14.2 C
London
Tuesday, May 14, 2024
Homeಕ್ರಿಕೆಟ್ಶಿವಮೊಗ್ಗ-2021-22 ಋತುವಿನ ಪ್ರಪ್ರಥಮ ರಾಜ್ಯಮಟ್ಟದ "ಸಹನಾ ಕಪ್" ಗೆದ್ದ ಫ್ರೆಂಡ್ಸ್ ಬೆಂಗಳೂರು

ಶಿವಮೊಗ್ಗ-2021-22 ಋತುವಿನ ಪ್ರಪ್ರಥಮ ರಾಜ್ಯಮಟ್ಟದ “ಸಹನಾ ಕಪ್” ಗೆದ್ದ ಫ್ರೆಂಡ್ಸ್ ಬೆಂಗಳೂರು

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕೋವಿಡ್ ನಿಂದ ಮಂಕಾಗಿದ್ದ ಕ್ರೀಡಾಲೋಕಕ್ಕೆ ಪುನಶ್ಚೇತನದ ತುಂಬುವ ಪ್ರಯತ್ನದಲ್ಲಿ ಶಿವಮೊಗ್ಗದ ಹಿರಿಯ ಸಂಸ್ಥೆ ಸಹನಾ ಕ್ರಿಕೆಟ್ ಕ್ಲಬ್ ಯಶಸ್ವಿಯಾಗಿದೆ.
ಶಿವಮೊಗ್ಗದ ಗೋಪಾಲ ಬಡಾವಣೆಯ ಸಹನಾ ಕ್ರಿಕೆಟ್ ಕ್ಲಬ್ ಇವರು ಆಯೋಜಿಸಿದ 2021-22 ರ ಋತುವಿನ ಮೊದಲ  ರಾಜ್ಯಮಟ್ಟದ ಪಂದ್ಯಾಕೂಟ “ಸಹನಾ ಕಪ್-2021” ಪ್ರಶಸ್ತಿಯನ್ನು ರೇಣು ಗೌಡ ಮಾಲೀಕತ್ವದ ಫ್ರೆಂಡ್ಸ್ ಬೆಂಗಳೂರು ತಂಡ ಜಯಿಸಿದೆ.
ರಾಜ್ಯದ ನಾನಾಭಾಗಗಳಿಂದ ಒಟ್ಟು 16 ತಂಡಗಳು ಭಾಗವಹಿಸಿದ್ದು,ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಅಂತಿಮವಾಗಿ ಕುಮಾರ್ ಫ್ರೆಂಡ್ಸ್ ತಂಡ ನ್ಯಾಶ್ ಬೆಂಗಳೂರು ತಂಡವನ್ನು ಹಾಗೂ ಆರ್.ಕೆ‌ ಸ್ಪೋರ್ಟ್ಸ್ ತೀರ್ಥಹಳ್ಳಿ N.K ಲಯನ್ಸ್  ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದರು.
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಫ್ರೆಂಡ್ಸ್ ಬೆಂಗಳೂರು ಸೀನ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ 6 ಓವರ್ ಗಳಲ್ಲಿ 48 ರನ್ ಗಳಿಸಿದರೆ,ಇದಕ್ಕುತ್ತರವಾಗಿ ಆರ್.ಕೆ.ತೀರ್ಥಹಳ್ಳಿ 30 ರನ್ ಗಳಿಸಲಷ್ಟೇ ಶಕ್ತವಾಯಿತು.
ವಿಜಯಿ ಫ್ರೆಂಡ್ಸ್ ಬೆಂಗಳೂರು ತಂಡ 1.5 ಲಕ್ಷ ನಗದು,ದ್ವಿತೀಯ ಸ್ಥಾನಿ ಆರ್.ಕೆ.ತೀರ್ಥಹಳ್ಳಿ 75 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತಮ್ಮದಾಗಿಸಿಕೊಂಡರೆ,ಪಂದ್ಯಾವಳಿಯುದ್ದಕ್ಕೂ ಶ್ರೇಷ್ಠ ಸವ್ಯಸಾಚಿ ಪ್ರದರ್ಶನ ನೀಡಿದ ಕವಿರಾಜ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು,ಫ್ರೆಂಡ್ಸ್ ನ ನವೀನ್ ಉತ್ತಮ ದಾಂಡಿಗ,ತೀರ್ಥಹಳ್ಳಿಯ ನಿತಿನ್ ಹಾಗೂ ಸುಜಿತ್ ಉತ್ತಮ ಬೌಲರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ವರ್ಣರಂಜಿತ ಸಮಾರೋಪ ಸಮಾರಂಭದಲ್ಲಿ ಪದವೀಧರ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಪಿ‌.ದಿನೇಶ್,ಶಿವ ಟಯರ್ಸ್ ನ ಮಾಲೀಕರಾದ ಶಿವಕುಮಾರ್,ಉದ್ಯಮಿ ಹೆವನ್-ಇನ್ ಹಬೀಬ್,
ಟೂರ್ನಮೆಂಟ್ ನ ಪ್ರಮುಖ ಆಯೋಜಕರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಾದ ಎನ್.ಎಸ್.ಮಂಜುನಾಥ್,ಸಹನಾ ಕ್ರಿಕೆಟರ್ಸ್ ನ ಸಂಸ್ಥಾಪಕ ಬಸವೇ ಗೌಡ,ಅಧ್ಯಕ್ಷ ಇಂದ್ರೇಶ್,ಉಪಾಧ್ಯಕ್ಷ ಫೈರೋಜ್ ಭಾಷಾ,ಖಜಾಂಚಿ ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.ರೋಹನ್ ಡಿಕೋಸ್ಟ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

thirteen − 6 =