ಕ್ರಿಕೆಟ್ಕಷ್ಟ ಹಂಚಿಕೊಂಡು ಪೂಮಾದಿಂದ ಉಚಿತ ಶೂ ಪಡೆದಿದ್ದ ಕ್ರಿಕೆಟಿಗನಿಗೆ ಸಂಕಷ್ಟ...!!

ಕಷ್ಟ ಹಂಚಿಕೊಂಡು ಪೂಮಾದಿಂದ ಉಚಿತ ಶೂ ಪಡೆದಿದ್ದ ಕ್ರಿಕೆಟಿಗನಿಗೆ ಸಂಕಷ್ಟ…!!

-

- Advertisment -spot_img
ಇತ್ತೀಚೆಗಷ್ಟೇ ಜಿಂಬಾಬ್ವೆ ತಂಡದ ಆಟಗಾರ ರ‍್ಯಾನ್ ಬರ್ಲ್‌ ನಮ್ಮ ತಂಡಕ್ಕೆ ಕ್ರಿಕೆಟ್ ಆಡಲು ಸರಿಯಾದ ಶೂ ಇಲ್ಲ ಎಂದು. ಪ್ರತಿ ಪಂದ್ಯದ ನಂತರ ನಾವುಗಳು ಕಿತ್ತುಹೋದ ಶೂಗಳನ್ನು ಧರಿಸಿ ಕ್ರಿಕೆಟ್ ಆಡುತ್ತಿದ್ದೇವೆ, ಪ್ರತಿ ಸರಣಿ ಮುಗಿದ ನಂತರ ಕಿತ್ತುಹೋದ ಶೂಗಳನ್ನು ನಾವೇ ಸರಿಮಾಡುಕೊಳ್ಳಬೇಕಿದೆ. ಹಾಗೂ ಹೊಲಿದುಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮಾಡುವುದರ ಮೂಲಕ ಪ್ರಾಯೋಜಕತ್ವಕ್ಕಾಗಿ ಮನವಿ ಮಾಡಿದ್ದರು.
ರ‍್ಯಾನ್ ಬರ್ಲ್‌ ಮಾಡಿದ ಮನವಿಗೆ 24 ಗಂಟೆಯೊಳಗೆ ಸ್ಪಂದಿಸಿದ ಪ್ರತಿಷ್ಠಿತ  ಪೂಮಾ ಸಂಸ್ಥೆ ಜಿಂಬಾಬ್ವೆ ಆಟಗಾರರಿಗೆ ಉಚಿತ ಶೂಗಳನ್ನು ನೀಡುವುದರ ಮೂಲಕ ಮಾನವೀಯತೆ ಮೆರೆಯಿತು. ಈ ಮೂಲಕ ಶೂಗಳಿಲ್ಲದೆ ಕಷ್ಟಪಡುತ್ತಿದ್ದ ಜಿಂಬಾಬ್ವೆ ತಂಡಕ್ಕೆ ಹೊಚ್ಚಹೊಸ ಶೂಗಳು ಕೈ ಸೇರಿತ್ತು.
ಪೂಮಾ ಸಂಸ್ಥೆ ಮುಂದೆ ಬಂದು ಸ್ಪಂದಿಸಿದಕ್ಕೆ  ಜಿಂಬಾಬ್ವೆ ತಂಡದ ಆಟಗಾರರು ಸಂತೋಷವನ್ನು ವ್ಯಕ್ತಪಡಿಸಿದ್ದರು, ಹಾಗೂ ಟ್ವೀಟ್ ಮೂಲಕ ಮನವಿ ಮಾಡಿದ್ದ ರ‍್ಯಾನ್ ಬರ್ಲ್‌ ಮನವಿಯಂತೆ ಬೇಡಿಕೆ ಈಡೇರಿತ್ತು.
ಆದರೆ ಇದೀಗ ಈ ಎಲ್ಲಾ ಬೆಳವಣಿಗೆಯ ನಂತರ  ಜಿಂಬಾಬ್ವೆ ಕ್ರಿಕೆಟ್ ಬೋರ್ಡ್ ಸಹಾಯ ಮಾಡಿ ಎಂದು ಟ್ವೀಟ್ ಮಾಡಿದ್ದ ರ‍್ಯಾನ್ ಬರ್ಲ್‌ನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದೆಯಂತೆ. ರ‍್ಯಾನ್ ಬರ್ಲ್‌ ಶೂ ಪ್ರಾಯೋಜಕತ್ವ ಕೇಳಿ ಮಾಡಿದ್ದ ಟ್ವೀಟ್ ಜಿಂಬಾಬ್ವೆ ಕ್ರಿಕೆಟ್ ಬೋರ್ಡ್‌ಗೆ ಮಾಡಿರುವ ಅವಮಾನ ಎಂದು ಬೋರ್ಡ್ ನ ಸದಸ್ಯರು ಅಂದುಕೊಂಡಿದ್ದಾರೆಂದು ಹೇಳಲಾಗುತ್ತಿದ್ದು ಆತನ ವಿರುದ್ಧ ಕಠಿಣ ಕ್ರಮಕ್ಕೆ ಜಿಂಬಾಬ್ವೆ ಕ್ರಿಕೆಟ್ ಸಂಸ್ಥೆ ಮುಂದಾಗಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ರ‍್ಯಾನ್ ಬರ್ಲ್‌ ತಂಡದಲ್ಲಿ ಇರುತ್ತಾರೊ ಇಲ್ಲವೊ ಎನ್ನುವ ಅನುಮಾನವಿದೆ. ತಂಡದಲ್ಲಿ  ಅವಕಾಶ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದ್ದು ಟ್ವೀಟ್ ಮೂಲಕ ಕಷ್ಟವನ್ನು ಹಂಚಿಕೊಂಡು  ಸಹಾಯ ಪಡೆದಿದ್ದ ರ‍್ಯಾನ್ ಬರ್ಲ್‌ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎನ್ನುವುದು ಮಾತ್ರ ದುರಂತವೆ ಹೌದು….!!!
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

16 − 10 =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you