ಭರವಸೆಯ ಬೆಳಕು"ಜನಪ್ರಿಯ ಕಿಟ್ಟಿ" ಎಂದೇ ಪ್ರಖ್ಯಾತರಾದ ಮಾಜಿ ಕ್ರಿಕೆಟಿಗರು

“ಜನಪ್ರಿಯ ಕಿಟ್ಟಿ” ಎಂದೇ ಪ್ರಖ್ಯಾತರಾದ ಮಾಜಿ ಕ್ರಿಕೆಟಿಗರು

-

- Advertisment -spot_img
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು,ಕೆ.ಪಿ.ಸಿ.ಸಿ ಸದಸ್ಯರು,ಕ್ರೀಡಾ ಪ್ರೋತ್ಸಾಹಕರು*

“ಜನಪ್ರಿಯ ಕಿಟ್ಟಿ” ಎಂದೇ ಪ್ರಖ್ಯಾತರಾದ ಮಾಜಿ ಕ್ರಿಕೆಟಿಗರು ಶ್ರೀ.ಪಿ.ಎನ್.ಕೃಷ್ಣಮೂರ್ತಿಯವರಿಗೆ ರಾಜ್ಯ ಟೆನಿಸ್ ಕ್ರಿಕೆಟ್ ಹಾಗೂ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ ಪರವಾಗಿ ಹುಟ್ಟು ಹಬ್ಬದ ಹಾರ್ದಿಕ

ಶುಭಾಶಯಗಳು

.

80-90 ರ ದಶಕದಲ್ಲಿ ಬೆಂಗಳೂರಿನ ಪೀಣ್ಯ ಪರಿಸರದ ಪ್ರತಿಬಿಂಬ ಹವ್ಯಾಸಿ ರಂಗ ಹಾಗೂ ರಾಘವೇಂದ್ರ ಕ್ರಿಕೆಟರ್ಸ್ ತಂಡದ ಮೂಲಕಪಿ.ಎನ್‌.ಕೃಷ್ಣಮೂರ್ತಿಯವರು ಕ್ರಿಕೆಟ್ ಜೀವನ ಪ್ರಾರಂಭಿಸಿದ್ದರು.ತದನಂತರದ ದಿನಗಳಲ್ಲಿ ರಾಜ್ಯದ ಪ್ರಸಿದ್ಧ ತಂಡ ಜನಪ್ರಿಯ ಕರ್ನಾಟಕ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ದೊಡ್ಡಗಣೇಶ್ ರಂತಹ ಅಂತರಾಷ್ಟ್ರೀಯ ಆಟಗಾರರನ್ನು,ಮೂವರು ಸಹೋದರ ಜೋಡಿಗಳಾದ ಬಾಬು,ರಾಧಾಕೃಷ್ಣ,ಶ್ರೀನಿವಾಸ್, ಗೋವಿಂದರಾಜು,ರಂಗರಾಜು, ಸತ್ಯಪ್ರಕಾಶ್ ರಂತಹ ಮೇರು ಕ್ರಿಕೆಟಿಗರನ್ನು ರಾಜ್ಯಕ್ಕೆ ಪರಿಚಯಿಸಿ ಹಲವಾರು ಪ್ರತಿಷ್ಟಿತ ಪ್ರಶಸ್ತಿಗಳನ್ನು ಜಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ತನ್ನ ಸ್ಪೋಟಕ ದಾಂಡಿಗತನದ ಮೂಲಕ ಗುರುತಿಸಿಕೊಂಡಿದ್ದ ಇವರು ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪಂದ್ಯವೊಂದರಲ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿದು ಬಿರುಸಿನ‌ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದರು‌.ಇದಲ್ಲದೇ ಚಮಕ್ ಬೆಂಗಳೂರು, ಶ್ರೀ ಬೆಂಗಳೂರು ಹೀಗೆ ಹೆಚ್ಚಿನ ತಂಡಗಳನ್ನು ಹಲವಾರು ವರ್ಷಗಳ ಕಾಲ ಮುನ್ನಡೆಸಿದ್ದರು.ಪ್ರಸ್ತುತ ಪಿ‌.ಎನ್‌.ಕೆ.ಬಾಯ್ಸ್ ತಂಡವನ್ನು ಕಟ್ಟಿ ಯುವ ಪ್ರತಿಭೆಗಳಿಗೆ ಅವಕಾಶವನ್ನು ಒದಗಿಸಿಕೊಟ್ಟಿದ್ದಾರೆ.
ಕ್ರೀಡಾಜೀವನದುದ್ದಕ್ಕೂ ಯಶಸ್ವಿ ನಾಯಕರಾಗಿ ಗುರುತಿಸಿಕೊಂಡ ಪಿ.ಎನ್.ಕೃಷ್ಣಮೂರ್ತಿ ಯವರು
ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನಕ್ಕೆ ಎಂಟ್ರಿ ಕೊಟ್ಟಿದ್ದರು‌.ಜನಸೇವೆಯೇ ಜನಾರ್ಧನ ಸೇವೆ ಎಂಬಂತೆ ಹಗಲಿರುಳು ದಾಸರಹಳ್ಳಿ ಕ್ಷೇತ್ರದ ಜನರಿಗಾಗಿ ಶ್ರಮಿಸಿ ಪ್ರಭಾವಿ ರಾಜಕೀಯ ವ್ಯಕ್ತಿಯಾಗಿ ಪ್ರಸಿದ್ಧಿ ಗಳಿಸಿದ್ದು,2020 ರ ಈ ವರ್ಷಪೂರ್ತಿ ಕೋವಿಡ್ ಸಂತ್ರಸ್ತರಿಗೆ ನೆರಳಾಗಿ ನಿಂತು ದಿನನಿತ್ಯದ ಅಗತ್ಯತೆಗಳನ್ನು ಒದಗಿಸಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜನರ ನೆಚ್ಚಿನ ಜನನಾಯಕರಾಗಿ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಏಪ್ರಿಲ್‌ನಲ್ಲಿ ಆಯೋಜಿಸಿದ್ದ,
ಲೆಜೆಂಡ್ಸ್ ಕಪ್-2021 ನ ಪ್ರಥಮ ಪ್ರಶಸ್ತಿಯನ್ನು ಪ್ರಾಯೋಜಿಸಿ,ಸಕುಟುಂಬ ಸಮೇತ ಕುಂದಾಪುರಕ್ಕೆ ಆಗಮಿಸಿ,ಶ್ರೀ ಬೆಂಗಳೂರು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ,ಯುಗಾಂತರ ಕಾರ್ಯಕ್ರಮ ಮತ್ತು ಲೆಜೆಂಡ್ಸ್ ಕಪ್ ಸಮಾರೋಪ ಸಮಾರಂಭದ ಸಭಾಧ್ಯಕ್ಷರಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two + six =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you