ಸ್ಪೋರ್ಟ್ಸ್ಕಿನ್ನಿಗೋಳಿ-ಗೆಲುವಿನಲ್ಲಿ ಸಾರ್ಥಕತೆ ಮೆರೆದ ಕಟೀಲ್ ಕಮಾಂಡೋಸ್ -ಶರತ್ ಶೆಟ್ಟಿ ಭಾಷಣ ಸ್ಪೂರ್ತಿ-ಪಡುಬಿದ್ರಿ...

ಕಿನ್ನಿಗೋಳಿ-ಗೆಲುವಿನಲ್ಲಿ ಸಾರ್ಥಕತೆ ಮೆರೆದ ಕಟೀಲ್ ಕಮಾಂಡೋಸ್ -ಶರತ್ ಶೆಟ್ಟಿ ಭಾಷಣ ಸ್ಪೂರ್ತಿ-ಪಡುಬಿದ್ರಿ ಫ್ರೆಂಡ್ಸ್ ನ ಆದರ್ಶ ಅನುಕರಣೆ

-

- Advertisment -spot_img
ಶರತ್ ಶೆಟ್ಟಿಯವರ ಭಾಷಣದ ಬಳಿಕ- ಪಂದ್ಯಗೆದ್ದ ಹಣವನ್ನು ಕ್ಯಾನ್ಸರ್ ಪೀಡಿತರಿಗೆ ನೀಡಿದ ಕಟೀಲ್ ಕಮಾಂಡೋಸ್.
ಪ್ರತಿವರ್ಷದಂತೆ ಈ ಬಾರಿಯೂ ಕೂಡ ಕಿನ್ನಿಗೋಳಿಯಲ್ಲಿ
ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣೆಯ ಸದುದ್ದೇಶದಿಂದ 7 ಪಂಚಾಯತ್ ವ್ಯಾಪ್ತಿಯ 8 ತಂಡಗಳ ನಡುವೆ ಕೆ.ಎಫ್‌.ಸಿ ಪ್ರೀಮಿಯರ್ ಲೀಗ್ ಆಯೋಜಿಸಲಾಗಿತ್ತು.ಸ್ಥಳೀಯ 8 ಫ್ರಾಂಚೈಸಿಗಳಲ್ಲಿ ಕಟೀಲ್ ಕಮಾಂಡೋಸ್ ತಂಡ ಕಿಂಗ್ಸ್ ಇಲೆವೆನ್ ಕಿನ್ನಿಗೋಳಿ ತಂಡವನ್ನು ಸೋಲಿಸಿ ಅಂತಿಮವಾಗಿ ಗೆಲುವನ್ನು ಸಾಧಿಸಿತ್ತು.
*ಪಡುಬಿದ್ರಿ ಫ್ರೆಂಡ್ಸ್ ನ ಆದರ್ಶವನ್ನು ಪಾಲಿಸಿದ ಕೆ.ಎಫ್.ಸಿ ಥಂಡರ್ಸ್*
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ,ಸನ್ಮಾನ‌ ಸ್ವೀಕರಿಸಿ ಆಟಗಾರರನ್ನುದ್ದೇಶಿಸಿ ಮಾತನಾಡಲು ಮೈಕ್ ಹಿಡಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು,ಪಡುಬಿದ್ರಿ ಫ್ರೆಂಡ್ಸ್ ನ ಕಪ್ತಾನರಾದ ಶರತ್ ಶೆಟ್ಟಿ ಪಡುಬಿದ್ರಿ 90 ರ ದಶಕದ ದಿನಗಳ ಕ್ರಿಕೆಟ್ ನ್ನು ನೆನಪಿಸಿದರು.