12.8 C
London
Tuesday, April 30, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ದಶಕಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮರುಕಳಿಸಲಿದೆಯೇ ಟೆನಿಸ್ಬಾಲ್ ಕ್ರಿಕೆಟ್ ಗತ ವೈಭವ! T.C.A ಪ್ರಾಯೋಜಿತ ಉಡುಪಿ...

ದಶಕಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮರುಕಳಿಸಲಿದೆಯೇ ಟೆನಿಸ್ಬಾಲ್ ಕ್ರಿಕೆಟ್ ಗತ ವೈಭವ! T.C.A ಪ್ರಾಯೋಜಿತ ಉಡುಪಿ ತಾಲ್ಲೂಕು ಮಟ್ಟದ ಟೂರ್ನಮೆಂಟ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಉಡುಪಿ ಜಿಲ್ಲೆಯ ಸಮಾನ ಮನಸ್ಕ ಹಿರಿಯ ಆಟಗಾರರು,
ಕ್ರೀಡಾಪ್ರೋತ್ಸಾಹಕರ ಸಮಾಗಮದಲ್ಲಿ ಇತ್ತೀಚೆಗಷ್ಟೇ ಪ್ರವರ್ಧಮಾನಕ್ಕೆ ಬಂದ ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಥಮಿಕ ಹಂತದ ಯೋಜನೆಯ ರೂಪದಲ್ಲಿ  7 ತಾಲೂಕುಗಳಲ್ಲಿ 7 ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದೆ‌.
ಯೋಜನೆಯಂತೆ ಕಾರ್ಕಳದಲ್ಲಿ ಮೊದಲ ಕ್ರಿಕೆಟ್ ಟೂರ್ನಮೆಂಟ್ ಅತ್ಯಂತ ಶಿಸ್ತು ಹಾಗೂ ಕ್ರಮಬದ್ಧವಾಗಿ ಮುಕ್ತಾಯಗೊಂಡಿರುತ್ತದೆ‌‌‌.ಇದೀಗ ಏಕಕಾಲದಲ್ಲಿ ಬೈಂದೂರಿನಲ್ಲಿ ಹಾಗೂ ಉಡುಪಿಯಲ್ಲಿ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಉಡುಪಿ ತಾಲೂಕು ಪಂದ್ಯಾಟಗಳು 10 ಓವರ್-90 ಗಜಗಳ ಮಾದರಿಯಲ್ಲಿ ಡಿಸೆಂಬರ್ 25 ಮತ್ತು 26 ರಂದು ಮಲ್ಪೆ ಗಾಂಧಿ ಶತಾಬ್ಧಿ ಮೈದಾನ,ಮಿಶನ್ ಕಂಪೌಂಡ್ ಮೈದಾನ ಮತ್ತು ಬೀಡಿನಗುಡ್ಡೆ ಮೈದಾನದಲ್ಲಿ ನಡೆಯಲಿದೆ.
ಅಸೋಸಿಯೇಷನ್ ಪ್ರಾರಂಭದ ಹಂತದ ನೋಂದಣಿ ಪ್ರಕ್ರಿಯೆಯಲ್ಲಿ,ಉಡುಪಿಯಲ್ಲಿ ದ್ವಿತೀಯ ಅತೀ ಹೆಚ್ಚಿನ(200) ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದು,80,90 ರ ದಶಕದಲ್ಲಿ ಉಡುಪಿ ಜಿಲ್ಲೆಯಲ್ಲಿ ಮೆರೆದಾಡಿದ ತಂಡಗಳಾದ
ಪ್ಯಾರಡೈಸ್ ಬನ್ನಂಜೆ,ಕಲಾಕಿರಣ್ ಬೈಲೂರು,ನೇತಾಜಿ ಸ್ಪೋರ್ಟ್ಸ್ ಕ್ಲಬ್,ಸನ್ನಿ ಉಡುಪಿ,ಕೆನರಾ ಕಿನ್ನಿಮುಲ್ಕಿ,ಮಿತ್ರಮಂಡಳಿ ಕಿನ್ನಿಮುಲ್ಕಿ,ಸ್ಪಾರ್ಕ್ ಉಡುಪಿ,ಗುರು ನೇಜಾರ್,ಮಾರುತಿ ಪಡುಕರೆ,ದೊಡ್ಡಣಗುಡ್ಡೆ ಫ್ರೆಂಡ್ಸ್,ಕೆಮ್ಮಣ್ಣು ಕ್ರಿಕೆಟರ್ಸ್,ಯಂಗ್ ಸ್ಟಾರ್ ಮಲ್ಪೆ,ಕ್ಲಾಸಿಕ್ ಕಲ್ಮಾಡಿ,ಸಿಟಿ ಸ್ಪೋರ್ಟ್ಸ್ ಉಡುಪಿ ತಂಡಗಳಲ್ಲಿ
ಈ 200 ಮಂದಿ‌ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯಮಟ್ಟದಲ್ಲಿ ಮಿಂಚಿ ಪ್ರಸ್ತುತ ಅವಕಾಶ ಲಭಿಸದೇ ಇರುವ ಪ್ರತಿಭಾನ್ವಿತ ಆಟಗಾರರು T.C.A ಪಂದ್ಯಾಟದಲ್ಲಿ ಭಾಗವಹಿಸುತ್ತಿರುವುದು ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ.
ಇಂದು ಸಂಜೆ ನಡೆದ ಜೆರ್ಸಿ ಅನಾವರಣ
ಕಾರ್ಯಕ್ರಮದಲ್ಲಿ ಹಿರಿಯ ಆಟಗಾರರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ಯಾದವ್ ನಾಯಕ್ ಕೆಮ್ಮಣ್ಣು,
ಉದಯ್ ಕುಮಾರ್ ಕೆನರಾ,ಪ್ರವೀಣ್ ಕುಮಾರ್ ಬೈಲೂರು,ಡಾ.ವಿನೋದ್,ಸಚ್ಚೀಂದ್ರ ಶೆಟ್ಟಿ,ಪ್ರವೀಣ್ ಪಿತ್ರೋಡಿ,ತಂಡಗಳ ನಾಯಕರು,ಆಟಗಾರರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nine + fifteen =