7.1 C
London
Tuesday, April 23, 2024
Homeಕ್ರಿಕೆಟ್ನ್ಯೂಜಿಲೆಂಡ್‌ಗೆ ಖಡಕ್ ಎಚ್ಚರಿಕೆ ನೀಡಿದ ಚೇತೇಶ್ವರ್ ಪೂಜಾರ...

ನ್ಯೂಜಿಲೆಂಡ್‌ಗೆ ಖಡಕ್ ಎಚ್ಚರಿಕೆ ನೀಡಿದ ಚೇತೇಶ್ವರ್ ಪೂಜಾರ…

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಅಂಕಣದಲ್ಲಿ ನಡೆಯಲಿದೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ ಶಿಪ್ ನ ಫೈನಲ್ ಪಂದ್ಯ.  ಈ ಪಂದ್ಯಕ್ಕೆ ಭಾರತೀಯ ಕ್ರಿಕೆಟ್ ಮಂಡಳಿ ಈಗಾಗಲೇ 20 ಆಟಗಾರರ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಿದೆ.
ಇಪ್ಪತ್ತು ಆಟಗಾರರನ್ನೊಳಗೊಂಡ ನ್ಯೂಜಿಲೆಂಡ್ ತಂಡ ಈಗಾಗಲೇ ಇಂಗ್ಲೆಂಡ್ ಪ್ರವಾಸ ಮಾಡಿದೆ.
ಈ ನಡುವೆ ಭಾರತ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಎಂದೆ ಹೆಸರುವಾಸಿಯಾಗಿರುವ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿ ಕುರಿತು ತಂಡದ ಪರವಾಗಿ ಬಾಯಿ ಬಿಟ್ಟಿದ್ದಾರೆ. ಕಳೆದ ಬಾರಿ ಆಸ್ಟ್ರೇಲಿಯ ವಿರುದ್ಧ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಭಾರತ ಜಯಗಳಿಸುವುದರ ಮೂಲಕ   ತನ್ನ ಬಲಿಷ್ಠತೆಯನ್ನು ತೋರಿಸಿತ್ತು. ಈ ಎರಡೂ ಸರಣಿಗಳಲ್ಲಿ ಭಾರತದ ಪರ  ಶ್ರೇಷ್ಠ ಪ್ರದರ್ಶನವನ್ನು ನೀಡಿ ಚೇತೇಶ್ವರ ಪೂಜಾರ ಮಿಂಚಿದ್ದರು.
ಇದೀಗ ಬರಲಿರುವ ಟೆಸ್ಟ್ ಪಂದ್ಯಗಳ ಕುರಿತು ಮಾತನಾಡಿರುವ ಚೇತೇಶ್ವರ್ ಪೂಜಾರ ನ್ಯೂಜಿಲೆಂಡ್ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ‘ನಮ್ಮ ತಂಡ ತನ್ನದೇ ಆದ ಸಾಮರ್ಥ್ಯವನ್ನು ಹೊಂದಿದೆ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಬಲಿಷ್ಟವಾಗಿದೆ, ಈ ಹಿಂದಿನ ಸರಣಿಯಲ್ಲಿ ಆಡಿದ ಆಟವನ್ನೆ  ಪ್ರದರ್ಶಿಸಿದರೆ  ಯಾವುದೇ ತಂಡದ ವಿರುದ್ಧವಾಗಲಿ ಹಾಗೂ ಯಾವುದೇ ದೇಶದಲ್ಲಾಗಲಿ ನಾವು ಗೆಲುವನ್ನು ಸಾಧಿಸುವುದು ಸುಲಭ ಎಂದು ಚೇತೇಶ್ವರ್ ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಂಡದ ಪ್ರತಿಯೊಬ್ಬ ಆಟಗಾರ ಬಗ್ಗೆ ಮಾತನಾಡಿದ ಅವರು ಟೀಮ್ ಇಂಡಿಯಾ ಇತ್ತೀಚೆಗೆ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿ ಜಯಗಳಿಸಿದೆ,  ತಂಡದಲ್ಲಿನ ಎಲ್ಲಾ ಆಟಗಾರರು ಉತ್ತಮ ಆಟ ಅಡುವುದರ ಜೊತೆಗೆ ಉತ್ತಮ ಅನುಭವವನ್ನು ಹೊಂದಿದ್ದಾರೆ. ಮುಂಬರುವ ದಿನಗಳಲ್ಲೂ ಸ್ಥಿರ ಪ್ರದರ್ಶನದ ಆಟ ಮುಂದುವರಿಸಿದರೆ ಎಲ್ಲಾ ಪಂದ್ಯಗಳಲ್ಲಿಯೂ ಸಹ ಗೆಲುವನ್ನು ನಾವು ಸಾಧಿಸುತ್ತೇವೆ ಎಂದು ಪೂಜಾರಾ ಹೇಳಿದ್ದಾರೆ.
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

Latest stories

LEAVE A REPLY

Please enter your comment!
Please enter your name here

14 − 7 =