7.1 C
London
Wednesday, April 24, 2024
Homeಭರವಸೆಯ ಬೆಳಕುಬೈಂದೂರಿನಲ್ಲಿ ಇಂದು-ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕ ಶಿಲಾನ್ಯಾಸ ಸಮಾರಂಭ.

ಬೈಂದೂರಿನಲ್ಲಿ ಇಂದು-ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕ ಶಿಲಾನ್ಯಾಸ ಸಮಾರಂಭ.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಉದ್ಯೋಗ ವಂಚಿತ ಯುವಕರು ಹಾಗೂ ಬಡವರ್ಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೈಂದೂರಿನ ಗೋಳಿಹೊಳೆ ಸಮೀಪ ನಿರ್ಮಾಣವಾಗುತ್ತಿರುವ,ಮತ್ಸ್ಯ ಬಂಧನ ಪ್ರೈವೇಟ್ ಲಿಮಿಟೆಡ್-ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಕಾರ್ಯಕ್ರಮ
ಕ್ರೀಡಾಪ್ರೋತ್ಸಾಹಕರು,ಮತ್ಸ್ಯಬಂಧನ ಸಂಸ್ಥೆಯ ಆಡಳಿತ ನಿರ್ದೇಶಕರು,ಶೆಫ್ ಟಾಕ್ ಕಂಪೆನಿ ಮಾಲೀಕರು,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರು ಶ್ರೀ ಗೋವಿಂದ ಬಾಬು ಪೂಜಾರಿಯವರ ನೇತೃತ್ವದಲ್ಲಿ ಇಂದು ಬೈಂದೂರಿನ ಎಲ್ಲೂರಿನಲ್ಲಿ ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ನಡೆಯಲಿದೆ.
 ಉತ್ಪಾದನಾ ಘಟಕದ ಶಿಲಾನ್ಯಾಸವನ್ನು ಮುಜರಾಯಿ,ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರವೇರಿಸಲಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಶ್ರೀ.ಬಿ‌.ವೈ.ರಾಘವೇಂದ್ರ ಸಭಾ ಕಾರ್ಯಕ್ರಮದ ಉದ್ಘಾಟನೆ ನಡೆಸಲಿದ್ದಾರೆ.ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರು ಶ್ರೀ.ಬಿ.ಎಂ.ಸುಕುಮಾರ್ ಶೆಟ್ಟಿ ಸಭಾಧ್ಯಕ್ಷರಾಗಿ ಭಾಗವಹಿಸಲಿದ್ದು,ಕರ್ನಾಟಕ ಸರಕಾರದ ನೂತನ ಸಚಿವರಾದ ಶ್ರೀ.ಎಸ್.ಅಂಗಾರ ಇವರ ಗೌರವ ಉಪಸ್ಥಿತಿ ಸಮಾರಂಭದ ಮೆರುಗನ್ನು ಹೆಚ್ಚಿಸಲಿದೆ.
ಇಂದಿನ ಕಾರ್ಯಕ್ರಮದಲ್ಲಿ ಉಡುಪಿ,ದ.ಕ ವಿಧಾನ ಸಭಾ ಕ್ಷೇತ್ರದ ಶಾಸಕರು,ಜಿಲ್ಲಾ,ತಾಲ್ಲೂಕು ಪಂಚಾಯತ್ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
 ಮತ್ಸ್ಯಬಂಧನ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರು ಗೋವಿಂದ ಬಾಬು ಪೂಜಾರಿ ಹಾಗೂ ನಿರ್ದೇಶಕರಾದ ಅರುಣ್ ಧನಪಾಲ್ ಸರ್ವರಿಗೂ ಆದರದ ಸ್ವಾಗತವನ್ನು ಬಯಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 + nine =