ಇತರೆಬಹು ನಿರೀಕ್ಷೆಯ ಬಿಗ್ ಬಾಸ್ ಸ್ಪರ್ಧೆಗೆ ಗ್ರ್ಯಾಂಡ್ ಎಂಟ್ರಿ‌ ಕೊಟ್ಟ ಸಿ.ಸಿ.ಎಲ್...

ಬಹು ನಿರೀಕ್ಷೆಯ ಬಿಗ್ ಬಾಸ್ ಸ್ಪರ್ಧೆಗೆ ಗ್ರ್ಯಾಂಡ್ ಎಂಟ್ರಿ‌ ಕೊಟ್ಟ ಸಿ.ಸಿ.ಎಲ್ ಸ್ಟಾರ್- ರಾಜೀವ್ ಹನು.

-

- Advertisment -spot_img
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿಯು ಭರ್ಜರಿಯಾಗಿ ಆರಂಭಗೊಂಡಿದೆ. ಬಿಗ್ ಬಾಸ್ ತಂಡ ಈಗಾಗಲೇ ಪ್ರಕಟಿಸಿರುವಂತೆ ಈ ಆವೃತ್ತಿಯಲ್ಲಿ ಸೆಲೆಬ್ರಿಟಿಗಳೇ ಇದ್ದಾರೆ‌.
ಈ ಬಾರಿಯ ಬಿಗ್ ಬಾಸ್ ಸಮಸ್ತ ಕನ್ನಡಿಗರ ಕುತೂಹಲ ಕೆರಳಿಸಿರುವ ವಿಚಾರವೆಂದರೆ 16 ನೇ ನಂಬರ್ ಸ್ಪರ್ಧಿಯ ರೂಪದಲ್ಲಿ
ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಎಂಟ್ರಿಕೊಟ್ಟ ಚಲನ ಚಿತ್ರ ನಟ,
ಸಿ.ಸಿ.ಎಲ್ ಸ್ಟಾರ್ ಪ್ಲೇಯರ್ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ ತಂಡದಲ್ಲಿ ಸಾಕಷ್ಟು ಮಿಂಚಿದ ಆಟಗಾರ  ರಾಜೀವ್ ಹನು.

