7.1 C
London
Wednesday, April 24, 2024
Homeಕ್ರಿಕೆಟ್ಸುಜಿತ್ ಭರ್ಜರಿ ಬ್ಯಾಟಿಂಗ್- ಎಮ್.ಬಿ.ಸಿ.ಸಿ ಜಯನಗರ ಮಡಿಲಿಗೆ ಸ್ವಾಮಿ ವಿವೇಕಾನಂದ ಕಪ್-2021

ಸುಜಿತ್ ಭರ್ಜರಿ ಬ್ಯಾಟಿಂಗ್- ಎಮ್.ಬಿ.ಸಿ.ಸಿ ಜಯನಗರ ಮಡಿಲಿಗೆ ಸ್ವಾಮಿ ವಿವೇಕಾನಂದ ಕಪ್-2021

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಭಾರತೀಯ ಜನತಾ ಪಕ್ಷ,ಬೆಂಗಳೂರು ದಕ್ಷಿಣ ಇವರು ಪ್ರಸ್ತುತ ಪಡಿಸಿದ,ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನಾಚರಣೆ ಹಾಗೂ ಯುವಕರ ದಿನಾಚರಣೆಯ ಅಂಗವಾಗಿ ಬಸವನಗುಡಿ ವಿದ್ಯಾಪೀಠ ಸಮೀಪದ ಚೆನ್ನಮ್ಮನ ಕೆರೆ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ 3 ದಿನಗಳ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಸ್ವಾಮಿ ವಿವೇಕಾನಂದ ಕಪ್-2021 ನ್ನು ಎಮ್.ಬಿ.ಸಿ.ಸಿ ಜಯನಗರ ತಂಡ ಜಯಿಸಿದೆ.
ಲೀಗ್ ಹಂತದ ರೋಚಕ ಪಂದ್ಯಗಳ ಬಳಿಕ ಸೆಮಿಫೈನಲ್ಸ್ ನಲ್ಲಿ ನ್ಯಾಶ್ ಬೆಂಗಳೂರು
ಆಟಗಾರರನ್ನೊಳಗೊಂಡ  ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡ ನವೀನ್ ಫೈಟರ್ಸ್ ತಂಡವನ್ನು,ಎಮ್.ಬಿ‌.ಸಿ.ಸಿ ತಂಡ ಎಮ್‌.ಪಿ.ಥಂಡರ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡ 6 ಓವರ್ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 33 ಕಲೆಹಾಕಿತ್ತು.ಸುಲಭ ಸಾಧ್ಯತೆಯ ಗುರಿಯನ್ನು ಬೆನ್ನತ್ತಿದ ಎಮ್.ಬಿ.ಸಿ.ಸಿ ಅಗ್ರಕ್ರಮಾಂಕದ ಆಟಗಾರರ ಸಾಹಸದಿಂದ  ಕೇವಲ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ಜಯಭೇರಿ ಬಾರಿಸಿತ್ತು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಎಮ್.ಬಿ.ಸಿ.ಸಿ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡ,1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.
ಪಂದ್ಯಾಕೂಟದ ಬೆಸ್ಟ್ ಬ್ಯಾಟ್ಸ್‌ಮನ್‌ ಪ್ರಶಸ್ತಿ ನಿತ್ಯ ನಿರಂತರ ಸೇವಾ ಟ್ರಸ್ಟ್ ಗೆ ಆಡಿದ ನ್ಯಾಶ್ ತಂಡದ ನವೀನ್ ಚೂ,ಬೆಸ್ಟ್ ಬೌಲರ್ ಅದೇ ತಂಡದ ಕೃಷ್ಣ ಹಾಗೂ ಲೀಗ್ ಹಂತದಲ್ಲಿ ಭರ್ಜರಿ 7 ಸಿಕ್ಸರ್,4 ಬೌಂಡರಿ ಸಹಿತ (20 ಎಸೆತಗಳಲ್ಲಿ 63 ರನ್) ಆಕರ್ಷಕ ಅರ್ಧಶತಕ ಬಾರಿಸಿ,ಟೂರ್ನಮೆಂಟ್ ನ‌ ಅತ್ಯಧಿಕ ರನ್ ಗಳಿಕೆಯ ಆಟಗಾರನಾಗಿ ಹೊರಹೊಮ್ಮಿದ ಎಮ್.ಬಿ.ಸಿ.ಸಿ ತಂಡದ ಸುಜಿತ್ ಆಚಾರ್ಯ ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 − 4 =