ಪಡುಬಿದ್ರಿಯಲ್ಲಿ ಕ್ಯಾನ್ಸರ್ ಪೀಡಿತರ ನೆರವಿಗಾಗಿ ಏರ್ಪಡಿಸಿದ್ದ ಪಂದ್ಯಾವಳಿಯಲ್ಲಿ ಪಡುಬಿದ್ರಿ ಫ್ರೆಂಡ್ಸ್ ಜಯಿಸಿದ 15 ಸಾವಿರ ನಗದು ಅಷ್ಟನ್ನೂ ಕ್ಯಾನ್ಸರ್ ಪೀಡಿತ ದಂಪತಿಗಳಿಗೆ ನೀಡಿದ್ದರು.ಹಾಗೆಯೇ ಇನ್ನೊಂದೆಡೆ ನಡೆದ ಪಂದ್ಯಾವಳಿಯಲ್ಲಿ ಜಯಿಸಿದ 21 ಸಾವಿರ ನಗದನ್ನು ತಲಾ 10,500 ಇಬ್ಬರು ಬಡ ವಿದ್ಯಾರ್ಥಿಗಳಿಗೆ  ನೀಡಿದ ಉದಾಹರಣೆಯನ್ನು ವಿವರಿಸಿದ್ದರು. ಇದಾದ ಬಳಿಕ ಕೆಲವೇ ಕ್ಷಣಗಳಲ್ಲಿ ಚಾಂಪಿಯನ್ಸ್ ತಂಡ ಕಟೀಲ್ ಕಮಾಂಡೋಸ್ ನ ಮಾಲೀಕ ಅಭಿಲಾಷ್ ಶೆಟ್ಟಿ ಪಂದ್ಯಾವಳಿಯ ನಗದು ಬಹುಮಾನ 50 ಸಾವಿರದಲ್ಲಿ 10,000 ರೂ ನ್ನು ಆಯೋಜಕರ ಬಳಿ ನೀಡಿ ಕಿನ್ನಿಗೋಳಿಯ ಕ್ಯಾನ್ಸರ್ ಪೀಡಿತ ಇಲೆಕ್ಟ್ರಿಶಿಯನ್ ಶೈಲೇಶ್ ಕಾಮತ್ ಇವರಿಗೆ ನೀಡುವಂತೆ ಸೂಚಿಸಿದ್ದರು.
ಇದಾದ ಬಳಿಕ ಕೆಲವೇ ಕ್ಷಣಗಳಲ್ಲಿ ಚಾಂಪಿಯನ್ಸ್ ತಂಡ ಕಟೀಲ್ ಕಮಾಂಡೋಸ್ ನ  ಮಾಲೀಕ ಅಭಿಲಾಷ್ ಶೆಟ್ಟಿ ಪಂದ್ಯಾವಳಿಯ ನಗದು ಬಹುಮಾನ 50 ಸಾವಿರದಲ್ಲಿ 10,000 ರೂ ನ್ನು ಆಯೋಜಕರ ಬಳಿ ನೀಡಿ ಕಿನ್ನಿಗೋಳಿಯ ಕ್ಯಾನ್ಸರ್ ಪೀಡಿತ ಇಲೆಕ್ಟ್ರಿಶಿಯನ್ ಶೈಲೇಶ್ ಕಾಮತ್  ಇವರಿಗೆ ನೀಡುವಂತೆ ಸೂಚಿಸಿದ್ದರು.
ಅದರಂತೆಯೇ ಪಂದ್ಯಾಟದ ಆಯೋಜಕ ಸಂಸ್ಥೆ ಕಿನ್ನಿಗೋಳಿ ಫ್ರೆಂಡ್ಸ್ ಕ್ರಿಕೆಟರ್ಸ್ ಶೈಲೇಶ್ ಕಾಮತ್  ರಿಗೆ 10000 ನಗದನ್ನು ಸದ್ಯದಲ್ಲಿಯೇ ನೀಡಲಿದ್ದಾರೆ‌.
ಇಂತಹ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯಗಳು ಎಲ್ಲಾ ಪಂದ್ಯಾವಳಿಗಳಲ್ಲಿ ನಡೆದರೆ ಕ್ರೀಡಾಕೂಟವೂ ಸಾರ್ಥಕ ಅಲ್ಲವೇ?
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

4 × 5 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you