ಕ್ರಿಕೆಟ್ಶಿವಮೊಗ್ಗ-ಉಕ್ಕಿನ ನಗರಿಯಲ್ಲಿ ಉತ್ತಪ್ಪ ಆರ್ಭಟ-ಸಚಿನ್ ಹ್ಯಾಟ್ರಿಕ್-ಜೈ ಕರ್ನಾಟಕ ಜಯಭೇರಿ

ಶಿವಮೊಗ್ಗ-ಉಕ್ಕಿನ ನಗರಿಯಲ್ಲಿ ಉತ್ತಪ್ಪ ಆರ್ಭಟ-ಸಚಿನ್ ಹ್ಯಾಟ್ರಿಕ್-ಜೈ ಕರ್ನಾಟಕ ಜಯಭೇರಿ

-

- Advertisment -spot_img
ಓಂ ಕ್ರಿಕೆಟರ್ಸ್ ಇವರ ವತಿಯಿಂದ ಭದ್ರಾವತಿಯ ಜನಪ್ರಿಯ ಶಾಸಕರಾದ ಶ್ರೀ.ಬಿ‌.ಕೆ‌.ಸಂಗಮೇಶ್ವರ ಇವರ ಆಶ್ರಯದಲ್ಲಿ ಯುವ ಮುಖಂಡರಾದ ಕೆ.ಪಿ.ಗಿರೀಶ್ ಇವರ ಸಾರಥ್ಯದಲ್ಲಿ ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೊಟ್ಟಮೊದಲ ರಾಜ್ಯ ಮಟ್ಟದ ಪ್ರತಿಷ್ಠಿತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಓಂ ಕಪ್-2021 ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ತಂಡ ಜಯಿಸಿದೆ.
ಶಿವಮೊಗ್ಗದ ಖುಷಿ ಕಮ್ಯುನಿಕೇಶನ್ಸ್ ಅಜಯ್ ರಾವ್ ಸಾರಥ್ಯದಲ್ಲಿ ಎ‌.ಜೆ‌. ಜೈಕರ್ನಾಟಕ ನಾಮಾಂಕಿತದಲ್ಲಿ
ಕಣಕ್ಕಿಳಿದಿತ್ತು. ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಉಕ್ಕಿನ ಹೊಡೆತಗಳಿಂದ ಮೂಲೆ
ಮೂಲೆಗೂ ಸಿಕ್ಸರ್ ಸಿಡಿಸಿ ರಂಜಿಸಿದ ಉತ್ತಪ್ಪ ಹಾಗೂ ಹ್ಯಾಟ್ರಿಕ್ ಹೀರೋ ಸಚಿನ್ ಮಹಾದೇವ್ ಹಾಗೂ ತಂಡದ ಸದಸ್ಯರ ಸಂಘಟಿತ ಹೋರಾಟದ ಫಲವಾಗಿ ಲೀಗ್ ಹಂತದಲ್ಲಿ ಬಲಾಢ್ಯ ತಂಡಗಳನ್ನು ಮಣಿಸಿ,ಫೈನಲ್ ನಲ್ಲಿ ಆರ್.ಕೆ‌.ಅಘೋರ ತಂಡವನ್ನು ಸೋಲಿಸಿ ಪ್ರತಿಷ್ಠಿತ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಅರ್ಹವಾಗಿ ಫೈನಲ್ ನ ಪಂದ್ಯಶ್ರೇಷ್ಟ ಹಾಗೂ ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್‌ ಪ್ರಶಸ್ತಿ ದಿಲೀಪ್ ಉತ್ತಪ್ಪ ಪಡೆದರೆ,ಸೆಮಿಫೈನಲ್ ಪಂದ್ಯದ ಹ್ಯಾಟ್ರಿಕ್ ಸಹಿತ ಒಟ್ಟು 13 ವಿಕೆಟ್ ಗಳಿಸಿದ ಸಚಿನ್ ಮಹಾದೇವ್ ಬೆಸ್ಟ್ ಬೌಲರ್,ಆರ್.ಕೆ.ಅಘೋರ ತಂಡದ ಶರತ್
ಸರಣಿಶ್ರೇಷ್ಟ,ಒಂದೇ ಓವರ್ ನಲ್ಲಿ ಹ್ಯಾಟ್ರಿಕ್ ಸಹಿತ 5 ವಿಕೆಟ್ ಪಡೆದು ಅಪರೂಪದ ದಾಖಲೆ ಬರೆದ ನವಾಜ್ ಉದಯೋನ್ಮುಖ ಆಟಗಾರ ಪ್ರಶಸ್ತಿ ಗೌರವಕ್ಕೆ ಪಾತ್ರರಾದರು.
ಅತ್ಯುತ್ತಮ ಫಾರ್ಮ್ ನಲ್ಲಿರುವ ಜೈ ಕರ್ನಾಟಕದ ಆಟಗಾರರು ದಾವಣಗೆರೆ ಶಾಮನೂರು ಡೈಮಂಡ್ & ಶಿವಗಂಗಾ ಕಪ್ ನ ರನ್ನರ್ ಅಪ್ ಪ್ರಶಸ್ತಿ, ಕೆ.ಆರ್.ಪುರಂ ನಲ್ಲಿ ನಡೆದ UK 9 ಸ್ಕ್ವೇರ್ ಕಪ್ ನಲ್ಲಿ ರನ್ನರ್ ಅಪ್ ಹಾಗೂ ಭದ್ರಾವತಿಯ ಓಂ ಕಪ್ ಪ್ರಶಸ್ತಿಯ ಸಹಿತ ಸತತ 3 ರಾಜ್ಯಮಟ್ಟದ ಟೂರ್ನಮೆಂಟ್ ನ ಫೈನಲ್ ಪ್ರವೇಶಿಸಿ ಪ್ರಶಸ್ತಿ ಗಳಿಸಿ ದಾಖಲೆ ಬರೆದಿದ್ದಾರೆ.
ಟೂರ್ನಮೆಂಟ್ ನೇರ ಪ್ರಸಾರವನ್ನು M.Sports ಬಿತ್ತರಿಸಿದರೆ,ಹಿರಿಯ ಪ್ರಸಿದ್ಧ ಕಾಮೆಂಟೇಟರ್ ಗಳಾದ ವಿನಯ್ ಉದ್ಯಾವರ ಹಾಗೂ ಪ್ರಶಾಂತ್ ಅಂಬಲಪಾಡಿ ವೀಕ್ಷಕ ವಿವರಣೆ ನಡೆಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen + 10 =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you