್ತ ವೆಂಕಟರಮಣ ಪಿತ್ರೋಡಿ ಸಂಸ್ಥೆ ವಿಶಿಷ್ಟ ಪ್ರಯತ್ನ-ಭಾಂಧವ್ಯ ಟ್ರೋಫಿ-2021

-

- Advertisment -spot_img
ಕಳೆದ ಮೂರು ದಶಕಗಳಿಂದ
ಕ್ರೀಡೆಯ ಜೊತೆ ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ಪ್ರತಿ ವರ್ಷವೂ ಈ ಸಂಸ್ಥೆ ಸಂಘಟಿಸುವ ಪ್ರತಿಯೊಂದು ಕ್ರೀಡಾ ಚಟುವಟಿಕೆಗಳಲ್ಲಿ ಹೊಸತನ,ಸಮಾಜಕ್ಕೆ ಸಂದೇಶ,ಯುವ ಜನಾಂಗಕ್ಕೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ.
ವೆಂಕಟರಮಣ ಸಂಸ್ಥೆಯ ಜ್ಯೂನಿಯರ್ ತಂಡ ಈ ಬಾರಿ ಹಿರಿಯ ಕ್ರಿಕೆಟಿಗರ ಸಲಹೆ,ಸಹಕಾರದೊಂದಿಗೆ ಉದ್ಯಾವರ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಯುವ ಜನಾಂಗಕ್ಕೆ ಮನೆ ಜವಾಬ್ದಾರಿ ಮೂಡಿಸುವ ಸಲುವಾಗಿ ವಿಶಿಷ್ಟ ಪ್ರಯತ್ನದ ರೂಪದಲ್ಲಿ  ಜನವರಿ 16 ಮತ್ತು 17 ರಂದು ಉದ್ಯಾವರ
ಗ್ರಾಮಪಂಚಾಯತ್ ಮೈದಾನದಲ್ಲಿ
ಭಾಂದವ್ಯ ಟ್ರೋಫಿ-2021 ಆಯೋಜಿಸಿದ್ದಾರೆ.
ಉದ್ಯಾವರ ಪರಿಸರದ 15 ತಂಡಗಳು ಈ ಪಂದ್ಯಾಕೂಟದಲ್ಲಿ ಭಾಗವಹಿಸುತ್ತಿದ್ದು,
ವಿಜೇತ ತಂಡಗಳಿಗೆ ನಗದು ಬಹುಮಾನದ  ಬದಲಾಗಿ ಅಕ್ಕಿಯನ್ನು ನೀಡಲಾಗುತ್ತಿದೆ.
ಪ್ರಥಮ ಸ್ಥಾನಿ ತಂಡಕ್ಕೆ 600 ಕೆ‌.ಜಿ.ಅಕ್ಕಿ( ತಂಡದ ಎಲ್ಲಾ ಆಟಗಾರರಿಗೆ ತಲಾ 50 ಕೆ.ಜಿ ಅಕ್ಕಿ),ದ್ವಿತೀಯ ಸ್ಥಾನಿ ತಂಡಕ್ಕೆ 300
ಕೆ.ಜಿ ಅಕ್ಕಿ(ತಂಡದ ಎಲ್ಲಾ ಆಟಗಾರರಿಗೆ 25 ಕೆ.ಜಿ ಅಕ್ಕಿ),ಪ್ರತಿ ಪಂದ್ಯಕ್ಕೂ ಪಂದ್ಯಶ್ರೇಷ್ಟ 5 ಕೆ‌.ಜಿ ಅಕ್ಕಿ,ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರನಿಗೆ 25 ಕೆ‌.ಜಿ ಅಕ್ಕಿಯನ್ನು ನೀಡಲಾಗುತ್ತಿದೆ.
ಬಹುತೇಕ ಯುವಕರು ಗೆದ್ದ ನಗದು ಕೈಗೆ ಸಿಕ್ಕಾಗ ದಾರಿ ತಪ್ಪುವುದನ್ನು ಮನಗಂಡ ವೆಂಕಟರಮಣ ಸಂಸ್ಥೆ ಕಳೆದ ವರ್ಷವೂ ಕೂಡ ವಿಜೇತರಿಗೆ ನಗದು ಬಹುಮಾನದ ಬದಲಾಗಿ, ಕೆ‌.ಜಿ.ಗಟ್ಟಲೆ ಅಕ್ಕಿ ಬಹುಮಾನವನ್ನು ನೀಡಿ,ಆಟಗಾರರ ಪೋಷಕರ  ಮನದಲ್ಲಿ ಸಾರ್ಥಕ್ಯ ಭಾವ ಮೂಡಿಸುವಲ್ಲಿ ಯಶಸ್ವಿಯಾಗಿತ್ತು.
ಈ ಬಾರಿಯೂ ಕೂಡ ಟನ್ ಗಟ್ಟಲೆ ಅಕ್ಕಿ ಗ್ರಾಮೀಣ ಭಾಗದ ಯುವ ಕ್ರಿಕೆಟಿಗರ ಮನೆಗಳನ್ನು ತಲುಪಲಿದೆ….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 5 =

Latest news

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...
- Advertisement -spot_imgspot_img

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

Must read

- Advertisement -spot_imgspot_img

You might also likeRELATED
Recommended to you