ಸ್ಪೋರ್ಟ್ಸ್ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ

ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ

-

- Advertisment -spot_img
ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಸರಕಾರದ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಉದ್ದೇಶದಿಂದ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ) ಆಯೋಜಿಸಲು ಉದ್ದೇಶಿಸಿರುವ ಅತ್ಯಂತ ಪ್ರತಿಷ್ಠಿತ “ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021” ಮುಂದೂಡಲ್ಪಟ್ಟಿದೆ ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.
ಮೇ 1 ರಿಂದ 10ರ ವರೆಗೆ ಮಂಗಳೂರು, ಸುರತ್ಕಲ್ ಮತ್ತು ಕುಂದಾಪುರದ ವಿವಿಧ ಸ್ಥಳಗಳಲ್ಲಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021” ನಡೆಸಲು ತೀರ್ಮಾನಿಸಲಾಗಿತ್ತು. ಈಗಾಗಲೇ ದೇಶದ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು.  ಕ್ರೀಡಾ ಹಬ್ಬಕ್ಕೆ ಅಗತ್ಯ ಇರುವ ಎಲ್ಲಾ ಸೌಕರ್ಯಗಳನ್ನೂ ಸಜ್ಜುಗೊಳಿಸಲಾಗಿತ್ತು. ಆದರೆ ಕೊರೋನಾ ಮಹಾಮಾರಿ ಮತ್ತೆ ದೇಶಾದ್ಯಂತ ಉಲ್ಬಣಿಸಿದೆ. ಕ್ರೀಡಾಪಟುಗಳ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಸರಕಾರದ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿರುವುದರಿಂದ ಕ್ರೀಡಾಹಬ್ಬವನ್ನು ಮುಂದೂಡಲಾಗಿದೆ. ಆದರೆ ಯಾರೂ ನಿರಾಸೆಗೊಳ್ಳುವ ಅಗತ್ಯವಿಲ್ಲ, ಏಕೆಂದರೆ ಅಕ್ಟೋಬರ್ 9ರಿಂದ 16ರ ವರೆಗೆ ಈ ಹಿಂದೆ ಸೂಚಿಸಿದ ಸ್ಥಳಗಳಲ್ಲೇ ಟಾರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021 ಎಂದಿನಂತೆ ನಡೆಯಲಿದೆ ಎಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಇದರ ಅಧ್ಯಕ್ಷ ಗೌತಮ್ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದುವರೆಗೂ ಉತ್ತಮ ರೀತಿಯಲ್ಲಿ ಸಹಕರಿಸಿದ ಎಲ್ಲ ಕ್ರೀಡಾಅಭಿಮಾನಿಗಳು, ಕ್ರೀಡಾಪಟುಗಳಿಗೂ ಮತ್ತು ಪ್ರಾಯೋಜಕರಿಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ).ಆಭಾರಿಯಾಗಿರುತ್ತದೆ. ಮುಂದೆಯೂ ನಿಮ್ಮ ಪ್ರೋತ್ಸಾಹ ಇದೇ ರೀತಿ ಇರಲಿ. ಅಕ್ಟೋಬರ್ ನಲ್ಲಿ ಕ್ರೀಡಾ ಹಬ್ಬಕ್ಕೆ ಸಜ್ಜಾಗೋಣ, ಅಲ್ಲಿಯವರೆಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಕೋವಿಡ್ ನಿಯಮ ಪಾಲಿಸಿ ಕ್ರೀಡಾಸ್ಫೂರ್ತಿ ಕಾಯ್ದುಕೊಳ್ಳಿ ಎಂದು ಗೌತಮ್  ಶೆಟ್ಟಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen + 20 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you