ಚಲನಚಿತ್ರ ರಂಗದ ಜೊತೆ ಸಿ.ಸಿ.ಎಲ್ ಹಾಗೂ ಕೆ.ಪಿ.ಎಲ್ ನಲ್ಲಿ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಟೆನ್ನಿಸ್ಬಾಲ್ ಕ್ರಿಕೆಟ್ ಫ್ರೆಂಡ್ಸ್ ಬೆಂಗಳೂರು ತಂಡದ ಪರವಾಗಿ ಮಿಂಚಿದ ಕ್ರಿಕೆಟಿಗ ರಾಜೀವ್ ಹನು.
ಮೂಲತಃ ಆಡುಗೋಡಿ ತಂಡದ ಮೂಲಕ ಕ್ರಿಕೆಟ್ ಜೀವನ ಪ್ರಾರಂಭಿಸಿದ ರಾಜೀವ್ ಇವರ ಪ್ರತಿಭೆಗೆ ರಾಜ್ಯ ಮಟ್ಟದ ವೇದಿಕೆಯನ್ನು ಸೃಷ್ಟಿಸಿದ ತಂಡ ಫ್ರೆಂಡ್ಸ್ ಬೆಂಗಳೂರಿನ ರೇಣು ಗೌಡರು.2004 ರಲ್ಲಿ ಪಡುಬಿದ್ರಿ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಟೆನ್ನಿಸ್ಬಾಲ್ ಕ್ರಿಕೆಟ್ ಅಂಗಣಕ್ಕೆ ಪಾದಾರ್ಪಣೆಗೈದ ರಾಜೀವ್ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ.ಎಡಗೈ ದಾಂಡಿಗ ಇಮ್ರಾನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ರಾಜೀವ್ ಬಿರುಸಿನ ಹೊಡೆತಗಳ ಮೂಲಕ ಕ್ಷಿಪ್ರಗತಿಯಲ್ಲಿ ರನ್ ಸರಾಸರಿ ಏರಿಸಿ,ರಾಜ್ಯದ ಅತ್ಯಂತ ಯಶಸ್ವೀ ಆರಂಭಿಕ ಜೋಡಿ ಖ್ಯಾತಿಗೆ ಪಾತ್ರರಾಗಿದ್ದು ಜೊತೆಗೆ ಫ್ರೆಂಡ್ಸ್ ಬೆಂಗಳೂರು ತಂಡ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಜಯಿಸುವಲ್ಲಿ ರಾಜೀವ್ ಪಾತ್ರ ಮಹತ್ತರವಾದದ್ದು.
ಸಿ.ಸಿ.ಬಿ ಯಲ್ಲಿ ಸೇವೆಯ ನಡುವೆ ಚಿತ್ರರಂಗದತ್ತ ವಿಪರೀತ ಒಲವಿನ ಕಾರಣ ಚಲನಚಿತ್ರ ರಂಗಕ್ಕೆ ಪಾದಾರ್ಪಣೆಗೈದ ರಾಜೀವ್,ಕಿಚ್ಚ ಸುದೀಪ್ ಜೊತೆ ಹೆಬ್ಬುಲಿ ಹಾಗೂ ಆರ್.ಎಕ್ಸ್‌‌.ಸೂರಿ,ಬೆಂಗಳೂರು-56,ಉಸಿರೇ ಉಸಿರೇ ಹೀಗೆ ಅನೇಕ ಚಿತ್ರಗಳಲ್ಲಿ ನಟಿಸಿದ್ದು,ಮುಂದಿನ ದಿನಗಳಲ್ಲಿ ಬಹು ನಿರೀಕ್ಷೆಯ ಚಲನಚಿತ್ರಗಳು ಸೆಟ್ಟೇರಲಿದೆ.
ಸಿನಿಮಾ ರಂಗದ ಮೂಲಕ ಕಿಚ್ಚ ಸುದೀಪ್ ನೆಚ್ಚಿನ ಆಟಗಾರರೆನಿಸಿಕೊಂಡು,ಕರ್ನಾಟಕ ಬುಲ್ಡೋಜರ್ ನ ಪರವಾಗಿ ವೇಗದ ಶತಕ ಸಹಿತ,ಅನೇಕ ಗೆಲುವಿನ ಇನ್ನಿಂಗ್ಸ್ ಕಟ್ಟಿ,ಸಿ‌.ಸಿ.ಎಲ್ ನ ಕ್ರಿಸ್ ಗೇಲ್ ಖ್ಯಾತಿಗೆ ಪಾತ್ರರಾಗಿದ್ದಾರೆ.
ಕೆ.ಪಿ.ಎಲ್ ನಲ್ಲೂ ಅತ್ಯುತ್ತಮ ನಿರ್ವಹಣೆ ನೀಡಿದ್ದಾರೆ.
 ಫ್ರೆಂಡ್ಸ್ ಬೆಂಗಳೂರು ತಂಡದಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ರಾಜೀವ್ ಹನು ಇವರು ರೇಣುಗೌಡರ ಮನೆಯ ಸದಸ್ಯರಂತೆ ಕಷ್ಟ,ಸುಖಗಳಲ್ಲಿ ಭಾಗಿಯಾಗುತ್ತಾರೆ.
ತನ್ನ ಒಡನಾಡಿಗಳನ್ನು,ಹಿರಿಯ ಕ್ರಿಕೆಟಿಗರನ್ನು ಗೌರವಿಸುವ ಪರಿಪಾಠವನ್ನು ಮೈಗೂಡಿಸಿಕೊಂಡಿದ್ದು,
ಸಮಾಜಮುಖಿಯಾಗಿ ಬದುಕನ್ನು ಸಾಗಿಸುತ್ತಿರುವ ಸರಳ ಸಜ್ಜನಿಕೆಯ ವ್ಯಕ್ತಿತ್ವದ ರಾಜೀವ್ ಹನು ಇವರು ಚಲನಚಿತ್ರ ರಂಗ,ಸಿ.ಸಿ.ಎಲ್ ಹಾಗೂ ಕರ್ನಾಟಕ ಟೆನ್ನಿಸ್ಬಾಲ್ ಕ್ರಿಕೆಟ್ ನ ಗೌರವದ ಪ್ರತೀಕ.
ಬಿಗ್ ಬಾಸ್ ಮನೆಯಲ್ಲಿ ನಿಮ್ಮೆಲ್ಲಾ ಪ್ರತಿಭೆಗಳ ಅನಾವರಣಗೊಳ್ಳಲಿ
ಬಿಗ್ ಬಾಸ್ ನಿಮಗೆ ಮತ್ತಷ್ಟು ಯಶಸ್ಸನ್ನು ತಂದುಕೊಡಲಿ.ಸಿ.ಸಿ.ಎಲ್ ಹಾಗೂ ಟೆನ್ನಿಸ್ಬಾಲ್ ಕ್ರಿಕೆಟ್ ರಂಗದಲ್ಲಿ ನಿಮ್ಮ‌ ಸೇವೆಯ ಮೂಲಕ ಕರ್ನಾಟಕ ರಾಜ್ಯವಲ್ಲದೇ ದೇಶ,ವಿದೇಶದೆಲ್ಲೆಡೆ ಅಪಾರ ಅಪಾರ ಅಭಿಮಾನಿ ಬಳಗ ಸಂಪಾದಿಸಿದ ನೀವು ಬಿಗ್ ಬಾಸ್ ನಲ್ಲಿ ಗೆದ್ದುಬನ್ನಿ,ಕನ್ನಡಿಗರ ಹೃದಯ ತುಂಬಿದ ಹಾರೈಕೆ ನಿಮ್ಮೊಂದಿಗಿದೆ.ನಿಮಗೆ ರಾಜ್ಯ ಟೆನ್ನಿಸ್ ಕ್ರಿಕೆಟ್ ಹಾಗೂ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ವತಿಯಿಂದ ಶುಭ ಹಾರೈಕೆಗಳು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + ten =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you