ಅಥ್ಲೆಟಿಕ್ಸ್ಕ್ರೀಡಾ ಕ್ಷೇತ್ರದ ಧ್ರುವತಾರೆ" ದಾಖಲೆಗಳ ಸರದಾರ ಉಡುಪಿಯ ಧ್ರುವ ಬಲ್ಲಾಳ್

ಕ್ರೀಡಾ ಕ್ಷೇತ್ರದ ಧ್ರುವತಾರೆ” ದಾಖಲೆಗಳ ಸರದಾರ ಉಡುಪಿಯ ಧ್ರುವ ಬಲ್ಲಾಳ್

-

- Advertisment -spot_img
ಹೆಸರೇ ಹೇಳುವಂತೆ ಈತ ಧ್ರುವ ನಕ್ಷತ್ರದಂತೆ ಕ್ರೀಡಾಕ್ಷೇತ್ರದಲ್ಲಿ ಮಿನುಗುವ ಧ್ರುವತಾರೆ.
ಹೌದು 2009ರಲ್ಲಿ ಬೆಂಗಳೂರಿನಲ್ಲಿ ಯುವಕರ ರಾಜ್ಯ ಒಲಿಂಪಿಕ್ ಸಂಸ್ಥೆ ನಡೆಸಿದ ಕ್ರೀಡಾಕೂಟದಲ್ಲಿ 100 ಮತ್ತು 400 ಮೀಟರ್ ಓಟದಲ್ಲಿ ಚಿನ್ನದ ಪದಕ ಪಡೆದುದಲ್ಲದೆ ವೈಯಕ್ತಿಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾನೆ.
ಅದೇ ವರ್ಷದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ಅಥ್ಲೆಟಿಕ್ ಮೀಟ್ ನಲ್ಲಿ ಭಾಗವಹಿಸಿದ್ದಲ್ಲದೆ 100, 200 ಮತ್ತು 400 ಮೀಟರ್ ಓಟದಲ್ಲಿ ವೈಯಕ್ತಿಕ ಚಾಂಪಿಯನ್ ಜೊತೆಗೆ ಚಿನ್ನದ ಪದಕ ಪಡೆದ ಈತ 200 ಮೀಟರ್ ಓಟದಲ್ಲಿ ರಾಜ್ಯ ಮಟ್ಟದಲ್ಲಿ 23.85 ಸೆಕೆಂಡುಗಳಲ್ಲಿ ಕ್ರಮಿಸಿ ದಾಖಲೆಯನ್ನು ಬರೆದಿದ್ದಾನೆ. ಅಲ್ಲದೆ ಪಂಜಾಬ್ ನ ಸಂಗ್ರೂರ್ ನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದಾನೆ.
2020 ಜನವರಿ ತಿಂಗಳಲ್ಲಿ. ಮುಂಬಯಿಯ ರಿಲಯನ್ಸ್ ಫೌಂಡೇಶನ್  ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾನೆ.
2020 ಫೆಬ್ರವರಿ ತಿಂಗಳಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ನಡೆದ ಭಾರತದ ಮೊದಲ ಮಿನಿ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
2021 ಜನವರಿ ತಿಂಗಳಲ್ಲಿ ಮೂಡಬಿದರೆಯಲ್ಲಿ ನಡೆದ 36 ನೆಯ ಕರ್ನಾಟಕ ರಾಜ್ಯ ಜ್ಯೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಡೆದಿದ್ದು ಅದರಲ್ಲಿ ಧ್ರುವ 16 ವರ್ಷದೊಳಗಿನ ಮಕ್ಕಳಿಗೆ ನಡೆದ 300 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
2021 ಫೆಬ್ರವರಿ ತಿಂಗಳ 6 ರಂದು ಅಸ್ಸಾಂ ನ ಗುವಾಹಟಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾನೆ‌. ಕರಾಟೆಯಲ್ಲಿ ಬ್ರೌನ್ ಬೆಲ್ಟ್ ಪಡೆದ ಈತ ಉತ್ತಮ ಚೆಸ್ ಆಟಗಾರ ಕೂಡ ಹೌದು.
ಉಡುಪಿಯ ಸೈಂಟ್ ಸಿಸಿಲೀಸ್ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಈತ  ಉಡುಪಿಯ ಎನ್.ಪ್ರಹ್ಲಾದ್ ಬಲ್ಲಾಳ್ ಮತ್ತು  ಎನ್. ಸವಿತಾ ಬಲ್ಲಾಳ್ ದಂಪತಿಯ ಪುತ್ರ. ಪ್ರಸ್ತುತ ಉಡುಪಿಯ ಕೋಚ್ ಜಾಹಿರ್ ಅಬ್ಬಾಸ್ ಇವರಲ್ಲಿ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.
ಧ್ರುವ ಕ್ರೀಡಾಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುತ್ತಾ ಇನ್ನಷ್ಟು ಮಿನುಗಲಿ ಎಂದು
ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಧ್ರುವ ಅವರಿಗೆ ಶುಭಹಾರೈಕೆಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × five =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you